Saturday, April 26, 2025
Saturday, April 26, 2025

Assembly General Election ಸಾರ್ವತ್ರಿಕ ಚುನಾವಣೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಸಿದ್ಧತೆ -ಡಾ.ಸೆಲ್ವಮಣಿ

Date:

Assembly General Election ವಿಧಾನಸಭಾ ಸಾರ್ವತ್ರಿಕ ಚುನಾವಣೆ ಮತದಾನಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 7,28,886 ಪುರುಷ, 7,43,713 ಮಹಿಳಾ, 32 ಇತರೆ ಹಾಗೂ 696 ಸೇವಾ ಮತದಾರರು ಸೇರಿ ಒಟ್ಟು 1473327 ಮತದಾರರಿದ್ದಾರೆ.

ಮತಗಟ್ಟೆ & ಅಧಿಕಾರಿಗಳ ನೇಮಕ: ಜಿಲ್ಲಾ ವ್ಯಾಪ್ತಿಯಲ್ಲಿ 1775 + 07 ಪೂರಕ ಸೇರಿದಂತೆ ಒಟ್ಟು 1782 ಮತಗಟ್ಟೆಗಳಿವೆ. ಜಿಲ್ಲೆಯಲ್ಲಿ ಮತದಾನಕ್ಕೆ ಸಂಬಂಧಿದಂತೆ 2050 ಪಿಆರ್‍ಓ, 2050 ಎಪಿಆರ್‍ಓ, 4100 ಪಿಓ ಸೇರಿದಂತೆ ಒಟ್ಟು 8200 ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಹಾಗೂ 83 ಮೈಕ್ರೋ ಅಬ್ಸರ್ವರ್ಸ್‍ಗಳನ್ನು ನೇಮಕ ಮಾಡಲಾಗಿದೆ.

Assembly General Election ಬಸ್ ನಿಯೋಜನೆ: ಒಟ್ಟು 8156 ಸಿಬ್ಬಂದಿಗಳನ್ನು ಮತಗಟ್ಟೆಗಳಿಗೆ ಕರೆದೊಯ್ಯಲು ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗ ಗ್ರಾಮಾಂತರಕ್ಕೆ 16 ಬಸ್, ಭದ್ರಾವತಿಗೆ 40, ಶಿವಮೊಗ್ಗ ನಗರಕ್ಕೆ 15, ತೀರ್ಥಹಳ್ಳಿಗೆ 45, ಶಿಕಾರಿಪುರಕ್ಕೆ 43, ಸೊರಬಕ್ಕೆ 36, ಸಾಗರಕ್ಕೆ 31 ಮತ್ತು ಹೊಸನಗರಕ್ಕೆ 14 ಸೇರಿದಂತೆ ಒಟ್ಟು 240 ಬಸ್‍ಗಳನ್ನು ನಿಯೋಜಿಸಲಾಗಿದೆ.
ಮಸ್ಟರಿಂಗ್, ಡಿಮಸ್ಟರಿಂಗ್ ಮತ್ತು ಮತ ಎಣಿಕೆ ಸ್ಥಳ : ಶಿವಮೊಗ್ಗ ಗ್ರಾಮಾಂತರ -111 ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಹೆಚ್ ಎಸ್.ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜು ಮತ್ತು ಎಸ್.ಆರ್.ನಾಗಪ್ಪಶೆಟ್ರಿ ಸ್ಮರಕ ರಾಷ್ಟ್ರೀಯ ಅನ್ವಯಿಕ ಸೈನ್ಸ್ ಪಿಯು ಕಾಲೇಜ್, ಶಿವಮೊಗ್ಗ. ಭದ್ರಾವತಿ-112 ಸಂಚಿ ಹೊನ್ನಮ್ಮ ಬಾಲಿಕ ಪಪೂ ಕಾಲೇಜು ಭದ್ರಾವತಿ. ಶಿವಮೊಗ್ಗ-113 ಸಹ್ಯಾದ್ರಿ ವಾಣಿಜ್ಯ ಕಾಲೇಜ್ ಶಿವಮೊಗ್ಗ. ತೀರ್ಥಹಳ್ಳಿ-114 ಡಾ.ಯು.ಆರ್ ಅನಂತಮೂರ್ತಿ ಕಾಲೇಜು ತೀರ್ಥಹಳ್ಳಿ. ಶಿಕಾರಿಪುರ-115 ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಿಕಾರಿಪುರ. ಸೊರಬ-116 ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸೊರಬ. ಸಾಗರ-117 ಸರ್ಕಾರಿ ಪದವಿಪೂರ್ವ ಕಾಲೇಜು ಸಾಗರ. ಮತ ಎಣಿಕೆ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Defense University ಪಠ್ಯಕ್ರಮದ ರಚನೆ & ಕೌಶಲ್ಯಾಭಿವೃದ್ಧಿಗೆಒತ್ತು-ರಾಷ್ಟ್ರೀಯ ರಕ್ಷಾ ವಿವಿಯಲ್ಲಿ ವೃತ್ತಿ ಸಮಾಲೋಚನೆ ಯಶಸ್ವಿ

National Defense University ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ (RRU), ಶಿವಮೊಗ್ಗ ಕ್ಯಾಂಪಸ್ನಲ್ಲಿ,...

Digital library ಹೊಸ ವಿಷಯ ಕಲಿಕೆ ಸಂಗಡ ಮಕ್ಕಳು ದೈಹಿಕ & ಮಾನಸಿಕ ದೃಢತೆ ಸಾಧಿಸಬೇಕು- ವೀರೇಶ್ ಕ್ಯಾತನಕೊಪ್ಪ

Digital library ಮಕ್ಕಳಿಗೆ ಬೇಸಿಗೆ ಶಿಬಿರಗಳು ಅತ್ಯಂತ ಅವಶ್ಯಕ ಎಂದು ಸೂಗುರು...

CM siddharamaih ಪಹಲ್ಗಾಮ್ ದುರ್ಘಟನೆ‌ ಗುಪ್ತಚರ ವ್ಯವಸ್ಥೆಯ ವೈಫಲ್ಯ- ಮುಖ್ಯಮಂತ್ರಿ ಸಿದ್ಧರಾಮಯ್ಯ

CM siddharamaih ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ...