Thursday, March 19, 2026
Thursday, March 19, 2026

Voters Awareness ಮತದಾನದಲ್ಲಿ ಶಿವಮೊಗ್ಗ ಜಿಲ್ಲೆಯನ್ನ ನಂ 1 ಮಾಡೋಣ‌ಅಭಿಯಾನ

Date:

Voters Awareness ವಿಧಾನಸಭಾ ಚುನಾವಣೆ ಮೇ 10 ರಂದು ನಡೆಯಲಿದೆ. ಜನರು ತಮ್ಮ ಅಮೂಲ್ಯ ಮತವನ್ನು ತಮಗಿಷ್ಟವಾದ ಅಭ್ಯರ್ಥಿಗೆ ನೀಡುತ್ತಾರೆ.ಆದರೆ, ಕೆಲವೊಬ್ಬರು ತಮ್ಮ ಮತವನ್ನು ಚಲಾಯಿಸುವುದಿಲ್ಲ. ಹೀಗಿರುವಾಗ ಅವರಲ್ಲಿ ಮತ ಜಾಗೃತಿ ಮೂಡಿಸುವಂತಹ ಕೆಲಸಗಳು ಅಗತ್ಯ. ಇದೇ ನಿಟ್ಟಿನಲ್ಲಿ ಸಮನ್ವಯ ಟ್ರಸ್ಟ್
ತನ್ನ ಕೆಲಸವನ್ನು ನಿರ್ವಹಿಸುತ್ತಿದೆ.

ಸಮನ್ವಯ ಟ್ರಸ್ಟ್ ವತಿಯಿಂದ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು. ಈ ಅಭಿಯಾನದಲ್ಲಿ ನಾವು ಮತ ಚಲಾಯಿಸೋಣ ಶಿವಮೊಗ್ಗ ಜಿಲ್ಲೆ ನಂ1 ಮಾಡೋಣ ಎಂಬ ನಿರ್ಣಯವನ್ನು ತೆಗೆದುಕೊಳ್ಳಲಾಯಿತು.

ಕಾರ್ಯಕ್ರಮವು ಶಿವಮೊಗ್ಗದ ಡಿ ಆರ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಡಿ ವೈ ಎಸ್ ಪಿ ಬಾಲರಾಜ್ ಅವರು ನೆರವೇರಿಸಿದರು.

 ಈ ಸಂದರ್ಭದಲ್ಲಿ ಮಾತನಾಡಿದ ಅವರು, 2023ರ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯು ಶೇಕಡವಾರು ಮತದಾನ ಪ್ರಮಾಣದಲ್ಲಿ ನಂಬರ್ 1 ಸ್ಥಾನ ಆಗುವಂತೆ ಜಿಲ್ಲೆಯ ಎಲ್ಲ ಮತದಾರರು ಮತದಾನ ಮಾಡಬೇಕು ಎಂದು ಡಿವೈಎಸ್‌ಪಿ ಬಾಲರಾಜ್ ಹೇಳಿದರು.

ಶಿವಮೊಗ್ಗ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಸುರೇಶ್ ಮಾತನಾಡಿ, ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯ. ಉತ್ತಮ ಜನಪ್ರತಿನಿಧಿಗಳ ಆಯ್ಕೆ ಮಾಡಬೇಕು. ಪ್ರತಿಯೊಬ್ಬರು ಮತದಾನ ಮಾಡುವ ಜತೆಯಲ್ಲಿ ಕುಟುಂಬ ಎಲ್ಲ ಅರ್ಹ ಮತದಾರರು ಮತದಾನ ಮಾಡುವಂತೆ ಹೇಳಬೇಕು. ಸಂಘಟಿತ ಪ್ರಯತ್ನ ನಡೆಸಿದಲ್ಲಿ ಶಿವಮೊಗ್ಗ ಜಿಲ್ಲೆಯು ಅತಿ ಹೆಚ್ಚು ಪ್ರಮಾಣದಲ್ಲಿ ಮತದಾನ ಮಾಡಿದ ಜಿಲ್ಲೆ ಆಗಲಿದೆ ಎಂದರು.

Voters Awareness ಕಾರ್ಯಕ್ರಮದಲ್ಲಿ ಸಮನ್ವಯ ಟ್ರಸ್ಟ್ ನಿರ್ವಾಹಕ ನಿರ್ದೇಶಕರಾದ ಸಮನ್ವಯ ಕಾಶಿ, ಮತ್ತು ಸಮನ್ವಯದ ಎಲ್ಲಾ ಸ್ವಯಂಸೇವಕರು, ವಿವಿಧ ತಾಲೂಕಿನಿಂದ ಬಂದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...