Monday, February 2, 2026
Monday, February 2, 2026

Health Awareness ಮಕ್ಕಳ ಮನಸ್ಸಿನಲ್ಲಿ ಸಕಾರಾತ್ಮಕ ವಿಚಾರಗಳನ್ನ ಬೆಳೆಸಬೇಕು- ಡಾ.ಎಸ್.ಟಿ.ಅರವಿಂದ್

Date:

Health awareness ಮಕ್ಕಳ ಮನಸ್ಸು ತುಂಬಾ ಸೂಕ್ಷ್ಮ ಆಗಿದ್ದು, ಸಕರಾತ್ಮಕ ವಿಷಯಗಳನ್ನು ಮಕ್ಕಳ ಮನಸ್ಸಿನಲ್ಲಿ ಬೆಳೆಸಬೇಕು. ಮಕ್ಕಳ ಸರ್ವತೋಮುಖ ಏಳಿಗೆಯಲ್ಲಿ ಪೋಷಕರು ಹಾಗೂ ಶಿಕ್ಷಕರ ಪಾತ್ರ ಮುಖ್ಯ ಆಗಿರುತ್ತದೆ ಎಂದು ಮನೋವೈದ್ಯ ಡಾ. ಎಸ್.ಟಿ.ಅರವಿಂದ್ ಹೇಳಿದರು.

ಶಿವಮೊಗ್ಗದ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಹಾಗೂ ರೋಟರಿ ಮಿಡ್‌ಟೌನ್ ವತಿಯಿಂದ ಆಯೋಜಿಸಿದ್ದ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಮಕ್ಕಳ ಮನಸ್ಸಿನ ಭಾವನೆಗಳನ್ನು ಪೋಷಕರು ಅರ್ಥ ಮಾಡಿಕೊಳ್ಳಬೇಕು. ಅವರ ಭಾವನೆಗಳನ್ನು ಅರಿತು ಹೆಚ್ಚು ಸಮಯವನ್ನು ಮೀಸಲಿಡಬೇಕು. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಜತೆಯಲ್ಲಿ ಒಳ್ಳೆಯ ಹವ್ಯಾಸಗಳನ್ನು ಬೆಳೆಸಬೇಕು. ವ್ಯಾಯಾಮ, ಆರೋಗ್ಯಕರ ಚಟುವಟಿಕೆಗಳನ್ನು ಮಕ್ಕಳಿಗೆ ಕಲಿಸಬೇಕು ಎಂದು ತಿಳಿಸಿದರು.

ಇತ್ತೀಚೆಗೆ ಮಕ್ಕಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದೆ. ಆತ್ಮಸ್ಥೈರ್ಯ ಕೊರತೆ ಕಾಣುತ್ತಿದೆ. ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಬೇಕು. ಎಂತಹ ಸಂದರ್ಭಗಳೇ ಎದುರಾದರೂ ಧೈರ್ಯದಿಂದ ಎದುರಿಸುವ ಸಕರಾತ್ಮಕ ಮನೋಭಾವ ಬೆಳೆಸಬೇಕು ಎಂದು ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ ಹಾಗೂ ರೋಟರಿ ಮಿಡ್‌ಟೌನ್ ಶಿವಮೊಗ್ಗ ಅಧ್ಯಕ್ಷೆ ವೀಣಾ ಸುರೇಶ್ ಅವರು ಮನೋವೈದ್ಯ ಡಾ. ಎಸ್.ಟಿ.ಅರವಿಂದ್ ಅವರನ್ನು ಸನ್ಮಾನಿಸಿದರು.

ಆರೋಗ್ಯ ಜಾಗೃತಿ ಕಾರ್ಯಕ್ರಮದ ನಂತರ ಸದಸ್ಯರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.

Health awareness ಸದಸ್ಯರ ಪ್ರಶ್ನೆಗಳಿಗೆ ಸೂಕ್ತ ವಿಷಯಗಳೊಂದಿಗೆ ಅರವಿಂದ್ ಅವರು ಉತ್ತರಿಸಿದರು. ವೇದಿಕೆಯಲ್ಲಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕುಮಾರಸ್ವಾಮಿ, ಮುರಳಿ, ಜಗನ್ನಾಥ್, ಉಮಾ ಅಮರ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...