Friday, March 20, 2026
Friday, March 20, 2026

Chikkamagaluru Gnanarashmi School ಚಿಕ್ಕಮಗಳೂರು ಜ್ಞಾನರಶ್ಮಿ ಶಾಲೆಗೆ‌ ಎಸ್ಎಸ್ಎಲ್ ಸಿ ಶೇ 100 ಫಲಿತಾಂಶ

Date:

Chikkamagaluru Gnanarashmi School ಚಿಕ್ಕಮಗಳೂರು, ನಗರ ಸಮೀಪದ ಜ್ಞಾನರಶ್ಮಿ ಶಾಲೆಗೆ 2022-23 ನೇ ಸಾಲಿನ ಎಸ್.ಎಸ್. ಎಲ್.ಸಿ. ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಪಡೆದು ಪ್ರತಿವರ್ಷದಂತೆ ಯಶಸ್ವಿಯಾಗಿ ಮುನ್ನಡೆದಿದೆ.

ಶಾಲೆಯಲ್ಲಿ ಪ್ರಥಮ ಸ್ಥಾನವನ್ನು ಎಸ್.ನವಮಿ 618೬ ಅಂಕ ಪಡೆಯುವ ಮೂಲಕ ಶೇ.98.88೯, ದ್ವಿತೀಯ ಸ್ಥಾನವನ್ನು ಸಿ.ಐ.ಅಲ್ಪಾ 584ಕ್ಕೆ ಶೇ.93.44 ಹಾಗೂ ತೃತೀಯ ಸ್ಥಾನವನ್ನು ಏ.ಆರ್ಶಿಯ 562ಕ್ಕೆ ಶೇ.90 ಫಲಿತಾಂಶ ಪಡೆದು ತೇರ್ಗಡೆಯಾಗಿದ್ದಾರೆ.

ಶಾಲೆಯ ಎಸ್.ಎಸ್.ಎಸ್.ಸಿ ಪರೀಕ್ಷೆಯಲ್ಲಿ ಒಟ್ಟು 45 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ಉತ್ತಿರ್ಣರಾ ಗಿದ್ದಾರೆ. ಕನ್ನಡ ವಿಷಯದಲ್ಲಿ ಎಸ್.ನವಮಿ 125ಕ್ಕೆ 125 ಅಂಕ ಹಾಗೂ ಹಿಂದಿ ವಿಷಯದಲ್ಲಿ ಸಿ. ಅಲ್ಪಾ ಹಾಗೂ ಫರ್ಹಾನ್‌ಖಾನ್ 100ಕ್ಕೆ 100ಕ್ಕೆ ಪಡೆದು ವಿಶೇಷ ಸಾಧನೆ ಮಾಡಿದ್ದಾರೆ.

ಈ ವೇಳೆ ಶಾಲೆಯ ಕಾರ್ಯದರ್ಶಿ ನಂದಕುಮಾರ್ ಮಾತನಾಡಿ ಶಾಲೆಯು ಸತತವಾಗಿ 13 ವರ್ಷಗಳಿಂದ ಶೇ.100 ಫಲಿತಾಂಶ ಪಡೆದು ತೇರ್ಗಡೆಯಾಗುತ್ತಿರುವುದು ಖುಷಿ ತಂದಿದೆ. ಈ ಬಾರಿಯು ಸಹ 3 ವಿದ್ಯಾರ್ಥಿಗಳು ಅತ್ಯಧಿಕ ಅಂಕ ಪಡೆದು ಉನ್ನತ ಮಟ್ಟದಲ್ಲಿ ತೇರ್ಗಡೆ ಹೊಂದಿದ್ದಾರೆ ಎಂದು ತಿಳಿಸಿದರು.

Chikkamagaluru Gnanarashmi School ಇದೇ ವೇಳೆ ಎಸ್.ಎಸ್.ಎಲ್.ಸಿ.ಯಲ್ಲಿ ಅತಿಹೆಚ್ಚು ಅಂಕಗಳಿಸಿದ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿಯು ಸಿಹಿ ತಿನಿಸುವ ಮೂಲಕ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಎನ್.ಪಿ.ಲಿಖಿತ, ಪ್ರಾಂಶುಪಾಲ ಹೆಚ್.ಪಾಲಾಕ್ಷಮ್ಮ, ಶಿಕ್ಷಕರಾದ ಸಹೇರಾ ಬಾನು, ಮುಬೀನಾ ತಾಜ್, ಗಾಯತ್ರಿ, ಮಕ್ಕಳ ಪೋಷಕರಾದ ಸುರೇಶ್, ಸಹನಾ, ಜಹರಾ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...