Thursday, June 18, 2026
Thursday, June 18, 2026

Karnataka Assembly Election Results 2023 ಬಿಜೆಪಿ ಪಕ್ಷಕ್ಕೀಗ ಆತ್ಮಾವಲೋಕನಕ್ಕೆ ಸಮಯ

Date:

Karnataka Assembly Election Results 2023 ಪ್ರತಿ ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಕಳೆದ ವಿಧಾನಸಭಾ ಚುನಾವಣೆಯ ಲ್ಲಿ ಬಿಜೆಪಿ ಪಕ್ಷ ಗೆಲುವನ್ನು ಸಾಧಿಸಿತ್ತು. ಆದರೆ, ಈ ಬಾರಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದೆ.

ಪ್ರತಿ ಚುನಾವಣೆಯಲ್ಲಿಯೂ ಹೊಸ ಹೊಸ ಪ್ರಯೋಗಗಳ ಮುಖಾಂತರ ಟ್ರೆಂಡ್ ಸೃಷ್ಟಿಸುತ್ತಿದ್ದಂತಹ ಬಿಜೆಪಿ ಈ ಬಾರಿ ವಿಧಾನಸಭಾ ಚುನಾವಣೆಗೆ ಬಳಸಿದ ಕೆಲವು ಪ್ರಯೋಗಗಳು ಕೈ ಹಿಡಿದಿಲ್ಲ.

ಈ ಬಾರಿ ಚುನಾವಣೆಯಲ್ಲಿ ಬಿಜೆಪಿ 75 ಹೊಸ ಮುಖಗಳಿಗೆ ಅವಕಾಶಗಳನ್ನು ನೀಡಿತ್ತು. ಈ ಮುಖಾಂತರ ಹೊಸ ತಂಡವನ್ನು ರೂಪಿಸಲು ಒಂದು ಸಾಹಸಕ್ಕೆ ಕೈ ಹಾಕಿತ್ತು. ಆದರೆ ಈ ಪೈಕಿಯಲ್ಲಿ 13 ಜನ ಮಾತ್ರ ಗೆಲುವನ್ನು ಸಾಧಿಸಿದ್ದಾರೆ.

ಶ್ರೀ. ಕೆ ಎಸ್ ಈಶ್ವರಪ್ಪ ಪ್ರತಿನಿಧಿಸುತ್ತಿದ್ದಂತಹ ಶಿವಮೊಗ್ಗ ಕ್ಷೇತ್ರದಿಂದ ಚೆನ್ನಬಸಪ್ಪ ಅವರನ್ನು ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ಪ್ರಯೋಗ ಫಲ ಲಭಿಸಿದೆ. ಆದರೆ ಬಹುಪಾಲು ಹೊಸ ಮುಖಗಳನ್ನು ಪರಿಚಯಿಸಿದ್ದರಿಂದ ಪಕ್ಷಕ್ಕೆ ಭಾರಿ ಹಿನ್ನಡೆ ಉಂಟು ಮಾಡಿದೆ.

ಇನ್ನೊಂದು ಕಡೆ ಕರಾವಳಿಯಲ್ಲಿ ಬಿಜೆಪಿಯ ಸಂಘಟನಾತ್ಮಕ ಕೇಂದ್ರವೆಂದೇ ಪ್ರಸಿದ್ಧಿ ಪಡೆದ ಪುತ್ತೂರಿನ ಕ್ಷೇತ್ರದಲ್ಲಿ ಕಮಲ ಪಕ್ಷ ಮುದುಡಿದೆ.

ಈ ಹಿಂದೆ ರಾಜಕೀಯ ಪಕ್ಷವು ಸಾಮಾಜಿಕ ಜಾಲತಾಣವನ್ನು ಗರಿಷ್ಠ ಪ್ರಮಾಣದಲ್ಲಿ ಹೇಗೆಲ್ಲಾ ಬಳಸಬಹುದು ಎಂಬುದಕ್ಕೆ ಬಿಜೆಪಿ ಮಾದರಿ ಎಂಬಂತಿತ್ತು. ರಾಜ್ಯದಲ್ಲಿ ಹಿಂದಿನ ಚುನಾವಣೆಗಳಲ್ಲಿಯೂ ಅದನ್ನು ಸಾಬೀತುಪಡಿಸಿತ್ತು. ಈ ಚುನಾವಣೆಯಲ್ಲಿ ಸಾಮಾಜಿಕ ಜಾಲತಾಣವನ್ನು ಕಾಂಗ್ರೆಸ್ ಲೀಲಾಜಾಲವಾಗಿ ಬಳಸಿಕೊಂಡು ಪಕ್ಷದ ಪರ ಅಲೆ ಸೃಷ್ಟಿಸಿಕೊಳ್ಳಲು ಯಶಸ್ವಿಯಾಗಿರುವುದು ವಿಶೇಷವೇ ಸರಿ.

ಪೇ ಸಿಎಂ ಎಂಬ ಅಭಿಯಾನ ಕಾಂಗ್ರೆಸ್ ಆರಂಭಿಸಿ, ನಿರೀಕ್ಷೆಗೂ ಮೀರಿ ಯಶಸ್ಸನ್ನ ಕಂಡಿದೆ.

Karnataka Assembly Election Results 2023 ಮಾಧ್ಯಮಗಳಲ್ಲಿ 40% ಸರ್ಕಾರದ ವಿರುದ್ಧ ಅನೇಕ ಜಾಹೀರಾತುಗಳ ಸೃಷ್ಟಿಯಾಗಿ ದ್ದವು. ಬಿಜೆಪಿ ಸರ್ಕಾರದ ಅನೇಕ ವೈಫಲ್ಯಗಳ ಬಗ್ಗೆ ದಿನನಿತ್ಯವೂ ಹಲವಾರು ಪೋಸ್ಟ್ ಗಳ ಮುಖಾಂತರ ಜನರಿಗೆ ಮನನ ಮಾಡಿಕೊಡುವ ಪ್ರಯತ್ನವನ್ನು ಕಾಂಗ್ರೆಸ್ ಪರಿಣಾಮಕಾರಿಯಾಗಿ ನಿರ್ವಹಿಸುತ್ತಲೇ ಬಂತು. ಈ ಎಲ್ಲಾ ಅಂಶಗಳು ನೆಟ್ಟಿಗರ ಮೇಲೆ ಪರಿಣಾಮವನ್ನು ಬೀರಿತು. ಆದ್ದರಿಂದ ಈ ಬಾರಿ ಕಮಲ ರಾಜ್ಯದಲ್ಲಿ ಮುದುಡಿರಬಹುದು ಎಂಬುದು ಕೆಲವರ ಪ್ರಶ್ನೆ… ಬಿಜೆಪಿ ಪಕ್ಷದ ಕೆಲವೊಂದು ಎಡವಟ್ಟುಗಳಿಂದಲೇ ಈ ಬಾರಿ ಗೆಲುವಿನ ಪತಾಕೆ ಹಾರಿಸಲು ಹಿಂದೆಟು ಹಾಕಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...