Thursday, June 18, 2026
Thursday, June 18, 2026

Kiccha Sudeep ಶಿಕಾರಿಪುರದಲ್ಲಿ ವಿಜಯೇಂದ್ರ ಪರ ಕಿಚ್ಚ ಸುದೀಪ್ ರೋಡ್ ಶೋ

Date:

Kiccha Sudeep ಖ್ಯಾತ ಚಲನಚಿತ್ರ ನಟ ಕಿಚ್ವ ಸುದೀಪ್ ಅವರು ಇಂದು ಶಿಕಾರಿಪುರದಲ್ಲಿ ಭರ್ಜರಿ ರೋಡ್ ಶೋ ನಡೆಸಿ ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೆಂದ್ರ ಅವರ ಪರ ಮತ ಯಾಚಿಸಿದರು. ಸಂಸದ ಬಿ.ವೈ. ರಾಘವೇಂದ್ರ ಸಾತ್ ನೀಡಿದರು.

ಸುಮಾರು 2 ಗಂಟೆಗಳ ಕಾಲ ನಡೆದ ರೋಡ್ ಶೋ ಅಕ್ಕಮಹಾದೇವಿ ವೃತ್ತದಿಂದ ಆರಂಭವಾಗಿ, ಪ್ರಮುಖ ರಸ್ತೆಗಳಲ್ಲಿ ಸಾಗಿ ಬಸ್ ನಿಲ್ದಾಣ ವೃತ್ತದಲ್ಲಿ ಕೊನೆಯಾಯಿತು. ನಾಲ್ಕು ಕಿಲೋಮೀಟರ್ ನಷ್ಟು ದೂರ ಸಾಗಿದ ಈ ರೋಡ್ ಶೋನಲ್ಲಿ ಸಾವಿರಾರು ಜನರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ವೀಕ್ಷಿಸಿದರು.

ಹಲವರು ಹೂವುಗಳನ್ನು ಎರಚಿ ಸಂಭ್ರಮಿಸಿದರು. ಬಿ.ವೈ. ವಿಜಯೇಂದ್ರ, ಬಿ.ವೈ. ರಾಘವೇಂದ್ರ ಹಾಗೂ ಯಡಿಯೂರಪ್ಪ ಪರ ಘೋಷಣೆ ಕೂಗಿದರು. “ಕಿಚ್ಚ ಕಿಚ್ಚ” ಎಂಬ ಘೋಷಣೆಯಂತೂ ಮುಗಿಲು ಮುಟ್ಟಿತ್ತು. ಕಿಚ್ಚ ಸುದೀಪ್ ಅವರು ಮದಕರಿ ಸಿನಿಮಾದ “ಕೋಪದಲ್ಲಿದ್ದಾಗ ದೇವ್ರು ಎಂಥೆಂತವರನ್ನೋ ಸೃಷ್ಟಿ ಮಾಡ್ತಾನೆ. ಆದ್ರೆ ಖುಷಿಯಲ್ಲಿದ್ದಾಗ ಕಿಚ್ಚ ಸುದೀಪ್ ತರದವರನ್ನ ಸೃಷ್ಟಿ ಮಾಡ್ತಾನೆ” ಡೈಲಾಗ್ ಹೇಳಿ ರಂಜಿಸಿದರು.

Kiccha Sudeep ರೋಡ್ ಶೋ ಉದ್ದಕ್ಕೂ ಬಿಜೆಪಿಯ ಬಾವುಟಗಳು, ಕಿಚ್ಚ ಸುದೀಪ್ ಅವರ ಫೋಟೋಗಳು, ಪ್ಲಕಾರ್ಡ್ ಗಳು, ರಾರಾಜಿಸಿದವು.
ಪ್ರಚಾರದ ಕೊನೆಯ ದಿನವಾದ ಇಂದು ಮಧ್ಯಾಹ್ನದ ನಂತರ ಶಿರಾಳಕೊಪ್ಪದಲ್ಲಿ ಸುದೀಪ್ ಅವರ ರೋಡ್ ಶೋ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...