Saturday, September 28, 2024
Saturday, September 28, 2024

Congress Karnataka ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ವಿಜಯೋತ್ಸವ

Date:

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ಪೂರಕವಾದ ಎಸ್.ಎಲ್.ಬೋಜೇಗೌಡ ಅವರಿಗೆ ಎ.ಸಿ.ಕುಮಾರಗೌಡ ನೇತೃತ್ವದಲ್ಲಿ ಭಾನುವಾರ ನಗರದ ಹೊಸಬಡಾವಣೆ ಸರ್ಕಲ್‌ನಲ್ಲಿ ಸನ್ಮಾನಿಸಿ ಹಾಲಿನ ಅಭಿಷೇಕ ಮಾಡುವ ಮೂಲಕ ಯುವಕರು ಸಂಭ್ರಮಿಸಿದರು.
ಈ ವೇಳೆ ಎಸ್.ಎಲ್.ಬೋಜೇಗೌಡ ಮಾತನಾಡಿ ಚುನಾವಣೆಯಲ್ಲಿ ಚಿಕ್ಕಮಗಳೂರು ತಾಲ್ಲೂಕು ವಿಭಿನ್ನ ಕ್ಷೇತ್ರವಾಗಿದೆ. ಎಲ್ಲಾ ಮತದಾರರ ಆಶಯದಂತೆ ಭ್ರಷ್ಟ ಆಡಳಿತವನ್ನು ತೊಲಗಿಸಿ ಜನಾಭಿಪ್ರಾಯದಂತೆ ಆಡಳಿತ ನಡೆಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಕ್ಷೇತ್ರದಲ್ಲಿ ನೊಂದ ಜೀವಿಗಳು ಸಮಸ್ಯೆಗಳಿಗೀಡಾದ ಹಿನ್ನೆಲೆಯಲ್ಲಿ ಮತದಾರರು ತಿರುಗಿ ಬಿದ್ದು ಬದಲಾವಣೆ ಬಯಸಿದ್ದಾರೆ ಎಂದು ತಿಳಿಸಿದರು.

Congress Karnataka ಚಿಕ್ಕಮಗಳೂರು ನಗರಸಭಾ ಸದಸ್ಯ ಎ.ಸಿ.ಕುಮಾರಗೌಡ ಮಾತನಾಡಿ ಹಿಂದಿನ ಶಾಸಕರನ್ನು ಮಣಿಸಿ ನೂತನ ಶಾಸಕರನ್ನು ಹುಟ್ಟುಹಾಕಲು ಶ್ರಮವಹಿಸಿದ ಎಸ್.ಎಲ್.ಬೋಜೇಗೌಡರಿಗೆ ಸನ್ಮಾನಿಸುತ್ತಿರುವುದು ಅತ್ಯಂತ ಸಂತಸದ ಸಂಗತಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಗೋಪಿ, ದಿನೇಶ್, ಮುಖಂಡರುಗಳಾದ ಸಿ.ಕೆ.ಮೂರ್ತಿ, ಪೂರ್ಣೇಶ್, ದೀಪು, ಹೆಚ್.ಎಸ್.ಮಂಜಪ್ಪ, ಆನಂದೇಗೌಡ, ಶಿವಕುಮಾರ್, ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.

Congress Karnataka

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...