Thursday, March 19, 2026
Thursday, March 19, 2026

K B Ashoka Nayak ರಾಜ್ಯ ಮತ್ತು ಕೇಂದ್ರದ ಬಿಜೆಪಿ‌ ಸರ್ಕಾರಗಳಿಂದ ಅಭಿವೃದ್ಧಿಕಾರ್ಯಗಳಾಗಿವೆ- ಅಶೋಕ ನಾಯಕ್

Date:

K B Ashoka Nayak ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕುಂಸಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ವಿವಿಧ ಬೂತ್‌ಗಳಲ್ಲಿ ಬಿಜೆಪಿ ಗ್ರಾಮಾಂತರ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಪ್ರಚಾರ ಕಾರ್ಯ ನಡೆಸಿದರು.

ನೂರಾರು ಕಾರ್ಯಕರ್ತರು ಪ್ರತಿ ಬೂತ್, ಗ್ರಾಮದ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡಿದ್ದರು.

ಶಾಂತಿಪುರ ಗ್ರಾಮದಲ್ಲಿ ವಿವಿಧ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ ನಾಯ್ಕ ಸಮ್ಮುಖದಲ್ಲಿ ಸೇರ್ಪಡೆಗೊಂಡರು.

ಪುರದಾಳು, ಹನುಮಂತಪುರ, ಮಂಜರಿಕೊಪ್ಪ ಸೇರಿದಂತೆ ವಿವಿಧ ಗ್ರಾಮಗಳಲ್ಲಿನ ಪ್ರಚಾರ ಕಾರ್ಯದಲ್ಲಿ ನೂರಾರು ಕಾರ್ಯಕರ್ತರು ಪಾಲ್ಗೊಂಡು ಬೆಂಬಲ ಸೂಚಿಸಿದರು.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಮಾತನಾಡಿ, ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳು ಹೆಚ್ಚಿನ ಅನುದಾನ ನೀಡಿದ ಪರಿಣಾಮ ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಅಧಿಕ ಪ್ರಮಾಣದಲ್ಲಿ ನಡೆದಿದೆ. 5 ವರ್ಷಗಳ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳೇ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಕಾರಣ ಆಗಲಿದೆ ಎಂದು ತಿಳಿಸಿದರು.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕುಂಸಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ವಿವಿಧ ಬೂತ್‌ಗಳಲ್ಲಿ ಪ್ರಚಾರ ಕಾರ್ಯ ನಡೆಸಿ ಬಿಜೆಪಿ ಬೆಂಬಲಿಸುವ ಜತೆಯಲ್ಲಿ ಅಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು. ಪುರದಾಳು ವ್ಯಾಪ್ತಿಯಲ್ಲಿ ಕೋಟ್ಯಾಂತರ ರೂ. ಅನುದಾನದ ಮೂಲಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಈ ಬಾರಿಯು ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದರು.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕುಂಸಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಶಾಂತಿಪುರ, ಪುರದಾಳು, ಮಂಜರಿಕೊಪ್ಪ, ಕಲ್ಕೊಪ್ಪ, ಕೂಡಿ, ಆಡಿನಕೊಟ್ಟಿಗೆ, ದೊಡ್ಡಿಮಟ್ಟಿ, ಶೆಟ್ಟಿಕೆರೆ, ರೇಚಿಕೊಪ್ಪ ಗ್ರಾಮಗಳಲ್ಲಿ ಪ್ರಚಾರ ಕಾರ್ಯ ನಡೆಸಿದರು.

K B Ashoka Nayak ನೂರಾರು ಕಾರ್ಯಕರ್ತರು, ಗ್ರಾಮಸ್ಥರು ಆಗಮಿಸಿದ್ದರು.
ಕ್ಷೇತ್ರ ಪ್ರಭಾರಿ ಎಸ್.ದತ್ತಾತ್ರಿ, ಮಂಡಲ ಅಧ್ಯಕ್ಷ ರತ್ನಾಕರ ಶೆಣೈ, ಮಂಜುನಾಥ್ ಕಲ್ಲಜ್ಜನಾಳ್, ಗ್ರಾಮಾಂತರ ಚುನಾವಣಾ ಸಮಿತಿ ಸಂಚಾಲಕ ಸಿಂಗನಹಳ್ಳಿ ಸುರೇಶ್, ಸ್ವರೂಪ್ ಸೇರಿದಂತೆ ವಿವಿಧ ಸಮಿತಿ ಮುಖಂಡರು ಗ್ರಾಮಾಂತರ ಕಾರ್ಯಾಲಯದಲ್ಲಿ ಸಭೆ ನಡೆಸಿದರು.

ಆಯನೂರು ಕುಂಸಿ ಭಾಗದ ಪ್ರಚಾರ ಕಾರ್ಯದಲ್ಲಿ ತಮ್ಮಡಿಹಳ್ಳಿ ನಾಗರಾಜ್, ಜಗದೀಶ್, ಉದಯ್ ಸೇರಿದಂತೆ ಮಹಾಶಕ್ತಿ ಕೇಂದ್ರದ ಪ್ರಮುಖರು, ನೂರಾರು ಕಾರ್ಯಕರ್ತರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...