Thursday, June 18, 2026
Thursday, June 18, 2026

Thirthahalli Assembly Election ತೀರ್ಥಹಳ್ಳಿ ಕ್ಷೇತ್ರದಲ್ಲಿ ರಾಜಕೀಯ ದಿಗ್ಗಜರ ಬಿರುಸಿನ ಚುನಾವಣಾ ಪ್ರಚಾರ

Date:

Thirthahalli Assembly Election ವಿಧಾನಸಭಾ ಚುನಾವಣೆ ಸನಿಹದಲ್ಲಿಯೇ ಇದೆ. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಚುನಾವಣಾ ಅಭ್ಯರ್ಥಿಗಳು ಚುನಾವಣಾ ಪ್ರಚಾರ ಬಹಳ ಬಿರುಸಿನಿಂದಲೇ ಸಾಗುತ್ತಿದೆ. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಚುನಾವಣಾ ಅಭ್ಯರ್ಥಿಗಳಾದ ಕಿಮ್ಮನೆ ರತ್ನಾಕರ್, ಆರಗ ಜ್ಞಾನೇಂದ್ರ ಅವರು ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಕಿಮ್ಮನೆ ರತ್ನಾಕರ್ ಅವರು ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪ, ಆರಗ, ಅರಳಸುರಳಿ ಹೀಗೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಚುನಾವಣಾ ಪ್ರಚಾರ ಮಾಡಿದರು.

ಈ ಸಂದರ್ಭದಲ್ಲಿ ಕಿಮ್ಮನೆ ರತ್ನಾಕರ್ ಅವರು, ಬಿಜೆಪಿ ಆಡಳಿತದಲ್ಲಿ ಆಗಿರುವ ಬೆಲೆ ಏರಿಕೆ, ಜನ ವಿರೋಧಿ ನೀತಿ ವಿರೋಧಿಸಿ ಕಾಂಗ್ರೆಸ್ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರುವಂತಹ ಗ್ಯಾರಂಟಿ ಕಾರ್ಡ್ ಗಳನ್ನು ಮನೆ ಮನೆಗೆ ನೀಡಿದೆ ಎಂದರು.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಆರಗಜ್ಞಾನೇಂದ್ರ ಅವರು ತೀರ್ಥಹಳ್ಳಿ ತಾಲೂಕಿನ ಅರೇಹಳ್ಳಿ, ಬಿದರಗೋಡು, ಹೆಗ್ಗೋಡು ಹೀಗೆ ವಿವಿಧ ಕಡೆ ಮತಯಾಚನೆ ಸಭೆಗಳನ್ನು ನಡೆಸಿದರು.

ಕ್ಷೇತ್ರದ ಅಭಿವೃದ್ಧಿಗಾಗಿ ಶಕ್ತಿಮೀರಿ ಕೆಲಸ ಮಾಡಿದ್ದೇವೆ. ನಿರೀಕ್ಷೆಗೂ ಮೀರಿದ ಕಾಮಗಾರಿಗಳನ್ನು ಮಂಜೂರಾಗಿ ಅನುಷ್ಠಾನ ಆಗಿವೆ. ಇನ್ನಷ್ಟು ಅಭಿವೃದ್ಧಿಗಳ ಕೆಲಸ ಮಾಡಬೇಕಿದೆ ಎಂದರು.

Thirthahalli Assembly Election ಚುನಾವಣೆ ಹತ್ತಿರದಲ್ಲಿ ಇರುವಾಗ, ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ವಿಧಾನ ಸಭಾ ಚುನಾವಣೆಗೆ ತೀರ್ಥಹಳ್ಳಿ ತಾಲೂಕಿನಾದ್ಯಂತ ಚುನಾವಣಾ ಅಭ್ಯರ್ಥಿಗಳು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಬಾರಿ ಕಣದಲ್ಲಿರುವವರಲ್ಲಿ ಯಾರು ಉತ್ತಮರು ಎಂದು ಜನರು ಆಯ್ಕೆ ಮೇಲೆ ನಿರ್ಧಾರವಾಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...