Thursday, June 12, 2025
Thursday, June 12, 2025

Congress Karnataka ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ವಿಜಯೋತ್ಸವ

Date:

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ಪೂರಕವಾದ ಎಸ್.ಎಲ್.ಬೋಜೇಗೌಡ ಅವರಿಗೆ ಎ.ಸಿ.ಕುಮಾರಗೌಡ ನೇತೃತ್ವದಲ್ಲಿ ಭಾನುವಾರ ನಗರದ ಹೊಸಬಡಾವಣೆ ಸರ್ಕಲ್‌ನಲ್ಲಿ ಸನ್ಮಾನಿಸಿ ಹಾಲಿನ ಅಭಿಷೇಕ ಮಾಡುವ ಮೂಲಕ ಯುವಕರು ಸಂಭ್ರಮಿಸಿದರು.
ಈ ವೇಳೆ ಎಸ್.ಎಲ್.ಬೋಜೇಗೌಡ ಮಾತನಾಡಿ ಚುನಾವಣೆಯಲ್ಲಿ ಚಿಕ್ಕಮಗಳೂರು ತಾಲ್ಲೂಕು ವಿಭಿನ್ನ ಕ್ಷೇತ್ರವಾಗಿದೆ. ಎಲ್ಲಾ ಮತದಾರರ ಆಶಯದಂತೆ ಭ್ರಷ್ಟ ಆಡಳಿತವನ್ನು ತೊಲಗಿಸಿ ಜನಾಭಿಪ್ರಾಯದಂತೆ ಆಡಳಿತ ನಡೆಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಕ್ಷೇತ್ರದಲ್ಲಿ ನೊಂದ ಜೀವಿಗಳು ಸಮಸ್ಯೆಗಳಿಗೀಡಾದ ಹಿನ್ನೆಲೆಯಲ್ಲಿ ಮತದಾರರು ತಿರುಗಿ ಬಿದ್ದು ಬದಲಾವಣೆ ಬಯಸಿದ್ದಾರೆ ಎಂದು ತಿಳಿಸಿದರು.

Congress Karnataka ಚಿಕ್ಕಮಗಳೂರು ನಗರಸಭಾ ಸದಸ್ಯ ಎ.ಸಿ.ಕುಮಾರಗೌಡ ಮಾತನಾಡಿ ಹಿಂದಿನ ಶಾಸಕರನ್ನು ಮಣಿಸಿ ನೂತನ ಶಾಸಕರನ್ನು ಹುಟ್ಟುಹಾಕಲು ಶ್ರಮವಹಿಸಿದ ಎಸ್.ಎಲ್.ಬೋಜೇಗೌಡರಿಗೆ ಸನ್ಮಾನಿಸುತ್ತಿರುವುದು ಅತ್ಯಂತ ಸಂತಸದ ಸಂಗತಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಗೋಪಿ, ದಿನೇಶ್, ಮುಖಂಡರುಗಳಾದ ಸಿ.ಕೆ.ಮೂರ್ತಿ, ಪೂರ್ಣೇಶ್, ದೀಪು, ಹೆಚ್.ಎಸ್.ಮಂಜಪ್ಪ, ಆನಂದೇಗೌಡ, ಶಿವಕುಮಾರ್, ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.

Congress Karnataka

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...