Monday, February 2, 2026
Monday, February 2, 2026

Madhu Bangarappa ಬಗರ್ ಹುಕುಂ ಸಾಗುವಳಿದಾರರ ಪರ ಹೋರಾಡುವೆ- ಮಧು ಬಂಗಾರಪ್ಪ

Date:

Madhu Bangarappa ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಸಚಿವ ಸಂಪುಟ ಇತ್ತೀಚೆಗೆ ರಚನೆಯಾಗಿದೆ. ಸಿದ್ದರಾಮಯ್ಯ ಸಂಪುಟಕ್ಕೆ ಎಸ್.ಮಧುಬಂಗಾರಪ್ಪ ಸೇರ್ಪಡೆಯಾಗಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿ.ಎಸ್.ಬಂಗಾರಪ್ಪರ ಪುತ್ರರಾಗಿದ್ದು,ಸೊರಬದ ಶಾಸಕರಾಗಿದ್ದಾರೆ‌. 2 ಬಾರಿ ಸೊರಬದ ಶಾಸಕರಾಗಿರುವ ಮಧುಬಂಗಾರಪ್ಪ ತಂದೆತಾಯಿಯರ ಮುದ್ದಿನ ಮಗ ಸಹೋದರಿಯರ ಪ್ರೀತಿಯ ಸಹೋದರ ಅಲ್ಲದೇ ರಾಜ್ ಕುಟುಂಬದ ಆಪ್ತ ಅತ್ಮೀಯ ಬಂಧುವೂ ಆಗಿದ್ದಾರೆ‌.
ತಂದೆಗೆ ತಕ್ಕಮಗ ಎಂದು ಸೈ ಎನಿಸಿಕೊಂಡಿರುವ ಮಧುಬಂಗಾರಪ್ಪ ಮಾಜಿ ಮುಖ್ಯಮಂತ್ರಿ ದಿ‌.ಎಸ್.ಬಂಗಾರಪ್ಪರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗುತ್ತಿದ್ದಾರೆ.ಅದೇ ಜನಪರ ಕಾಳಜಿ ರೈತಪರ ಪ್ರೇಮಿ,ನೊಂದವರ ಆಶಾಕಿರಣದಂತೆ ಹೆಜ್ಜೆ ಇಟ್ಟಿದ್ದಾರೆ.

ಸಂಪುಟ ವಿಸ್ತರಣೆಯಲ್ಲಿ ಮಧುಬಂಗಾರಪ್ಪರಿಗೂ ಸ್ಥಾನಮಾನ ದೊರಕಿದ್ದು, ಅವರು ಸಚಿವ ಸಂಪುಟ ಸೇರುತ್ತಿದ್ದಾರೆ.

ಯಾವುದೇ ಶುಭಕಾರ್ಯ ಮಾಡುವ ಮುನ್ನ ತಂದೆತಾಯಿಯರ ಆಶೀರ್ವಾದ ಪಡೆಯುವುದು ವಾಡಿಕೆ ಇದೆ. ದೈಹಿಕವಾಗಿ ಇಲ್ಲದಿದ್ದರೂ ಭೌತಿಕವಾಗಿ ತಮ್ಮೊಂದಿಗೆ
ಸದಾ ಇದ್ದಾರೆ ಎಂದು ಮಧುಬಂಗಾರಪ್ಪ ಹೇಳಿದ್ದಾರೆ.

ಅನ್ನದಾತರಿಗಾಗಿ
ಪಾದಯಾತ್ರೆ,ಬಗರ್‌ಹುಕುಂ ಸಾಗುವಳಿದಾರರ ಪರ‌ಹೋರಾಟ ಹೀಗೆ ನೊಂದವರಿಗೆ ನಾನಿದ್ದೇನೆ ಎಂಬ ಆಶಾಸ್ಫೂರ್ತಿ ಈ ಮಧುಬಂಗಾರಪ್ಪ…

ಪ್ರಮಾಣ ವಚನಕ್ಕೂ ಮುನ್ನ ನಿವಾಸದಲ್ಲಿ
ತಂದೆತಾಯಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ತಂದೆ ಬಂಗಾರಪ್ಪರನ್ನು ಒಂದು ಕ್ಷಣ ಸ್ಮರಿಸಿ ಧನ್ಯತಾಭಾವ ತೋರಿದರು. ಬೆಂಗಳೂರಿನಲ್ಲಿ ಸದಾಶಿವ ನಗರದ ಬಳಿ ಅಭಿಮಾನಿಗಳು ಕಾರ್ಯಕರ್ತರ ಸಂಭ್ರಮ ಮನೆ ಮಾಡಿತ್ತು. ಬೆಂಬಲಿಗರು ಹಾಗೂ ಕಾರ್ಯಕರ್ತರ ಆಗಮಿಸಿ ಶುಭಾಶಯ ಕೋರಿ ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಿದರು.

ಬೆಂಗಳೂರಿನ‌ ಸದಾಶಿವ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಧು ಬಂಗಾರಪ್ಪ ಅವರು ಮತ ನೀಡಿದ ಹಾಗೂ ನೀಡದ ಎಲ್ಲಾ ಸೊರಬ ಮತದಾರರಿಗೆ ಧನ್ಯವಾದಗಳನ್ನು ಸಲ್ಲಿಸಿದರು.

Madhu Bangarappa ಯಾವುದೇ ಹುದ್ದೆ ನಿಭಾಯಿಸಲು ಸಿದ್ದ.ಮುಂಬರಲಿರುವ
ಲೋಕಸಭಾ ಚುನಾವಣೆಗೆ ಪಕ್ಷದಿಂದ‌ ಸಿದ್ಧತೆಗಳು ಸಹ ನಡೆಯುತ್ತಿವೆ.ಸಚಿವ ಸ್ಥಾನ ಸಿಗುತ್ತದೆ ಎಂದು ನನಗೆ ವಿಶ್ವಾಸವಿತ್ತು.ವರಿಷ್ಠರು ಈಗ ಜವಾಬ್ದಾರಿ ನೀಡಿದ್ದಾರೆ. ಶಾಸಕರೆಲ್ಲರಿಗೂ ಸಚಿವರಾಗುವ ಅರ್ಹತೆ ಇರುತ್ತದೆ.ವರಿಷ್ಠರು ಅಳೆದುತೂಗಿ ಸಚಿವ ಸ್ಥಾನ ನೀಡಿದ್ದಾರೆ.ಪಕ್ಷ ನೀಡಿದ ಜವಾಬ್ದಾರಿಯನ್ನು ಕರ್ತವ್ಯವನ್ನು ನಿಷ್ಠೆಯಿಂದ ನಿಭಾಯಿಸುತ್ತೇನೆ‌.ಸೊರಬ ಜನತೆಗೆ ಕಷ್ಟವಾಗದಂತೆ ನೋಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...