Wednesday, June 25, 2025
Wednesday, June 25, 2025

ಸೀಎಂ ಆಯ್ಕೆರಾಜ್ಯಕಾಂಗ್ರೆಸ್ ಗೆ ಕಗ್ಗಂಟಾಗಿದೆಯೆ?

Date:

ಬೆಂಗಳೂರಿನ ಶಾಂಗ್ರಿಲಾ ಹೊಟೆಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯುತ್ತಿದೆ.
ನೂತನ ಶಾಸಕರೆಲ್ಲಾ ಒಂದೆಡೆ ಸೇರಿದ್ದಾರೆ.
ಗೆದ್ದ ಶಾಸಕರ ಚಿತ್ತ ಸಚಿವ ಸ್ಥಾನದತ್ತ.ಆದರೆ ಸೀಎಂ ಪಟ್ಟ ಯಾರಿಗೆ ?ಅನಿಶ್ಚಿತ. ಈಗಾಗಲೇ ದೆಹಲಿಗೆ ಹಲವು
ಶಾಸಕರು ಖರ್ಗೆ ಅವರ ನಿವಾಸದ ಬಾಗಿಲು ತಟ್ಟಿದ್ದಾರೆ. ಮತ್ತೂ ಕೆಲವರು ಹಿರಿತನದ ತಮಗೇ ಸಚಿವ ಸ್ಥಾನ ಒಲಿದು ಬರುತ್ತದೆ ಎಂದು ತುಂಬು ವಿಶ್ವಾಸದಿಂದ ಬೀಗುತ್ತಿದ್ದಾರೆ. ಮೆಜಾರಿಟಿ ಬಂದ ಪಕ್ಷದಲ್ಲಿ ಇದೆಲ್ಲಾ ಮಾಮೂಲಿ ಸಂಗತಿ.

ಆದರೆ ಮಂತ್ರಿಗಿರಿ ಆಕಾಂಕ್ಷಿಗಳು ಕಡಿಮೆಯೇನಿಲ್ಲ.
ಮತ್ತೊಂದು ಮುಖ್ಯ ವಿಚಾರವೆಂದರೆ ಡಿಸಿಎಂ ಸ್ಥಾನಗಳ ರಚನೆ. ಅಲ್ಲೂ ಒಂದಿಷ್ಟು ಅಸಮಾಧಾನ ಹೊಗೆಯಾಡುತ್ತದೆ.
ಜಾತಿ, ವರ್ಗಗಳ ಸಮಸ್ಯೆ ಕಾಡುತ್ತದೆ.
ಈಗಾಗಲೇ ಒಕ್ಕಲಿಗ ಸಮುದಾಯದ ಮಠಾಧೀಶರು ಸಭೆ ನಡೆಸಿದ್ದಾರೆ. ಮುಖ್ಯಮಂತ್ರಿಯ ಆಯ್ಕೆ ಬಗ್ಗೆ ಸಂದೇಶ ಹೋಗಿದೆ.
ಇನ್ನು ಲಿಂಗಾಯತ ಸಿಎಂ ಆಗಬೇಕು ಅಂತ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಚುನಾವಣೆಗೆ ಮುನ್ನವೇ ಫರ್ಮಾನು ರೀತಿ ಸಲಹೆ ಸೂಚಿಸಿದ್ದಾರೆ. ಇವೆಲ್ಲಾ ಒಳಸುಳಿಗಳನ್ನೂ ಹೈಕಮಾಂಡ್ ಗಮನಿಸಬೇಕಾಗುತ್ತದೆ.
ಮುಖ್ಯಮಂತ್ರಿ ಆಯ್ಕೆ ಮೀಟಿಂಗ್ ಕಾವೇರುತ್ತಿದೆ.

ಕಡೆಗೆ ಹೈಕಮಾಂಡ್ ಅಂಗಳಕ್ಕೆ ಸಿಎಂ ಆಯ್ಕೆ ಚೆಂಡು ದೆಹಲಿಗೆ ತಲುಪುವುದರಲ್ಲಿ ಸಂದೇಹವಿಲ್ಲ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Gurudatta Hegde ಅತ್ಯಾಧುನಿಕ ತಂತ್ರಾಂಶವನ್ನು ಅರಿತು ಕಾರ್ಯಕ್ಷೇತ್ರದಲ್ಲಿ ಅಳವಡಿಸಿಕೊಳ್ಳಿ : ಗುರುದತ್ತ ಹೆಗಡೆ

Gurudatta Hegde ನಾಗಾಲೋಟದಲ್ಲಿ ಬದಲಾಗುತ್ತಿರುವ ಕಾಲಮಾನಕ್ಕೆ ಅನುಗುಣವಾಗಿ ಸರ್ಕಾರವು ಸುಗಮ ಆಡಳಿತಕ್ಕೆ...

MESCOM ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜೂ.26 ರಂದು ಬೆಳಿಗ್ಗೆ...

Backward Classes Welfare Department ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ...

Department of Horticulture ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Department of Horticulture ಭದ್ರಾವತಿ ತಾಲೂಕು ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ...