Wednesday, September 16, 2026
Wednesday, September 16, 2026

Assembly Election ಶಿವಮೊಗ್ಗದಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮ

Date:

Assembly Election ಶಿವಮೊಗ್ಗದಲ್ಲಿ ಮತದಾನ ಜಾಗೃತಿಗಾಗಿ ಏ.30ರಂದು ರಾಜ್ಯಾದ್ಯಂತ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದಡಿ ಏಕಕಾಲಕ್ಕೆ ಧ್ವಜಾರೋಹಣ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 2018ರ ಚುನಾವಣೆಯಲ್ಲಿ ಕಡಿಮೆ ಮತದಾನ ಆಗಿರುವ ಮತಗಟ್ಟೆಗಳಲ್ಲಿ ಏ.30 ರ ಬೆಳಿಗ್ಗೆ 8 ಗಂಟೆಗೆ ಧ್ವಜಾರೋಹಣ ಆಯೋಜಿಸಲಾಗಿದೆ.

ಬಿಳಿ ಬಟ್ಟೆಯ ಮೇಲೆ ರಾಜ್ಯದ ನಕ್ಷೆ ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ಎಂಬ ಬರಹ ಹಾಗೂ ಎಲೆಕ್ಷನ್ ಕಮಿಷನ್ ಆಫ್ ಇಂಡಿಯಾ ಹಾಗೂ ಚಿನ್ನೆ ಇರುವ ವಿಶೇಷ ಧ್ವಜದ ಮಾದರಿ ಸಿದ್ಧಪಡಿಸಿ ಸ್ವೀಪ್ ಕಮಿಟಿಗಳಿಗೆ ಕಳಿಸಲಾಗಿದೆ.

Assembly Election ಏ.30 ಬಿಎಲ್‍ಒಗಳು ಧ್ವಜಾರೋಹಣ ನೆರವೇರಿಸಲಿದ್ದು, ಮತಗಟ್ಟೆ, ಗ್ರಾಪಂ ಅಧಿಕಾರಿ, ಸಿಬ್ಬಂದಿ, ಆಶಾ, ಅಂಗನವಾಡಿ, ಕಾರಕರ್ತೆಯರು ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಯಾವುದೇ ರಾಜಕೀಯ ಪ್ರೇರಿತ ಅಥವಾ ಸಂಬಂಧಿತ ವ್ಯಕ್ತಿಗಳು ಭಾಗವಹಿಸುವುದಕ್ಕೆ ಅವಕಾಶವಿರುವುದಿಲ್ಲ.

ಆಯೋಗದ ರಾಜ್ಯ, ಜಿಲ್ಲಾ ರಾಯಭಾರಿಗಳಾಗಿರುವ ಸೆಲೆಬ್ರಿಟಿಗಳ ನೆರವಿನೊಂದಿಗೆ ಜಾಥಾ, ರಂಗೋಲಿ, ಬೈಕ್ ಜಾಥಾ ಇತ್ಯಾದಿಗಳ ಮೂಲಕ ಮತದಾರರಲ್ಲಿ ಕಡ್ಡಾಯ ಮತದಾನದ ಬಗ್ಗೆ ಅರಿವು ಮೂಡಿಸಲಾಗುತ್ತಿದ್ದು ಸಖಿ, ಅಂಗವಿಕಲ, ಯುವ ಮತದಾರರು ಹಾಗೂ ಪರಂಪರೆ ಮತಗಟ್ಟೆಗಳನ್ನೂ ಸ್ಥಾಪಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...