Saturday, September 28, 2024
Saturday, September 28, 2024

Animal Husbandry Shivamogga ಜಿಲ್ಲೆಯಲ್ಲಿ ಜಾನುವಾರು ಕಂದುರೋಗ ನಿಯಂತ್ರಣಾ ಕಾರ್ಯಕ್ರಮ

Date:

Animal Husbandry Shivamogga ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜಾನುವಾರುಗಳಲ್ಲಿ ಕಂದುರೋಗ ನಿಯಂತ್ರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿರುತ್ತದೆ.

ಕಂದುರೋಗವು ಪ್ರಾಣಿಜನ್ಯರೋಗವಾಗಿದ್ದು, ರಾಸುಗಳಲ್ಲಿ ಈ ರೋಗದಿಂದ ಗರ್ಭ ಧರಿಸಿದ ಹಸುಗಳು 6 ತಿಂಗಳ ನಂತರ ಕಂದು ಹಾಕಬಹುದು. ಅವುಗಳ ಗರ್ಭ ಸ್ರಾವದಿಂದ ಮತ್ತು ಹಸಿ ಹಾಲನ್ನು ಹಾಗೆಯೇ ಉಪಯೋಗಿಸುವುದರಿಂದ ರೋಗವು ಮನುಷ್ಯರಿಗೂ ಹರಡಬಹುದು. ಸದರಿ ರೋಗವು ಮನುಷ್ಯರಿಗೆ ಬಂದರೆ ಸಂತಾನೋತ್ಪತ್ತಿ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ.

ಕಾರಣ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು, ಅರ್ಹ ಕರುಗಳಿಗೆ ಲಸಿಕೆ ಹಾಕಿಸಿ, ಸಂಭವಿಸಬಹುದಾದಆರ್ಥಿಕ ನಷ್ಟ ತಪ್ಪಿಸಿ ನಿಮ್ಮ ಜಾನುವಾರುಗಳನ್ನೂ ರಕ್ಷಿಸಿಕೊಳ್ಳಲು ಕೋರಿದೆ.

Animal Husbandry Shivamogga ಜಿಲ್ಲೆಯಲ್ಲಿ ಸದರಿ ಲಸಿಕಾ ಕಾರ್ಯಕ್ರಮದಡಿ4 ರಿಂದ 8 ತಿಂಗಳ ಆಕಳು/ಎಮ್ಮೆಗಳ ಹೆಣ್ಣು ಕರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಿದ್ದು, ದಿನಾಂಕ: 15-05-2023 ರಿಂದ 30-05-2023ರವರೆಗೆ ಲಸಿಕೆಯನ್ನು ಹಾಕಲಾಗುವುದು.

2023-24 ನೇ ಸಾಲಿನಲ್ಲಿವಾರ್ಷಿಕಒಟ್ಟು 75000 ಅರ್ಹ ಹೆಣ್ಣುಕರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಿದ್ದು, ಈ ಸುತ್ತಿನಲ್ಲಿ 25000 ಅರ್ಹ ಹೆಣ್ಣು ಕರುಗಳಿಗೆ ಲಸಿಕೆಯನ್ನು ಹಾಕಲಾಗುವುದು. ಜಿಲ್ಲೆಯಎಲ್ಲಾರೈತ ಬಾಂದವರು ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರಲಾಗಿದೆ.

ಲಸಿಕಾದಾರರು ತಮ್ಮ ಮನೆ ಬಾಗಿಲಲ್ಲೇ ತಮ್ಮ ಕರುಗಳಿಗೆ ಕಿವಿಯೋಲೆ ಅಳವಡಿಸಿ ನೊಂದಣಿ ಮಾಡಿಕೊಂಡು ಲಸಿಕೆ ಹಾಕುತ್ತಾರೆ. ಎಲ್ಲಾ ರೈತ ಬಾಂಧವರು ಮತ್ತು ಪಶು ಪಾಲಕರು ತಮ್ಮಲ್ಲಿರುವ ಅರ್ಹ ಹೆಣ್ಣು ಕರುಗಳಿಗೆ ತಪ್ಪದೇ ಲಸಿಕೆ ಹಾಕಿಸುವ ಮೂಲಕ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಕಂದುರೋಗವನ್ನು ನಿಯಂತ್ರಿಸುವಲ್ಲಿ ಸಹಕರಿಸುವುದು.

ಲಸಿಕಾ ಕಾರ್ಯಕ್ರಮದ ವೇಳಾಪಟ್ಟಿಯನ್ನು ತಾಲ್ಲೂಕುವಾರು ಗ್ರಾಮವಾರುತಯಾರಿಸಲಾಗಿದ್ದು, ಪಶುಪಾಲನಾ ಇಲಾಖೆಯಅಧಿಕಾರಿ/ಸಿಬ್ಬಂದಿಯನ್ನೊಳಗೊಂಡ ಲಸಿಕಾ ತಂಡಗಳು ವೇಳಾಪಟ್ಟಿಯಂತೆ ಆಯಾ ಗ್ರಾಮಗಳಿಗೆ ಬೇಟಿ ನೀಡಿ ಜಾನುವಾರುಗಳಿಗೆ ಉಚಿತವಾಗಿ ಲಸಿಕೆಯನ್ನು ಹಾಕಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶು ಚಿಕಿತ್ಸಾ ಸಂಸ್ಥೆಗಳನ್ನು ಸಂಪರ್ಕಿಸಬೇಕೆಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ಶಿವಯೋಗಿ.ಬಿ.ಯಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shikaripura News ಅಹಿಂದ ಸಂಘಟನೆ ಕರೆ ನೀಡಿದ್ದ ಶಿಕಾರಿಪುರ ಬಂದ್ ಯಶಸ್ವಿ

Shikaripura News ನಾಡಿನ ಅಹಿಂದ ವರ್ಗಕ್ಕೆ ಸೇರಿದ ಜನರ ಹಿತ ಕಾಯುವ...

New Delhi News ಅಪಹರಣಕ್ಕೊಳಗಾಗಿದ್ದ ಬಾಲಕನೇ ಇಂದು ವಕೀಲನಾಗಿ ಅದೇ ಕಿಡ್ನಾಪರ್ಸ್ ಗೆ ಶಿಕ್ಷೆ ಕೊಡಿಸಿದ

New Delhi News ಈ ಹಿಂದೆ 7 ವರ್ಷದವನಾಗಿದ್ದಾಗ ಅಪಹರಣಕ್ಕೊಳಗಾಗಿದ್ದ ಬಾಲಕ...

Kasturi Rangan Comittee Report ಕಸ್ತೂರಿ ರಂಗನ್ ವರದಿ ತಿರಸ್ಕಾರ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

Kasturi Rangan Comittee Report ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು...

Hosanagara News ಇಸ್ಪೀಟ್ ಅಡ್ಡೆಗೆ ಪೊಲೀಸರ ದಾಳಿ – 11 ಜನರ ಬಂಧನ 17,640 ರೂಪಾಯಿ ವಶ

Hosanagara News ಹೊಸನಗರ ತಾಲ್ಲೂಕು ಮಾರುತೀಪುರ ಗ್ರಾಮ ಪಂಚಾಯಿತಿಯ ಹಳೆಬಾಣಿಗ ರಸ್ತೆಯ...