Monday, February 2, 2026
Monday, February 2, 2026

Assembly Election ಶಿವಮೊಗ್ಗದಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮ

Date:

Assembly Election ಶಿವಮೊಗ್ಗದಲ್ಲಿ ಮತದಾನ ಜಾಗೃತಿಗಾಗಿ ಏ.30ರಂದು ರಾಜ್ಯಾದ್ಯಂತ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದಡಿ ಏಕಕಾಲಕ್ಕೆ ಧ್ವಜಾರೋಹಣ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 2018ರ ಚುನಾವಣೆಯಲ್ಲಿ ಕಡಿಮೆ ಮತದಾನ ಆಗಿರುವ ಮತಗಟ್ಟೆಗಳಲ್ಲಿ ಏ.30 ರ ಬೆಳಿಗ್ಗೆ 8 ಗಂಟೆಗೆ ಧ್ವಜಾರೋಹಣ ಆಯೋಜಿಸಲಾಗಿದೆ.

ಬಿಳಿ ಬಟ್ಟೆಯ ಮೇಲೆ ರಾಜ್ಯದ ನಕ್ಷೆ ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ಎಂಬ ಬರಹ ಹಾಗೂ ಎಲೆಕ್ಷನ್ ಕಮಿಷನ್ ಆಫ್ ಇಂಡಿಯಾ ಹಾಗೂ ಚಿನ್ನೆ ಇರುವ ವಿಶೇಷ ಧ್ವಜದ ಮಾದರಿ ಸಿದ್ಧಪಡಿಸಿ ಸ್ವೀಪ್ ಕಮಿಟಿಗಳಿಗೆ ಕಳಿಸಲಾಗಿದೆ.

Assembly Election ಏ.30 ಬಿಎಲ್‍ಒಗಳು ಧ್ವಜಾರೋಹಣ ನೆರವೇರಿಸಲಿದ್ದು, ಮತಗಟ್ಟೆ, ಗ್ರಾಪಂ ಅಧಿಕಾರಿ, ಸಿಬ್ಬಂದಿ, ಆಶಾ, ಅಂಗನವಾಡಿ, ಕಾರಕರ್ತೆಯರು ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಯಾವುದೇ ರಾಜಕೀಯ ಪ್ರೇರಿತ ಅಥವಾ ಸಂಬಂಧಿತ ವ್ಯಕ್ತಿಗಳು ಭಾಗವಹಿಸುವುದಕ್ಕೆ ಅವಕಾಶವಿರುವುದಿಲ್ಲ.

ಆಯೋಗದ ರಾಜ್ಯ, ಜಿಲ್ಲಾ ರಾಯಭಾರಿಗಳಾಗಿರುವ ಸೆಲೆಬ್ರಿಟಿಗಳ ನೆರವಿನೊಂದಿಗೆ ಜಾಥಾ, ರಂಗೋಲಿ, ಬೈಕ್ ಜಾಥಾ ಇತ್ಯಾದಿಗಳ ಮೂಲಕ ಮತದಾರರಲ್ಲಿ ಕಡ್ಡಾಯ ಮತದಾನದ ಬಗ್ಗೆ ಅರಿವು ಮೂಡಿಸಲಾಗುತ್ತಿದ್ದು ಸಖಿ, ಅಂಗವಿಕಲ, ಯುವ ಮತದಾರರು ಹಾಗೂ ಪರಂಪರೆ ಮತಗಟ್ಟೆಗಳನ್ನೂ ಸ್ಥಾಪಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...