Monday, December 15, 2025
Monday, December 15, 2025

Dr. Selvamani R ಮಳೆಯಿಂದ ಸಾರ್ವಜನಿಕರಿಗೆ ತೊಂದರೆಯಾಗ ಬಹುದಾದ ಸ್ಥಳಗಳಿಗೆ ಜಿಲ್ಲಾಧಿಕಾರಿ ಭೇಟಿ

Date:

Dr. Selvamani R ಶಿವಮೊಗ್ಗ, ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಅವರು ಇಂದೂ ಸಹ ನಗರ ಹಾಗೂ ಹೊರವಲಯದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಮಳೆಯಿಂದ ಸಮಸ್ಯೆ ಎದುರಿಸಬಹುದಾದ ಸ್ಥಳಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸೂಕ್ತ ಮುಂಜಾಗ್ರತಾ ಕ್ರಮ ಅನುಸರಿಸುವಂತೆ ಸಲಹೆ-ಸೂಚನೆ ನೀಡಿದರು.

ಪಾಲಿಕೆ ವ್ಯಾಪ್ತಿಯ ಎಲ್‍ಬಿಎಸ್ ನಗರದ ಚಾನಲ್‍ಗೆ ಭೇಟಿ ನೀಡಿ, ಚಾನಲ್‍ನಲ್ಲಿರುವ ಗಿಡಗಂಟಿ, ಕಸ ತೆಗೆಸಬೇಕು. ಇಲ್ಲವಾದಲ್ಲಿ ಮಳೆ ನೀರು ಸರಾಗವಾಗಿ ಹರಿಯದೇ ನೀರು ಹೊರಗೆ ನುಗ್ಗುವ ಸಂಭವವಿದ್ದು, ನೀರು ಸರಾಗವಾಗಿ ಹರಿಯಲು ಅನುವಾಗುವಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ತಿಳಿಸಿದರು.

ಶರಾವತಿ ನಗರ ಚಾನಲ್ ಬಳಿ ಭೇಟಿ ನೀಡಿ, ಚರಂಡಿ ಕೊಳಚೆ ನೀರನ್ನು ಚಾನಲ್‍ಗೆ ಬಿಡದಂತೆ ಕ್ರಮ ವಹಿಸಬೇಕೆಂದು ತಿಳಿಸಿದ ಅವರು ನಗರದ ಹೊರ ವಲಯದ ಗೋಪಿಶೆಟ್ಟಿಕೊಪ್ಪದ ಚಾನೆಲ್ ತಿರುವಿನಲ್ಲಿ ನೀರು ರಭಸವಾಗಿ ಹರಿಯುವುದರಿಂದ ಕಳೆದ ಬಾರಿ ಚಾನಲ್ ಏರಿ ಒಡೆದಿತ್ತು. ಈ ಬಾರಿ ಹಾಗಾಗದಂತೆ ರಾಮೇನಕೊಪ್ಪ ಬಳಿಯ ಕಾನೆಹಳ್ಳಕ್ಕೆ ನೀರು ಹರಿಸುವ ಮೂಲಕ ಆ ರಭಸವನ್ನು ಕಡಿಮೆ ಮಾಡಬಹುದೆಂದು ಸಲಹೆ ನೀಡಿದರು.

Dr. Selvamani R ವಿವಿಧ ನಾಲೆಗಳು, ರಾಜ ಕಾಲುವೆ, ಚಾನಲ್, ಚರಂಡಿಗಳನ್ನು ಪರಿಶೀಲಿಸಿ, ಮಳೆ ಆರಂಭವಾಗುವ ಮುನ್ನ ಕಸ, ಮಣ್ಣು, ಹೂಳು ತೆಗೆಸುವಂತೆ ಹಾಗೂ ಇತರೆ ಪರ್ಯಾಯ ವ್ಯವಸ್ಥೆ ಮಾಡಿ ತೊಂದರೆಯಾಗದಂತೆ ಸೂಕ್ತ ರೀತಿಯಲ್ಲಿ ಕ್ರಮ ವಹಿಸುವಂತೆ ಸಣ್ಣ ನೀರಾವರಿ ಇಲಾಖೆ, ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...