Monday, February 2, 2026
Monday, February 2, 2026

Karnataka Assembly Election Results 2023 ಬಿಜೆಪಿ ಪಕ್ಷಕ್ಕೀಗ ಆತ್ಮಾವಲೋಕನಕ್ಕೆ ಸಮಯ

Date:

Karnataka Assembly Election Results 2023 ಪ್ರತಿ ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಕಳೆದ ವಿಧಾನಸಭಾ ಚುನಾವಣೆಯ ಲ್ಲಿ ಬಿಜೆಪಿ ಪಕ್ಷ ಗೆಲುವನ್ನು ಸಾಧಿಸಿತ್ತು. ಆದರೆ, ಈ ಬಾರಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದೆ.

ಪ್ರತಿ ಚುನಾವಣೆಯಲ್ಲಿಯೂ ಹೊಸ ಹೊಸ ಪ್ರಯೋಗಗಳ ಮುಖಾಂತರ ಟ್ರೆಂಡ್ ಸೃಷ್ಟಿಸುತ್ತಿದ್ದಂತಹ ಬಿಜೆಪಿ ಈ ಬಾರಿ ವಿಧಾನಸಭಾ ಚುನಾವಣೆಗೆ ಬಳಸಿದ ಕೆಲವು ಪ್ರಯೋಗಗಳು ಕೈ ಹಿಡಿದಿಲ್ಲ.

ಈ ಬಾರಿ ಚುನಾವಣೆಯಲ್ಲಿ ಬಿಜೆಪಿ 75 ಹೊಸ ಮುಖಗಳಿಗೆ ಅವಕಾಶಗಳನ್ನು ನೀಡಿತ್ತು. ಈ ಮುಖಾಂತರ ಹೊಸ ತಂಡವನ್ನು ರೂಪಿಸಲು ಒಂದು ಸಾಹಸಕ್ಕೆ ಕೈ ಹಾಕಿತ್ತು. ಆದರೆ ಈ ಪೈಕಿಯಲ್ಲಿ 13 ಜನ ಮಾತ್ರ ಗೆಲುವನ್ನು ಸಾಧಿಸಿದ್ದಾರೆ.

ಶ್ರೀ. ಕೆ ಎಸ್ ಈಶ್ವರಪ್ಪ ಪ್ರತಿನಿಧಿಸುತ್ತಿದ್ದಂತಹ ಶಿವಮೊಗ್ಗ ಕ್ಷೇತ್ರದಿಂದ ಚೆನ್ನಬಸಪ್ಪ ಅವರನ್ನು ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ಪ್ರಯೋಗ ಫಲ ಲಭಿಸಿದೆ. ಆದರೆ ಬಹುಪಾಲು ಹೊಸ ಮುಖಗಳನ್ನು ಪರಿಚಯಿಸಿದ್ದರಿಂದ ಪಕ್ಷಕ್ಕೆ ಭಾರಿ ಹಿನ್ನಡೆ ಉಂಟು ಮಾಡಿದೆ.

ಇನ್ನೊಂದು ಕಡೆ ಕರಾವಳಿಯಲ್ಲಿ ಬಿಜೆಪಿಯ ಸಂಘಟನಾತ್ಮಕ ಕೇಂದ್ರವೆಂದೇ ಪ್ರಸಿದ್ಧಿ ಪಡೆದ ಪುತ್ತೂರಿನ ಕ್ಷೇತ್ರದಲ್ಲಿ ಕಮಲ ಪಕ್ಷ ಮುದುಡಿದೆ.

ಈ ಹಿಂದೆ ರಾಜಕೀಯ ಪಕ್ಷವು ಸಾಮಾಜಿಕ ಜಾಲತಾಣವನ್ನು ಗರಿಷ್ಠ ಪ್ರಮಾಣದಲ್ಲಿ ಹೇಗೆಲ್ಲಾ ಬಳಸಬಹುದು ಎಂಬುದಕ್ಕೆ ಬಿಜೆಪಿ ಮಾದರಿ ಎಂಬಂತಿತ್ತು. ರಾಜ್ಯದಲ್ಲಿ ಹಿಂದಿನ ಚುನಾವಣೆಗಳಲ್ಲಿಯೂ ಅದನ್ನು ಸಾಬೀತುಪಡಿಸಿತ್ತು. ಈ ಚುನಾವಣೆಯಲ್ಲಿ ಸಾಮಾಜಿಕ ಜಾಲತಾಣವನ್ನು ಕಾಂಗ್ರೆಸ್ ಲೀಲಾಜಾಲವಾಗಿ ಬಳಸಿಕೊಂಡು ಪಕ್ಷದ ಪರ ಅಲೆ ಸೃಷ್ಟಿಸಿಕೊಳ್ಳಲು ಯಶಸ್ವಿಯಾಗಿರುವುದು ವಿಶೇಷವೇ ಸರಿ.

ಪೇ ಸಿಎಂ ಎಂಬ ಅಭಿಯಾನ ಕಾಂಗ್ರೆಸ್ ಆರಂಭಿಸಿ, ನಿರೀಕ್ಷೆಗೂ ಮೀರಿ ಯಶಸ್ಸನ್ನ ಕಂಡಿದೆ.

Karnataka Assembly Election Results 2023 ಮಾಧ್ಯಮಗಳಲ್ಲಿ 40% ಸರ್ಕಾರದ ವಿರುದ್ಧ ಅನೇಕ ಜಾಹೀರಾತುಗಳ ಸೃಷ್ಟಿಯಾಗಿ ದ್ದವು. ಬಿಜೆಪಿ ಸರ್ಕಾರದ ಅನೇಕ ವೈಫಲ್ಯಗಳ ಬಗ್ಗೆ ದಿನನಿತ್ಯವೂ ಹಲವಾರು ಪೋಸ್ಟ್ ಗಳ ಮುಖಾಂತರ ಜನರಿಗೆ ಮನನ ಮಾಡಿಕೊಡುವ ಪ್ರಯತ್ನವನ್ನು ಕಾಂಗ್ರೆಸ್ ಪರಿಣಾಮಕಾರಿಯಾಗಿ ನಿರ್ವಹಿಸುತ್ತಲೇ ಬಂತು. ಈ ಎಲ್ಲಾ ಅಂಶಗಳು ನೆಟ್ಟಿಗರ ಮೇಲೆ ಪರಿಣಾಮವನ್ನು ಬೀರಿತು. ಆದ್ದರಿಂದ ಈ ಬಾರಿ ಕಮಲ ರಾಜ್ಯದಲ್ಲಿ ಮುದುಡಿರಬಹುದು ಎಂಬುದು ಕೆಲವರ ಪ್ರಶ್ನೆ… ಬಿಜೆಪಿ ಪಕ್ಷದ ಕೆಲವೊಂದು ಎಡವಟ್ಟುಗಳಿಂದಲೇ ಈ ಬಾರಿ ಗೆಲುವಿನ ಪತಾಕೆ ಹಾರಿಸಲು ಹಿಂದೆಟು ಹಾಕಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...