Friday, April 18, 2025
Friday, April 18, 2025

Online Application Invitation ಅನುದಾನ ರಹಿತ ಕಾಲೇಜು ಆರಂಭಿಸಲು ಅನುಮತಿಗೆ ಕುವೆಂಪು ವಿವಿಯಿಂದ ಆನ್ ಲೈನ್ ಅರ್ಜಿ ಆಹ್ವಾನ

Date:


Online Application Invitation ಕುವೆಂಪು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ 2023-24 ನೇ ಶೈಕ್ಷಣಿಕ ಸಾಲಿನಿಂದ ಹೊಸದಾಗಿ ಕಲಾ, ವಿಜ್ಞಾನ, ವಾಣಿಜ್ಯ, ಆಡಳಿತ ನಿರ್ವಹಣೆ, ದೈಹಿಕ ಶಿಕ್ಷಣ, ಬಿ.ವೋಕ್ ವೃತ್ತಿಪರ ವಿಷಯಗಳು ಹಾಗೂ ಡಿಪ್ಲೋಮಾ ಕೋರ್ಸ್ ವಿಷಯಗಳ ಪದವಿ ಕಾಲೇಜುಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರದ ಅನುದಾನವಿಲ್ಲದೆ ನಡೆಸಲು ಆರ್ಥಿಕ ಸಾಮರ್ಥ್ಯವುಳ್ಳ ನೋಂದಾಯಿತ ಶೈಕ್ಷಣಿಕ ಸೊಸೈಟಿ, ಸಾರ್ವಜನಿಕ ಟ್ರಸ್ಟ್/ ಸಂಸ್ಥೆ ಗಳಿಂದ ನವೀನ ಸಂಯೋಜನೆಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನೋಂದಾಯಿತ ಶೈಕ್ಷಣಿಕ ಸೊಸೈಟಿ, ಸಾರ್ವಜನಿಕ ಟ್ರಸ್ಟ್/ ಸಂಸ್ಥೆಗಳಿಂದ ನವೀನ ಸಂಯೋಜನೆಗಾಗಿ ಅರ್ಜಿಗಳನ್ನು UUCMS  ತಂತ್ರಾAಶದಲ್ಲಿ http://uucms.karnataka.gov.in ಮೂಲಕ ಸಲ್ಲಿಸಿ, ನಂತರ ಡೌನ್‌ಲೋಡ್ ಮಾಡಿಕೊಂಡ ಹಾರ್ಡ್ ಪ್ರತಿಯನ್ನು ಪೂರಕ ದಾಖಲೆಗಳೊಂದಿಗೆ ದ್ವಿಪ್ರತಿಯಲ್ಲಿ ನಿರ್ದೇಶಕರು, ಕಾಲೇಜು ಅಭಿವೃದ್ಧಿ ಪರಿಷತ್ ವಿಭಾಗ,  ಕುವೆಂಪು ವಿಶ್ವವಿದ್ಯಾನಿಲಯ, ಜ್ಞಾನಸಹ್ಯಾದ್ರಿ, ಶಂಕರಘಟ್ಟ-577451 ಇವರಿಗೆ ಸಲ್ಲಿಸಬೇಕು. 


Online Application Invitation ದಂಡಶುಲ್ಕವಿಲ್ಲದೆ ಮೇ-13 ರೊಳಗಾಗಿ ಹಾಗೂ ರೂ. 15,000 ದಂಡಶುಲ್ಕದೊAದಿಗೆ ಮೇ 15ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಪರಿಷ್ಕೃತ ಸಂಯೋಜನೆ ಶುಲ್ಕವನ್ನು UUCMS ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಹಣಕಾಸು ಅಧಿಕಾರಿಗಳು, ಕುವೆಂಪು ವಿವಿ, ಶಂಕರಘಟ್ಟ, ಸಂಯೋಜನಾ ಖಾತೆ ಸಂ.: 54023035811 ಎಸ್.ಬಿ.ಐ, ಜ್ಞಾನ ಸಹ್ಯಾದ್ರಿ ಶಾಖೆ, ಶಂಕರಘಟ್ಟ, ಇಲ್ಲಿಗೆ ಜಮಾ ಮಾಡುವಂತೆ ಕುಲಸಚಿವರು, ಕುವೆಂಪು ವಿಶ್ವವಿದ್ಯಾಲಯ, ಜ್ಞಾನಸಹ್ಯಾದ್ರಿ, ಶಂಕರಘಟ್ಟ 577451 ಶಿವಮೊಗ್ಗ ಜಿಲ್ಲೆ. ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮಾಹಿತಿಗಳನ್ನು ವಿಶ್ವವಿದ್ಯಾಲಯದ ಸಿಬ್ಬಂದಿ ಡಾ.ಕೆ.ಎನ್.ಶ್ರೀಕಾಂತ್ -9980377886 ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...

ದತ್ತಿ ನಿಧಿ ಕಾರ್ಯಕ್ರಮಗಳು ಸಮಾಜಮುಖಿಯಾಗಿರಲಿ-ಮಾನಸ ಶಿವರಾಮಕೃಷ್ಣ

ವಮೊಗ್ಗ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದಿಂದ ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು....