Sunday, May 3, 2026
Sunday, May 3, 2026

Voter Awareness in Holaluru ಹೊಳಲೂರಿನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Date:

Voter Awareness in Holaluru ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಹೊಳಲೂರುನಲ್ಲಿ ದಿನಾಂಕ: ಮೇ 5 ರಂದು ಚುನಾವಣಾ ಅರಿವು ಮತ್ತು ಮತದಾನ ಜಾಗೃತಿ ಕಾರ‍್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ‍್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀಮತಿ ಶಹಿದ ಚೀಫ್ ಪ್ಲಾನಿಂಗ್ ಆಫೀಸರ್ ಜಿಲ್ಲಾ ಪಂಚಾಯತ್ ಶಿವಮೊಗ್ಗ ಆಗಮಿಸಿದ್ದರು. ಕಾರ‍್ಯಕ್ರಮದಲ್ಲಿ ಮತದಾನದ ಬಗ್ಗೆ ಜಾಗೃತಿ ಮತ್ತು ಅರಿವಿನ ಬಗ್ಗೆ ಮಾಹಿತಿ ನೀಡಿದರು. ಇನ್ನೋರ್ವ ಮುಖ್ಯ ಅತಿಥಿಯಾಗಿ ಶ್ರೀ. ಯತೀಶ್ ದೇವಯ್ಯ ಲೀಡ್ ಡಿಸ್ಟ್ರಿಕ್ಟ್ ಡಿವಿಜನಲ್ ಮ್ಯಾನೇಜರ್ ಶಿವಮೊಗ್ಗ ಇವರು ಭಾಗವಹಿಸಿದರು. ಮತದಾನ ಜಾಗೃತಿಯನ್ನು ಮೂಡಿಸುವುದರೊಂದಿಗೆ ಮೇ 10 ರಂದು ನಡೆಯುವಂತಹ ಚುನಾವಣೆಯ ಘೋಷವಾಕ್ಯವಾದಂತಹ ಮತದಾನಕ್ಕಿಂತ ಇನ್ನೊಂದಿಲ್ಲ ಖಚಿತವಾಗಿಯೂ ನಾನು ಮತದಾನ ಮಾಡುವೆನು ಎಂಬ ಘೋಷವಾಕ್ಯವನ್ನು ಉಚ್ಚರಿಸುವ ಮೂಲಕ ಚುನಾವಣೆ ಅರಿವು ಮೂಡಿಸಿದರು. ಈ ಜಾತವು ಕೆನರಾ

Voter Awareness in Holaluru ಬ್ಯಾಂಕ್ ಗ್ರಾಮೀಣ ಉದ್ಯೋಗ ತರಬೇತಿ ಸಂಸ್ಥೆ ಯ ಮೂಲಕ ಪ್ರಾರಂಭವಾಗಿ ಹೊಳಲೂರು ಗ್ರಾಮದ ಮುಖ್ಯ ಬೀದಿಗಳಲ್ಲಿ ಮೆರವಣಿಗೆಯ ಮೂಲಕ ಸಾಗಿ ಬಂದು ಕೆನರಾ ಬ್ಯಾಂಕಿನ ವೃತ್ತದ ಬಳಿ ಗ್ರಾಮಸ್ಥರೆಲ್ಲರೂ ಸೇರಿ ಮತದಾನದ ಪ್ರಮಾಣವಚನವನ್ನು ಸ್ವೀಕರಿಸಲಾಯಿತು. ಈ ಕಾರ‍್ಯಕ್ರಮದ ಸವಿನೆನಪಿಗಾಗಿ ಸಸಿಯನ್ನ ನೆಡುವುದರ ಮೂಲಕ ಕಾರ‍್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು. ಕಾರ‍್ಯಕ್ರಮದಲ್ಲಿ ಸಂಸ್ಥೆಯ ನರ‍್ದೇಶಕರಾದಂತಹ ಕಾಂತೇಶ್ ರವರು ಮತ್ತು ಎಲ್ಲಾ ಸಿಬ್ಬಂದಿ ರ‍್ಗದವರು ಹಾಗೂ ಶಿಬಿರರ‍್ಥಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...