Saturday, April 26, 2025
Saturday, April 26, 2025

Shivamogga District Chamber of Commerce & Industry ಯಾರಿಗೂ ತೊಂದರೆಯಾಗದಂತೆ ಕಾಯ್ದೆಗಳ ಅನುಷ್ಠಾನವಾಗಬೇಕು-ಎನ್.ಗೋಪಿನಾಥ್

Date:

Shivamogga District Chamber of Commerce & Industry ರೆರಾ ಕಾಯ್ದೆಯು ಗ್ರಾಹಕರ ಹಿತರಕ್ಷಣೆಯಿಂದ ಜಾರಿ ಆಗಿದ್ದರೂ ನಿವೇಶನ ಮಾಲೀಕರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರಗಳು ಗಮನ ವಹಿಸಿ ಪರಿಹರಿಸುವ ಕೆಲಸ ಮಾಡಬೇಕಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.

ಶಿವಮೊಗ್ಗ ಜಿಲ್ಲಾ ನಿವೇಶನ ಮಾಲೀಕರ ಸಂಘದ ಸಹಯೋಗದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ರೆರಾ ಕಾಯ್ದೆ ಹಾಗೂ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಕಾನೂನು ಅನುಷ್ಠಾನ ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ರೆರಾ ಕಾಯ್ದೆ ಅನುಷ್ಠಾನದಿಂದ ನಿವೇಶನ ಮಾಲೀಕರು, ಕಾನೂನು ಪಾಲನೆ ಹಾಗೂ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿರುವ ಸಂದರ್ಭಗಳಲ್ಲಿ ಆಗುವ ಸಮಸ್ಯೆಗಳ ಬಗ್ಗೆ ಅವಲೋಕನ ನಡೆಸುವ ಅಗತ್ಯವಿದೆ. ಯಾರಿಗೂ ತೊಂದರೆ ಆಗದಂತೆ ಕಾಯ್ದೆಗಳ ಅನುಷ್ಠಾನ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸರ್ಕಾರದ ಗಮನಕ್ಕೆ ತರಬೇಕಿದೆ ಎಂದು ತಿಳಿಸಿದರು.

ಅಮೃತ ಮಹೋತ್ಸವ ಪ್ರಯುಕ್ತ ಸಂಘವು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ನಿವೇಶನ ಮಾಲೀಕರಿಗೆ ಕಾಯ್ದೆ ಕುರಿತು ಜಾಗೃತಿ ಮೂಡಿಸುವ ಆಶಯದಿಂದ ರೆರಾ ಕಾಯ್ದೆ ಬಗ್ಗೆ ಉಪನ್ಯಾಸ ಹಮ್ಮಿಕೊಳ್ಳಲಾಯಿತು.

ಮುಂದಿನ ದಿನಗಳಲ್ಲಿ ಉಪಯುಕ್ತ ಆಗುವ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.

Shivamogga District Chamber of Commerce & Industry ಶಿವಮೊಗ್ಗ ಜಿಲ್ಲಾ ನಿವೇಶನ ಮಾಲೀಕರ ಸಂಘದ ಪ್ರಧಾನ ಕಾರ್ಯದಶಿ ಶ್ರೀಕಾಂತ್ ಕಾಮತ್ ಮಾತನಾಡಿ, ರೆರಾ ಕಾಯ್ದೆ ಅನುಷ್ಠಾನದಿಂದ ಅಗುತ್ತಿರುವ ತಾಂತ್ರಿಕ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ವಹಿಸಲು ಸರ್ಕಾರ ಗಮನ ವಹಿಸಬೇಕಿದೆ. ನಿವೇಶನ ಮಾಲೀಕರಿಗೆ ಆಗುವ ಸಮಸ್ಯೆಗಳನ್ನು ತಪ್ಪಿಸಬೇಕಿದೆ ಎಂದು ತಿಳಿಸಿದರು.

ರೆರಾ ಕಾಯ್ದೆ ಹಾಗೂ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಕಾನೂನು ಅನುಷ್ಠಾನ ವಿಷಯ ಕುರಿತು ವಿನಯ್ ತ್ಯಾಗರಾಜ್ ಹಾಗೂ ಇ.ಸುಹೈಲ್ ಅಹ್ಮದ್ ವಿಶೇಷ ಉಪನ್ಯಾಸ ನೀಡಿದರು.

ಕಾನೂನು ನಿಯಮ ಹಾಗೂ ಪಾಲಿಸಬೇಕಾದ ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ನಿರ್ದೇಶಕ ಜಗದೀಶ್ ಮಾತನವರ್, ಮಂಜೇಗೌಡ, ಪರಮೇಶ್ವರ್, ಪ್ರಮುಖರಾದ ಕಡಿದಾಳ್ ಗೋಪಾಲ್, ಖಾದರ್ ಪಾಷಾ, ಮಂಜುನಾಥ್, ಕೆ.ವಿ.ವಸಂತ್ ಕುಮಾರ್, ಜೆ.ಆರ್.ವಾಸುದೇವ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Defense University ಪಠ್ಯಕ್ರಮದ ರಚನೆ & ಕೌಶಲ್ಯಾಭಿವೃದ್ಧಿಗೆಒತ್ತು-ರಾಷ್ಟ್ರೀಯ ರಕ್ಷಾ ವಿವಿಯಲ್ಲಿ ವೃತ್ತಿ ಸಮಾಲೋಚನೆ ಯಶಸ್ವಿ

National Defense University ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ (RRU), ಶಿವಮೊಗ್ಗ ಕ್ಯಾಂಪಸ್ನಲ್ಲಿ,...

Digital library ಹೊಸ ವಿಷಯ ಕಲಿಕೆ ಸಂಗಡ ಮಕ್ಕಳು ದೈಹಿಕ & ಮಾನಸಿಕ ದೃಢತೆ ಸಾಧಿಸಬೇಕು- ವೀರೇಶ್ ಕ್ಯಾತನಕೊಪ್ಪ

Digital library ಮಕ್ಕಳಿಗೆ ಬೇಸಿಗೆ ಶಿಬಿರಗಳು ಅತ್ಯಂತ ಅವಶ್ಯಕ ಎಂದು ಸೂಗುರು...

CM siddharamaih ಪಹಲ್ಗಾಮ್ ದುರ್ಘಟನೆ‌ ಗುಪ್ತಚರ ವ್ಯವಸ್ಥೆಯ ವೈಫಲ್ಯ- ಮುಖ್ಯಮಂತ್ರಿ ಸಿದ್ಧರಾಮಯ್ಯ

CM siddharamaih ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ...