Sunday, December 14, 2025
Sunday, December 14, 2025

Thirthahalli Assembly Election ತೀರ್ಥಹಳ್ಳಿ ಕ್ಷೇತ್ರದಲ್ಲಿ ರಾಜಕೀಯ ದಿಗ್ಗಜರ ಬಿರುಸಿನ ಚುನಾವಣಾ ಪ್ರಚಾರ

Date:

Thirthahalli Assembly Election ವಿಧಾನಸಭಾ ಚುನಾವಣೆ ಸನಿಹದಲ್ಲಿಯೇ ಇದೆ. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಚುನಾವಣಾ ಅಭ್ಯರ್ಥಿಗಳು ಚುನಾವಣಾ ಪ್ರಚಾರ ಬಹಳ ಬಿರುಸಿನಿಂದಲೇ ಸಾಗುತ್ತಿದೆ. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಚುನಾವಣಾ ಅಭ್ಯರ್ಥಿಗಳಾದ ಕಿಮ್ಮನೆ ರತ್ನಾಕರ್, ಆರಗ ಜ್ಞಾನೇಂದ್ರ ಅವರು ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಕಿಮ್ಮನೆ ರತ್ನಾಕರ್ ಅವರು ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪ, ಆರಗ, ಅರಳಸುರಳಿ ಹೀಗೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಚುನಾವಣಾ ಪ್ರಚಾರ ಮಾಡಿದರು.

ಈ ಸಂದರ್ಭದಲ್ಲಿ ಕಿಮ್ಮನೆ ರತ್ನಾಕರ್ ಅವರು, ಬಿಜೆಪಿ ಆಡಳಿತದಲ್ಲಿ ಆಗಿರುವ ಬೆಲೆ ಏರಿಕೆ, ಜನ ವಿರೋಧಿ ನೀತಿ ವಿರೋಧಿಸಿ ಕಾಂಗ್ರೆಸ್ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರುವಂತಹ ಗ್ಯಾರಂಟಿ ಕಾರ್ಡ್ ಗಳನ್ನು ಮನೆ ಮನೆಗೆ ನೀಡಿದೆ ಎಂದರು.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಆರಗಜ್ಞಾನೇಂದ್ರ ಅವರು ತೀರ್ಥಹಳ್ಳಿ ತಾಲೂಕಿನ ಅರೇಹಳ್ಳಿ, ಬಿದರಗೋಡು, ಹೆಗ್ಗೋಡು ಹೀಗೆ ವಿವಿಧ ಕಡೆ ಮತಯಾಚನೆ ಸಭೆಗಳನ್ನು ನಡೆಸಿದರು.

ಕ್ಷೇತ್ರದ ಅಭಿವೃದ್ಧಿಗಾಗಿ ಶಕ್ತಿಮೀರಿ ಕೆಲಸ ಮಾಡಿದ್ದೇವೆ. ನಿರೀಕ್ಷೆಗೂ ಮೀರಿದ ಕಾಮಗಾರಿಗಳನ್ನು ಮಂಜೂರಾಗಿ ಅನುಷ್ಠಾನ ಆಗಿವೆ. ಇನ್ನಷ್ಟು ಅಭಿವೃದ್ಧಿಗಳ ಕೆಲಸ ಮಾಡಬೇಕಿದೆ ಎಂದರು.

Thirthahalli Assembly Election ಚುನಾವಣೆ ಹತ್ತಿರದಲ್ಲಿ ಇರುವಾಗ, ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ವಿಧಾನ ಸಭಾ ಚುನಾವಣೆಗೆ ತೀರ್ಥಹಳ್ಳಿ ತಾಲೂಕಿನಾದ್ಯಂತ ಚುನಾವಣಾ ಅಭ್ಯರ್ಥಿಗಳು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಬಾರಿ ಕಣದಲ್ಲಿರುವವರಲ್ಲಿ ಯಾರು ಉತ್ತಮರು ಎಂದು ಜನರು ಆಯ್ಕೆ ಮೇಲೆ ನಿರ್ಧಾರವಾಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...