Saturday, December 6, 2025
Saturday, December 6, 2025

Dr. Selvamani R ಮಳೆಯಿಂದ ಸಾರ್ವಜನಿಕರಿಗೆ ತೊಂದರೆಯಾಗ ಬಹುದಾದ ಸ್ಥಳಗಳಿಗೆ ಜಿಲ್ಲಾಧಿಕಾರಿ ಭೇಟಿ

Date:

Dr. Selvamani R ಶಿವಮೊಗ್ಗ, ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಅವರು ಇಂದೂ ಸಹ ನಗರ ಹಾಗೂ ಹೊರವಲಯದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಮಳೆಯಿಂದ ಸಮಸ್ಯೆ ಎದುರಿಸಬಹುದಾದ ಸ್ಥಳಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸೂಕ್ತ ಮುಂಜಾಗ್ರತಾ ಕ್ರಮ ಅನುಸರಿಸುವಂತೆ ಸಲಹೆ-ಸೂಚನೆ ನೀಡಿದರು.

ಪಾಲಿಕೆ ವ್ಯಾಪ್ತಿಯ ಎಲ್‍ಬಿಎಸ್ ನಗರದ ಚಾನಲ್‍ಗೆ ಭೇಟಿ ನೀಡಿ, ಚಾನಲ್‍ನಲ್ಲಿರುವ ಗಿಡಗಂಟಿ, ಕಸ ತೆಗೆಸಬೇಕು. ಇಲ್ಲವಾದಲ್ಲಿ ಮಳೆ ನೀರು ಸರಾಗವಾಗಿ ಹರಿಯದೇ ನೀರು ಹೊರಗೆ ನುಗ್ಗುವ ಸಂಭವವಿದ್ದು, ನೀರು ಸರಾಗವಾಗಿ ಹರಿಯಲು ಅನುವಾಗುವಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ತಿಳಿಸಿದರು.

ಶರಾವತಿ ನಗರ ಚಾನಲ್ ಬಳಿ ಭೇಟಿ ನೀಡಿ, ಚರಂಡಿ ಕೊಳಚೆ ನೀರನ್ನು ಚಾನಲ್‍ಗೆ ಬಿಡದಂತೆ ಕ್ರಮ ವಹಿಸಬೇಕೆಂದು ತಿಳಿಸಿದ ಅವರು ನಗರದ ಹೊರ ವಲಯದ ಗೋಪಿಶೆಟ್ಟಿಕೊಪ್ಪದ ಚಾನೆಲ್ ತಿರುವಿನಲ್ಲಿ ನೀರು ರಭಸವಾಗಿ ಹರಿಯುವುದರಿಂದ ಕಳೆದ ಬಾರಿ ಚಾನಲ್ ಏರಿ ಒಡೆದಿತ್ತು. ಈ ಬಾರಿ ಹಾಗಾಗದಂತೆ ರಾಮೇನಕೊಪ್ಪ ಬಳಿಯ ಕಾನೆಹಳ್ಳಕ್ಕೆ ನೀರು ಹರಿಸುವ ಮೂಲಕ ಆ ರಭಸವನ್ನು ಕಡಿಮೆ ಮಾಡಬಹುದೆಂದು ಸಲಹೆ ನೀಡಿದರು.

Dr. Selvamani R ವಿವಿಧ ನಾಲೆಗಳು, ರಾಜ ಕಾಲುವೆ, ಚಾನಲ್, ಚರಂಡಿಗಳನ್ನು ಪರಿಶೀಲಿಸಿ, ಮಳೆ ಆರಂಭವಾಗುವ ಮುನ್ನ ಕಸ, ಮಣ್ಣು, ಹೂಳು ತೆಗೆಸುವಂತೆ ಹಾಗೂ ಇತರೆ ಪರ್ಯಾಯ ವ್ಯವಸ್ಥೆ ಮಾಡಿ ತೊಂದರೆಯಾಗದಂತೆ ಸೂಕ್ತ ರೀತಿಯಲ್ಲಿ ಕ್ರಮ ವಹಿಸುವಂತೆ ಸಣ್ಣ ನೀರಾವರಿ ಇಲಾಖೆ, ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...