Wednesday, July 9, 2025
Wednesday, July 9, 2025

NSS Camp ವಿಟಗೊಂಡನಕೊಪ್ಪದಲ್ಲಿ ಎನ್ ಎಸ್ಎಸ್ ಶಿಬಿರ

Date:

NSS Camp ವಿಟಗೊಂಡನಕೊಪ್ಪದಲ್ಲಿ ಎನ್ ಎಸ್ಎಸ್ ಶಿಬಿರ ಶಿವಮೊಗ್ಗ ಮಾನಸ ಟ್ರಸ್ಟ್(ರಿ) ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಅಶೋಕ್ ಪೈ ಕಾಲೇಜಿನ ವತಿಯಿಂದ 07 ದಿನಗಳ ರಾಷ್ರೀಯ ಸೇವಾ ಯೋಜನೆ, ವಾರ್ಷಿಕ ವಿಶೇಷ ಶಿಬಿರ ವನ್ನು ಶಿವಮೊಗ್ಗ ಜಿಲ್ಲೆಯ ವಿಟಗೊಂಡನಕೊಪ್ಪ ಗ್ರಾಮದಲ್ಲಿ ಉದ್ಘಾಟನೆ ಮಾಡಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕುವೆಂಪು ವಿಶ್ವವಿದ್ಯಾಲಯದ ಎನ್.ಎಸ್.ಎಸ್ ಸಂಯೋಜನಾಧಿಕಾರಿಗಳಾದ ಡಾ.ನಾಗರಾಜ್ ಪರಿಸರ ನೆರವೇರಿಸಿದರು.

ಪ್ರತಿಯೊಬ್ಬರು ಪರಿಸರ, ಜಲ ಹಾಗೂ ಮಣ್ಣು ಇದರ ಮಹತ್ವವನ್ನು ಅರಿಯುವುದು ಅಗತ್ಯ ಮತ್ತು ಅನಿವಾರ್ಯ ಎಂದು ಹೇಳಿ, ಉದ್ಘಾಟಕರು ಪ್ಲಾಸ್ಟಿಕ್‌ನ ಬಳಕೆಯನ್ನು ಕಡಿಮೆ ಮಾಡಿ ಎಂದು ಕರೆ ನೀಡಿದರು.

ಇನ್ನೂ ಮುಂದಿನ 07 ದಿನಗಳಲ್ಲಿ ಶಿಬಿರಾರ್ಥಿಗಳು ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಮತ್ತು ಪ್ಲಾಸ್ಟಿಕ್ ಮುಕ್ತ ಭಾರತದ ಬಗ್ಗೆ ನಾಟಕಗಳನ್ನು ಮಾಡಿ ಗ್ರಾಮದ ಜನರಲ್ಲಿ ಜಾಗೃತಿಯನ್ನು ಮೂಡಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶ್ರೀ. ಕೃಷ್ಣಪ್ಪ ಸದಸ್ಯರು ರಾಮನಗರ ಗ್ರಾಮ ಪಂಚಾಯಿತಿ, ಮಾತನಾಡುತ್ತ ರಾಷ್ಟ್ರೀಯ ಸೇವಾ ಯೋಜನೆಯ ಗ್ರಾಮೀಣ ಶಿಬಿರಗಳು ಗ್ರಾಮಸ್ಥರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಹಳಷ್ಟು ವಿಷಯಗಳ ಅರಿವನ್ನು ಮೂಡಿಸುವ ವಿಶೇಷ ಕಾರ್ಯಕ್ರಮ, ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಪ್ರಪ್ರಥಮ ಶಿಬಿರವು ರಾಮನಗರದಲ್ಲಿ ನಡೆದಾಗ ಶಿಬಿರದಲ್ಲಿ ಹಲವು ಮಹತ್ವದ ವಿಷಯಗಳ ಕುರಿತು ಸಂಪನ್ಮೂಲ ವ್ಯಕ್ತಿಗಳು ಮಾಹಿತಿಯನ್ನು ನೀಡಿದ್ದು, ಈಗಲೂ ತಮಗೆಲ್ಲ ಅನುಕೂಲವಾಗಿದೆ ಎಂದು ತಿಳಿಸಿದರು.

ಅಲ್ಲದೇ ಶಿಬಿರದಲ್ಲಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳ ಬಗ್ಗೆ ಒಂದು ಒಳ್ಳೆಯ ಬಾಂದವ್ಯ ಏರ್ಪಡುತ್ತದೆ. ಅದು ಬಹಳ ಮುಖ್ಯವಾದ ಸಾಮಾಜಿಕ ಶಿಕ್ಷಣ ಎಂದು ತಿಳಿಸಿದರು.

NSS Camp ವಿಟಗೊಂಡನಕೊಪ್ಪದಲ್ಲಿ ಎನ್ ಎಸ್ಎಸ್ ಶಿಬಿರ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಊರಿನ ಅರ್ಚಕರಾದ ಶ್ರೀ ಶಿವಕುಮಾರ ಸ್ವಾಮಿಗಳು, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀ ರಾಮಚಂದ್ರರಾವ್ ರವರು ಹಿತನುಡಿಗಳನ್ನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಸಂಧ್ಯಾ ಕಾವೇರಿ ಕೆ,ರವರು ಅಧ್ಯಕ್ಷತೆ ವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ನವದೆಹಲಿಯಲ್ಲಿ”ಸಿಎಂ”ಸಿದ್ಧರಾಮಯ್ಯ ಅವರಿಂದ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಭೇಟಿ

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ರಕ್ಷಣಾ ಸಚಿವ...

Rotary Club ರೋಟರಿ ಕ್ಲಬ್ ರಿವರ್ ಸೈಡ್ ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿ ಸನ್ಮಾನ

Rotary Club 24 ವರ್ಷಗಳಿಂದ ನಿರಂತರವಾಗಿ ಮನುಕುಲದ ಸೇವೆಯಲ್ಲಿ ಹಾಗೂ ಸಮಾಜಮುಖಿ...

Sitaramchandra Temple ಭಗವದ್ಗೀತೆಯ ಜ್ಞಾನದಿಂದ ಸಮಾಜದಲ್ಲಿ ಶಾಂತಿ & ಮಾನವೀಯತೆ ಸ್ಥಾಪನೆ- ಅಶೋಕ ಭಟ್

Sitaramchandra Temple ಭಗವದ್ಗೀತಾ ಜ್ಞಾನವನ್ನು ಪ್ರತಿಯೊಬ್ಬರು ಅಳವಡಿಸಿಕೊಂಡರೆ ಸರ್ವರೂ ಸಮಾನರಾಗಿ ಸಮಾಜದಲ್ಲಿ...

Congress Karnataka ಕೆಪಿಸಿಸಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ಇ.ಎನ್.ರಮೇಶ್

Congress Karnataka ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ...