Saturday, September 28, 2024
Saturday, September 28, 2024

NSS Camp ವಿಟಗೊಂಡನಕೊಪ್ಪದಲ್ಲಿ ಎನ್ ಎಸ್ಎಸ್ ಶಿಬಿರ

Date:

NSS Camp ವಿಟಗೊಂಡನಕೊಪ್ಪದಲ್ಲಿ ಎನ್ ಎಸ್ಎಸ್ ಶಿಬಿರ ಶಿವಮೊಗ್ಗ ಮಾನಸ ಟ್ರಸ್ಟ್(ರಿ) ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಅಶೋಕ್ ಪೈ ಕಾಲೇಜಿನ ವತಿಯಿಂದ 07 ದಿನಗಳ ರಾಷ್ರೀಯ ಸೇವಾ ಯೋಜನೆ, ವಾರ್ಷಿಕ ವಿಶೇಷ ಶಿಬಿರ ವನ್ನು ಶಿವಮೊಗ್ಗ ಜಿಲ್ಲೆಯ ವಿಟಗೊಂಡನಕೊಪ್ಪ ಗ್ರಾಮದಲ್ಲಿ ಉದ್ಘಾಟನೆ ಮಾಡಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕುವೆಂಪು ವಿಶ್ವವಿದ್ಯಾಲಯದ ಎನ್.ಎಸ್.ಎಸ್ ಸಂಯೋಜನಾಧಿಕಾರಿಗಳಾದ ಡಾ.ನಾಗರಾಜ್ ಪರಿಸರ ನೆರವೇರಿಸಿದರು.

ಪ್ರತಿಯೊಬ್ಬರು ಪರಿಸರ, ಜಲ ಹಾಗೂ ಮಣ್ಣು ಇದರ ಮಹತ್ವವನ್ನು ಅರಿಯುವುದು ಅಗತ್ಯ ಮತ್ತು ಅನಿವಾರ್ಯ ಎಂದು ಹೇಳಿ, ಉದ್ಘಾಟಕರು ಪ್ಲಾಸ್ಟಿಕ್‌ನ ಬಳಕೆಯನ್ನು ಕಡಿಮೆ ಮಾಡಿ ಎಂದು ಕರೆ ನೀಡಿದರು.

ಇನ್ನೂ ಮುಂದಿನ 07 ದಿನಗಳಲ್ಲಿ ಶಿಬಿರಾರ್ಥಿಗಳು ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಮತ್ತು ಪ್ಲಾಸ್ಟಿಕ್ ಮುಕ್ತ ಭಾರತದ ಬಗ್ಗೆ ನಾಟಕಗಳನ್ನು ಮಾಡಿ ಗ್ರಾಮದ ಜನರಲ್ಲಿ ಜಾಗೃತಿಯನ್ನು ಮೂಡಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶ್ರೀ. ಕೃಷ್ಣಪ್ಪ ಸದಸ್ಯರು ರಾಮನಗರ ಗ್ರಾಮ ಪಂಚಾಯಿತಿ, ಮಾತನಾಡುತ್ತ ರಾಷ್ಟ್ರೀಯ ಸೇವಾ ಯೋಜನೆಯ ಗ್ರಾಮೀಣ ಶಿಬಿರಗಳು ಗ್ರಾಮಸ್ಥರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಹಳಷ್ಟು ವಿಷಯಗಳ ಅರಿವನ್ನು ಮೂಡಿಸುವ ವಿಶೇಷ ಕಾರ್ಯಕ್ರಮ, ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಪ್ರಪ್ರಥಮ ಶಿಬಿರವು ರಾಮನಗರದಲ್ಲಿ ನಡೆದಾಗ ಶಿಬಿರದಲ್ಲಿ ಹಲವು ಮಹತ್ವದ ವಿಷಯಗಳ ಕುರಿತು ಸಂಪನ್ಮೂಲ ವ್ಯಕ್ತಿಗಳು ಮಾಹಿತಿಯನ್ನು ನೀಡಿದ್ದು, ಈಗಲೂ ತಮಗೆಲ್ಲ ಅನುಕೂಲವಾಗಿದೆ ಎಂದು ತಿಳಿಸಿದರು.

ಅಲ್ಲದೇ ಶಿಬಿರದಲ್ಲಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳ ಬಗ್ಗೆ ಒಂದು ಒಳ್ಳೆಯ ಬಾಂದವ್ಯ ಏರ್ಪಡುತ್ತದೆ. ಅದು ಬಹಳ ಮುಖ್ಯವಾದ ಸಾಮಾಜಿಕ ಶಿಕ್ಷಣ ಎಂದು ತಿಳಿಸಿದರು.

NSS Camp ವಿಟಗೊಂಡನಕೊಪ್ಪದಲ್ಲಿ ಎನ್ ಎಸ್ಎಸ್ ಶಿಬಿರ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಊರಿನ ಅರ್ಚಕರಾದ ಶ್ರೀ ಶಿವಕುಮಾರ ಸ್ವಾಮಿಗಳು, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀ ರಾಮಚಂದ್ರರಾವ್ ರವರು ಹಿತನುಡಿಗಳನ್ನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಸಂಧ್ಯಾ ಕಾವೇರಿ ಕೆ,ರವರು ಅಧ್ಯಕ್ಷತೆ ವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...