Tuesday, August 25, 2026
Tuesday, August 25, 2026

Karnataka CM Siddaramaiah Rejects Zero-Traffic Facility ಝೀರೋ ಟ್ರಾಫಿಕ್ ಮತ್ತು ಹಾರ ,ಶಾಲು ಸನ್ಮಾನ ಬೇಡವೆಂದ ಸಿಎಂ ಸಿದ್ಧರಾಮಯ್ಯ

Date:

Karnataka CM Siddaramaiah Rejects Zero-Traffic Facility ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ದಿಟ್ಟ ತೀರ್ಮಾನ ಕೈಗೊಂಡಿದ್ದಾರೆ.

ತಮಗೆ ನೀಡಲಾಗಿರುವ ಝೀರೋ ಟ್ರಾಫಿಕ್ ಸೌಲಭ್ಯವನ್ನು ವಾಪಸ್ಸು ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ರಿಗೆ ಸೂಚಿಸಿದ್ದಾರೆ.

ಈ ವಿಷಯದ ಕುರಿತು ಟ್ವಿಟರ್ ನಲ್ಲಿ ಹೀಗೆ ಬರೆದಿದ್ದಾರೆ. ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಟ್ರಾಫಿಕ್ ಸೌಲಭ್ಯ ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ. ಜೀರೋ ಟ್ರಾಫಿಕ್ ನಿಂದಾಗಿ ರಸ್ತೆಯಲ್ಲಿ ವಾಹನದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಬರೆದಿದ್ದಾರೆ.

Karnataka CM Siddaramaiah Rejects Zero-Traffic Facility ಮನೆ ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಲ್ಲಿ ಸಾರ್ವಜನಿಕರಿಂದ ಗೌರವ ಸನ್ಮಾನದ ರೂಪದಲ್ಲಿ ಹಾರ- ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸುವುದಿಲ್ಲ. ಪ್ರೀತಿ ಗೌರವವನ್ನು ಕಾಣಿಸಿಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನ ನೀಡಬಹುದು ಎಂದು ಸಿದ್ದರಾಮಯ್ಯ ಅವರು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...