Thursday, June 18, 2026
Thursday, June 18, 2026

Assembly Election ಶಿವಮೊಗ್ಗದಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮ

Date:

Assembly Election ಶಿವಮೊಗ್ಗದಲ್ಲಿ ಮತದಾನ ಜಾಗೃತಿಗಾಗಿ ಏ.30ರಂದು ರಾಜ್ಯಾದ್ಯಂತ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದಡಿ ಏಕಕಾಲಕ್ಕೆ ಧ್ವಜಾರೋಹಣ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 2018ರ ಚುನಾವಣೆಯಲ್ಲಿ ಕಡಿಮೆ ಮತದಾನ ಆಗಿರುವ ಮತಗಟ್ಟೆಗಳಲ್ಲಿ ಏ.30 ರ ಬೆಳಿಗ್ಗೆ 8 ಗಂಟೆಗೆ ಧ್ವಜಾರೋಹಣ ಆಯೋಜಿಸಲಾಗಿದೆ.

ಬಿಳಿ ಬಟ್ಟೆಯ ಮೇಲೆ ರಾಜ್ಯದ ನಕ್ಷೆ ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ಎಂಬ ಬರಹ ಹಾಗೂ ಎಲೆಕ್ಷನ್ ಕಮಿಷನ್ ಆಫ್ ಇಂಡಿಯಾ ಹಾಗೂ ಚಿನ್ನೆ ಇರುವ ವಿಶೇಷ ಧ್ವಜದ ಮಾದರಿ ಸಿದ್ಧಪಡಿಸಿ ಸ್ವೀಪ್ ಕಮಿಟಿಗಳಿಗೆ ಕಳಿಸಲಾಗಿದೆ.

Assembly Election ಏ.30 ಬಿಎಲ್‍ಒಗಳು ಧ್ವಜಾರೋಹಣ ನೆರವೇರಿಸಲಿದ್ದು, ಮತಗಟ್ಟೆ, ಗ್ರಾಪಂ ಅಧಿಕಾರಿ, ಸಿಬ್ಬಂದಿ, ಆಶಾ, ಅಂಗನವಾಡಿ, ಕಾರಕರ್ತೆಯರು ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಯಾವುದೇ ರಾಜಕೀಯ ಪ್ರೇರಿತ ಅಥವಾ ಸಂಬಂಧಿತ ವ್ಯಕ್ತಿಗಳು ಭಾಗವಹಿಸುವುದಕ್ಕೆ ಅವಕಾಶವಿರುವುದಿಲ್ಲ.

ಆಯೋಗದ ರಾಜ್ಯ, ಜಿಲ್ಲಾ ರಾಯಭಾರಿಗಳಾಗಿರುವ ಸೆಲೆಬ್ರಿಟಿಗಳ ನೆರವಿನೊಂದಿಗೆ ಜಾಥಾ, ರಂಗೋಲಿ, ಬೈಕ್ ಜಾಥಾ ಇತ್ಯಾದಿಗಳ ಮೂಲಕ ಮತದಾರರಲ್ಲಿ ಕಡ್ಡಾಯ ಮತದಾನದ ಬಗ್ಗೆ ಅರಿವು ಮೂಡಿಸಲಾಗುತ್ತಿದ್ದು ಸಖಿ, ಅಂಗವಿಕಲ, ಯುವ ಮತದಾರರು ಹಾಗೂ ಪರಂಪರೆ ಮತಗಟ್ಟೆಗಳನ್ನೂ ಸ್ಥಾಪಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...