Saturday, December 6, 2025
Saturday, December 6, 2025

Congress Karnataka ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ವಿಜಯೋತ್ಸವ

Date:

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ಪೂರಕವಾದ ಎಸ್.ಎಲ್.ಬೋಜೇಗೌಡ ಅವರಿಗೆ ಎ.ಸಿ.ಕುಮಾರಗೌಡ ನೇತೃತ್ವದಲ್ಲಿ ಭಾನುವಾರ ನಗರದ ಹೊಸಬಡಾವಣೆ ಸರ್ಕಲ್‌ನಲ್ಲಿ ಸನ್ಮಾನಿಸಿ ಹಾಲಿನ ಅಭಿಷೇಕ ಮಾಡುವ ಮೂಲಕ ಯುವಕರು ಸಂಭ್ರಮಿಸಿದರು.
ಈ ವೇಳೆ ಎಸ್.ಎಲ್.ಬೋಜೇಗೌಡ ಮಾತನಾಡಿ ಚುನಾವಣೆಯಲ್ಲಿ ಚಿಕ್ಕಮಗಳೂರು ತಾಲ್ಲೂಕು ವಿಭಿನ್ನ ಕ್ಷೇತ್ರವಾಗಿದೆ. ಎಲ್ಲಾ ಮತದಾರರ ಆಶಯದಂತೆ ಭ್ರಷ್ಟ ಆಡಳಿತವನ್ನು ತೊಲಗಿಸಿ ಜನಾಭಿಪ್ರಾಯದಂತೆ ಆಡಳಿತ ನಡೆಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಕ್ಷೇತ್ರದಲ್ಲಿ ನೊಂದ ಜೀವಿಗಳು ಸಮಸ್ಯೆಗಳಿಗೀಡಾದ ಹಿನ್ನೆಲೆಯಲ್ಲಿ ಮತದಾರರು ತಿರುಗಿ ಬಿದ್ದು ಬದಲಾವಣೆ ಬಯಸಿದ್ದಾರೆ ಎಂದು ತಿಳಿಸಿದರು.

Congress Karnataka ಚಿಕ್ಕಮಗಳೂರು ನಗರಸಭಾ ಸದಸ್ಯ ಎ.ಸಿ.ಕುಮಾರಗೌಡ ಮಾತನಾಡಿ ಹಿಂದಿನ ಶಾಸಕರನ್ನು ಮಣಿಸಿ ನೂತನ ಶಾಸಕರನ್ನು ಹುಟ್ಟುಹಾಕಲು ಶ್ರಮವಹಿಸಿದ ಎಸ್.ಎಲ್.ಬೋಜೇಗೌಡರಿಗೆ ಸನ್ಮಾನಿಸುತ್ತಿರುವುದು ಅತ್ಯಂತ ಸಂತಸದ ಸಂಗತಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಗೋಪಿ, ದಿನೇಶ್, ಮುಖಂಡರುಗಳಾದ ಸಿ.ಕೆ.ಮೂರ್ತಿ, ಪೂರ್ಣೇಶ್, ದೀಪು, ಹೆಚ್.ಎಸ್.ಮಂಜಪ್ಪ, ಆನಂದೇಗೌಡ, ಶಿವಕುಮಾರ್, ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.

Congress Karnataka

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...