Thursday, June 18, 2026
Thursday, June 18, 2026

Metro Hospital Shivamogga ಸಾಹಸ ಕ್ರೀಡೆ ಚಾರಣದಲ್ಲಿ ಪಾಲ್ಗೊಳ್ಳುವ ಮುನ್ನ ವೈದ್ಯಕೀಯ ತಪಾಸಣೆ ಅವಶ್ಯ

Date:

Metro Hospital Shivamogga ಸಾಹಸ ಕ್ರೀಡೆಗಳಲ್ಲಿ ಚಾರಣಗಳಲ್ಲಿ ಭಾಗವಹಿಸುವ ಮುನ್ನ ವೈದ್ಯಕೀಯ ತಪಾಸಣೆಯು ಅತ್ಯಂತ ಅವಶ್ಯಕ ಎಂದು ಸಾಹಸ ಮತ್ತು ಸಂಸದ ಅಕಾಡೆಮಿಯ ಇತಿಹಾಸ ಸಂಶೋಧನಾ ಕೇಂದ್ರದ ಅಧ್ಯಕ್ಷ ದಿಲೀಪ್ ಹೇಳಿದರು.

ಶಿವಮೊಗ್ಗ ನಗರದ ಮೆಟ್ರೋ ಆಸ್ಪತ್ರೆಯಲ್ಲಿ ಯೂತ್ ಹಾಸ್ಟಲ್ ಅಸೋಸಿಯೇಷನ್ ಆಫ್ ಇಂಡಿಯಾದ ವತಿಯಿಂದ ಹಿಮಾಲಯ ಹೊರಟಿರುವ ಎಲ್ಲ ಸಾಹಸರಿಗೆ ವೈದ್ಯಕೀಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದರು.

ಸಾಹಸ ಚಾರಣ ಸಂದರ್ಭಗಳಲ್ಲಿ ಆರೋಗ್ಯ ಚೆನ್ನಾಗಿರುವುದು ತುಂಬಾ ಮುಖ್ಯ. ಎಲ್ಲರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಆರೋಗ್ಯ ಸದೃಢವಾಗಿರುವುದರಿಂದ ಕಠಿಣ ಚಾರಣಗಳಲ್ಲಿಯು ಉತ್ಸಾಹದಿಂದ ಪಾಲ್ಗೊಳ್ಳಬಹುದು ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್ ಕುಮಾರ್ ಮಾತನಾಡಿ, ಹಿಮಾಲಯ ಚಾರಣ ಸಂದರ್ಭದಲ್ಲಿ ಸುರಕ್ಷತೆ ವಹಿಸಬೇಕು. ಪ್ರತಿಯೊಬ್ಬರು ಸಾಹಸ ಮನೋಭಾವ ಬೆಳೆಸಿಕೊಳ್ಳಬೇಕು. ಇಂತಹ ಸಾಹಸ ಚಾರಣಗಳಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಉತ್ಸಾಹ ಹೆಚ್ಚುತ್ತದೆ ಎಂದು ಹೇಳಿದರು.

Metro Hospital Shivamogga ಶಿವಮೊಗ್ಗದ ಮೆಟ್ರೋ ಆಸ್ಪತ್ರೆಯ ವೈದ್ಯರಾದ ಡಾ. ಶಂಕರ್, ಡಾ. ಪುಶ್ವಿಂಧರ್ ಧುನ್ಪುತ್, ಡಾ. ಕಾವ್ಯಾ ಮಾತನಾಡಿ, ಶಿವಮೊಗ್ಗದಿಂದ ಸಂಸ್ಕೃತ ಸಂಭಾಷಣಿಗರ 40ಜನರ ತಂಡವೊಂದು ಹಿಮಾಲಯ ಚಾರಣ ಹೊರಟಿದೆ. ಈ ಸಂಬಂಧ ಎಲ್ಲ ಚಾರಣಿಗರಿಗೂ ವೈದ್ಯಕೀಯ ತಪಾಸಣೆ ಮತ್ತು ಚಾರಣದ ಸಮಯದಲ್ಲಿ ಉಂಟಾಗುವ ಹಲವು ಸಮಸ್ಯೆಗಳನ್ನು ಎದುರಿಸುವ ಬಗ್ಗೆ ಮಾಹಿತಿಯನ್ನು ಮತ್ತು ಆಸ್ಪತ್ರೆ ಸಿಬ್ಬಂದಿಗಳು ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಸಾಹಸ ಮತ್ತು ಸಂಸ್ಕೃತಿ ಮತ್ತು ಇತಿಹಾಸ ಸಂಶೋಧನಾ ಮತ್ತು ಅಧ್ಯಯನ ವೇದಿಕೆ ಅ.ನಾ.ವಿಜೇಂದ್ರ ರಾವ್, ತರುಣೋದಯ ಘಟಕದ ಚೇರ‍್ಮನ್ ವಾಗೀಶ್ ಉಪಸ್ಥಿತಿ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...