Monday, February 2, 2026
Monday, February 2, 2026

Kudali mutt ಪರಂಪರೆ ಮತ್ತು ಆಚಾರ ವಿಚಾರಗಳ ಮೂಲಕ ನಮ್ಮ ನೆಲೆಗಟ್ಟು ಕಂಡುಕೊಳ್ಳಲು ಸಾಧ್ಯ-ಶ್ರೀ ಅಭಿನವ ಶಂಕರ ಭಾರತಿಶ್ರೀ

Date:

Kudali mutt ಸಾಂಸ್ಕೃತಿಕ ಗುರುತಿಗೆ ಮಾತ್ರ ಪರಂಪರೆ ಬೇಕಾಗುತ್ತದೆ ಎಂಬುದು ನಮ್ಮೆಲ್ಲರ ಆಶಯವಾಗಿದೆ. ಆದರೆ ಪರಂಪರೆ ಎಂಬುದು ನಮ್ಮನ್ನು ಗುರುತಿಸುವುದರ ಜೊತೆಗೆ ನಮ್ಮನ್ನು ಶತಮಾನಗಳ ಕಾಲ ಮುಂದೆ ತೆಗೆದುಕೊಂಡು ಹೋಗುವ ಕಾರ್ಯ ಮಾಡುತ್ತದೆ. ಜೀವನದಲ್ಲಿ ಸಾಕಷ್ಟು ಏರುಪೇರುಗಳಿದ್ದು, ಅದನ್ನು ಸರಿದೂಗಿಸುವ ಶಕ್ತಿ ಪರಂಪರೆಗೆ ಇರುತ್ತದೆ ಎಂದು ಶ್ರೀಮದ್ ಜಗದ್ಗುರು ಕೂಡಲಿ ಸಂಸ್ಥಾನ ಉತ್ತರಾಧಿಕಾರಿಯಾಗಿ ಸ್ವೀಕರಿಸಿದ ಶ್ರೀ ಅಭಿನವ ಶಂಕರ ಭಾರತಿ ಸ್ವಾಮೀಜಿ ಅವರು ಹೇಳಿದರು.

ಹೊಳೆಹೊನ್ನೂರು ಸಮೀಪದ ಶ್ರೀ ಕ್ಷೇತ್ರ ಕೂಡಲಿ ಸಂಸ್ಥಾನ ನೂತನ ಸನ್ಯಾಸಪೂರ್ವಕ ಶಿಷ್ಯ ಪರಿಗ್ರಹಣ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಮ್ಮ ಜೀವನದ ಎಲ್ಲಾ ವಿಚಾರದಲ್ಲೂ ಪರಂಪರೆ ಎಂಬುದು ಅಳವಡಿಸಿಕೊಂಡರೆ ನಾವು ಮುನ್ನೆಲೆಗೆ ಬರುತ್ತೇವೆ. ಅದನ್ನು ಹೊರತುಪಡಿಸಿದರೆ ಸಾಕಷ್ಟು ಸಮಯ ಮತ್ತು ಪರಿಶ್ರಮ ಹಾಳು ಮಾಡಿಕೊಳ್ಳುತ್ತೇವೆ ಎಂದರು.

Kudali  mutt ನಾವು ಎಲ್ಲಿಯೇ ಹೋದರೂ, ನಮ್ಮ ಪರಂಪರೆ, ನಮ್ಮ ಆಚಾರ ವಿಚಾರಗಳನ್ನು ಮುಂದಿಟ್ಟುಕೊಂಡು ಸಾಕಿದರೆ ಮಾತ್ರ ಭಾರತದಂತಹ ಸಾಂಸ್ಕೃತಿಕ ರಾಷ್ಟ್ರದಲ್ಲಿ ನಮ್ಮ ನೆಲಗಟ್ಟು ಕಂಡುಕೊಳ್ಳಲು ಸಾಧ್ಯ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...