Friday, September 27, 2024
Friday, September 27, 2024

Assembly Election ಚಿಕ್ಕಮಗಳೂರಿನಲ್ಲಿ ಜೆಡಿಯುನಿಂದ ಕಾಂಗ್ರೆಸ್ ಗೆ ಮುಖಂಡರ ಸೇರ್ಪಡೆ

Date:

Assembly Election ಚಿಕ್ಕಮಗಳೂರು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜೆಡಿಯು ಮಾಜಿ ಜಿಲ್ಲಾಧ್ಯಕ್ಷ ಕೆ.ಭರತ್ ಸೇರಿದಂತೆ ವಿವಿಧ ಪಕ್ಷದ ಮುಖಂಡರುಗಳು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಹಾಗೂ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಅಧಿಕೃತವಾಗಿ ಶುಕ್ರವಾರ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು.

ಈ ವೇಳೆ ಮಾತನಾಡಿದ ಕೆ.ಭರತ್ ಜನಪರವಾಗಿ ಹಲವಾರು ವರ್ಷಗಳಿಂದ ಸವಾಲುಗಳನ್ನು ಎದುರಿಸುತ್ತಾ ನೊಂದವರ ಪರ ಹೋರಾಟ ಮಾಡಲಾಗುತ್ತಿತ್ತು. ಆದರೆ ಕೊನೆಯ ಸಮಯದಲ್ಲಿ ಬಿಜೆಪಿಯ ಕೆಲವರು ನ್ಯಾಯ ಪರವಾದ ಹೋರಾಟವನ್ನು ಸಹಿಸಲಾರದೇ ತಮ್ಮ ಮೇಲೆ ಮೊಖದ್ದಮೆ ದಾಖಲಿಸುತ್ತಿದ್ದರು ಎಂದರು.

ಇಷ್ಟೆಲ್ಲಾ ಸಾಮಾಜಿಕ ಕಳಕಳಿಯನ್ನು ಜೀವನದಲ್ಲಿ ಅಳವಡಿಸಿಕೊಂಡು ಸಾರ್ವಜನಿಕರ ಸೇವೆಗೆ ತಮ್ಮನ್ನು ತಾವು ಸಮರ್ಪಣೆ ಮಾಡಿಕೊಳ್ಳಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಸ್ವಲ್ಪ ಸಮಯ ರಾಜಕೀಯದಿಂದ ದೂರವಿದ್ದು ಇದೀಗ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದೇನೆ. ಇನ್ನೂ ಮುಂದಿನ ದಿನಗಳಲ್ಲಿ ಪಕ್ಷವನ್ನು ಕ್ಷೇತ್ರದಲ್ಲಿ ಹೆಚ್ಚಿನ ಮಟ್ಟದಲ್ಲಿ ಸಂಘಟಿಸಲು ಪ್ರಯತ್ನಿಸಲಾಗುವುದು ಎಂದರು.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರವಾಗಿ ಅತ್ಯಂತ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುವ ಜೊತೆಗೆ ಮತದಾನ ಕೊನೆಯ ದಿನದವರೆಗೂ ಚುರುಕಿನಿಂದ ಕೆಲಸ ಮಾಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ತರಲು ಸನ್ನದ್ದರಾಗಿರುವುದಾಗಿ ತಿಳಿಸಿದರು.

Assembly Election ಇದೇ ವೇಳೆ ಆಮ್‌ಆದ್ಮಿ, ಬಿಎಸ್ಪಿ ಸೇರಿದಂತೆ ವಿವಿಧ ಪಕ್ಷದ ಮುಖಂಡರುಗಳು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತವನ್ನು ಒಪ್ಪಿಕೊಂಡು ಕಾಂಗ್ರೆಸ್ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸAದೀಪ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ|| ಅಂಶುಮAತ್, ಉಪಾಧ್ಯಕ್ಷ ಕೆ.ಎಸ್.ಶಾಂತೇಗೌಡ, ಮಾಜಿ ಅಧ್ಯಕ್ಷ ಡಾ|| ಡಿ.ಎಲ್.ವಿಜಯ್ ಕುಮಾರ್, ಎಂ.ಎಲ್.ಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ, ಜಿ.ಪಂ. ಮಾಜಿ ಅಧ್ಯಕ್ಷರಾದ ಎ.ಎನ್.ಮಹೇಶ್, ಕೆ.ಮಹಮ್ಮದ್, ವಕ್ತಾರ ರೂಬೆನ್ ಮೋಸಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hassan Manikya Prakashana ಶಿವಮೊಗ್ಗದ ಕವಿ ಶಿ.ಜು.ಪಾಶಾ ಅವರಿಗೆ “ಜನ್ನ ಕಾವ್ಯ ಪ್ರಶಸ್ತಿ”

Hassan Manikya Prakashana ಹಾಸನದ ಮಾಣಿಕ್ಯ ಪ್ರಕಾಶನ(ರಿ) ರಾಜ್ಯಮಟ್ಟದ ಜನ್ನ ಕಾವ್ಯ...

Vajreshwari Co Operative Society ಶ್ರೀವಜ್ರೇಶ್ವರಿ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ

Vajreshwari Co Operative Society ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ...

Inner Wheel Shivamogga ದುರ್ಬಲರಿಗೆ ನೆರವು ನೀಡಿದಾಗ ಸೇವೆ ಸಾರ್ಥಕ- ಶಿಲ್ಪ ಗೋಪಿನಾಥ್

Inner Wheel Shivamogga ನಾವು ಮಾಡುವ ಸೇವೆ ಸಾರ್ಥಕಗೊಳ್ಳಬೇಕಾದರೆ...

National Education Committee ಬೆಳಗುತ್ತಿ & ಮಲ್ಲಿಗೇನಹಳ್ಳಿಯಲ್ಲಿ ಗಮನ ಸೆಳೆದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

National Education Committee ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿರಂಗಪ್ರಯೋಗದ...