Thursday, March 19, 2026
Thursday, March 19, 2026

Kannada Sahitya Parishath: ಬುದ್ಧ ತತ್ವಗಳನ್ನ ಅರ್ಥೈಸುತ್ತಾಹೋದಾಗ ಸ್ವಯಂ ವಿವೇಕ ಪಡೆಯಲು ಸಾಧ್ಯ-ಸಿರಾಜ್

Date:

Kannada Sahitya Parishath: ನಮ್ಮೆಲ್ಲರ ಎದೆಗಳಲ್ಲಿ ಶೂಲಗಳು ಜಳಪಿಸುತ್ತಿವೆ. ಇನ್ನೊಬ್ಬರನ್ನು ಅಸಹನೆಯಿಂದ, ಆತಂಕದಿಂದ ನೋಡುವ ಸಂದರ್ಭದಲ್ಲಿದ್ದೇವೆ. ಇಂತಹ ಕಾಲಘಟ್ಟದಲ್ಲಿ ಬುದ್ಧನನ್ನು ಮತ್ತೆ ಮತ್ತೆ ನೆನಪು ಮಾಡಿಕೊಳ್ಳುವ ಅಗತ್ಯವಿದೆ. ಬುದ್ಧನ ಪ್ರತಿಮೆಯ ಮುಂದೆ ನಿಂತು ಆ ಮುಖದಲ್ಲಿನ ಪ್ರಶಾಂತತೆ ಎಲ್ಲರೊಳಗೂ ಬೆಳಕಾಗುವ ಶಕ್ತಿ ಹೊಂದಿದೆ. ಜನರು ನಿತ್ಯ ಬಯಸುವುದು ಅದನ್ನೇ ಎಂದು ವಿವರಿಸಿದವರು.

ಪ್ರಾಧ್ಯಾಪಕರಾದ ಡಾ. ಸಿರಾಜ್ ಅಹಮದ್ ಅವರು ,ಶಿವಮೊಗ್ಗ ನಗರಕ್ಕೆ ಸಮೀಪವಿರುವ ಶಕ್ತಿಧಾಮ ಬಡಾವಣೆಯ ಎರಡನೇ ಹಂತದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ರಿ., ಮತ್ತು ಶಕ್ತಿ ಧಾಮ ಬಡಾವಣೆಯ ಎರಡನೇ ಹಂತದ ನಿವಾಸಿಗಳ ಸಂಘದ ಸಹಯೋಗದಲ್ಲಿ 212 ನೆಯ ತಿಂಗಳ ಸಾಹಿತ್ಯ ಹುಣ್ಣಿಮೆ ಮತ್ತು ಬುದ್ಧ ಪೂರ್ಣಿಮೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಬುದ್ಧನ ತತ್ವಗಳನ್ನು ಅರ್ಥಮಾಡಿಕೊಳ್ಳುತ್ತಾ ಹೋದಂತೆ ಸ್ವಯಂ ವಿವೇಕ ಪಡೆಯಲು ಸಾಧ್ಯ. ಅವರೇ ಹೇಳುವಂತೆ ನೀನು ಯಾರ ಅನುಯಾಯಿ ಆಗಬೇಕಿಲ್ಲ. ನಿನ್ನನ್ನು ನೀನು ಅರಿಯುವಂತಾದರೆ ಅದೇ ಮೋಕ್ಷಪ್ರಾಪ್ತಿಯ ದಾರಿ ಆಗಲಿದೆ. ಸ್ವಯಂ ಅರಿವು ಪಡೆಯಬೇಕು. ಮೂಢನಂಬಿಕೆ ತೊರೆ ಎನ್ನುವ ಅವರ ಮಾತುಗಳನ್ನು ವಿವರಿಸಿ ಹೇಳಿದರು.

ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಿ. ಮಂಜುನಾಥ ಮಾತನಾಡಿದರು. ಕಡ್ಡಾಯ ಮತದಾನ ಮಾಡಿ ಎಂದು ಜಾಗೃತಿ ಗೊಳಿಸಿದವಳು‌ ಬಾಲಪ್ರತಿಭೆ ಅನುಷಾ ಹಿರೇಮಠ ಅವರು. ಮನೆಯಲ್ಲಿ ಮಕ್ಕಳಿಗೆ ಮದುವೆ ಮಾಡುವಾಗ ಸಂಬಂಧ ಹುಡುಕುವಂತೆ ನಮ್ಮ ದೇಶದ ಭವಿಷ್ಯ ಯಾರ ಕೈಗೆ ಕೊಡಬಹುದು ಎಂಬುದನ್ನು ಯೋಚನೆ ಮಾಡಬೇಕು. ಉತ್ತಮ ವ್ಯಕ್ತಿ, ಸಮರ್ಥ ಅಭ್ಯರ್ಥಿಗೆ ಮತನೀಡಿ ಎಂದು ವಿನಂತಿಸಿದಳು.

Kannada Sahitya Parishath: ಸಾಕೇತ್ ಶಾಸ್ತ್ರಿ, ಕೀರ್ತಿಕಾ ಕನ್ನಡ ಗೀತೆಗಳನ್ನು ಹಾಡಿದರು. ಅನ್ನಪೂರ್ಣ ಸತ್ಯನಾರಾಯಣ, ಅಮೃತ ಶಿಶಿರಾ, ಜಯಲಕ್ಷ್ಮಿ ಜಿ. ಅಣ್ಣಿಗೇರಿ ತಂಡದವರು ಭಜನೆ ಹಾಡಿದರು.

ಕವಿಗಳಾದ ಡಾ. ಕೆ.ಎಸ್. ಗಂಗಾಧರ, ಬಿ.ಟಿ. ಅಂಬಿಕಾ, ಶಾಹಿರಾ ಭಾನು, ಶ್ರೀನಿವಾಸ ನಗಲಾಪುರ, ಪಿ.ಕೆ. ಸತೀಶ್, ರಚಿತಾ ಚೇತನ ಕವನ ವಾಚಿಸಿದರು. ಪಂಕಜಾ ಗೋಪಾಳ ಹನಿಗವನ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...