Saturday, October 5, 2024
Saturday, October 5, 2024

Congress Karnataka ಸಾಗರದಲ್ಲಿ ಅಕ್ರಮ ಚಟುವಟಿಕೆ ನಿರ್ಮೂಲನೆಗೆ ಸೂಚನೆ-ಬೇಳೂರು ಗೋಪಾಲಕೃಷ್ಣ

Date:

Congress Karnataka ಸಾಗರದಲ್ಲಿ ಅಕ್ರಮ ಚಟುವಟಿಕೆಗಳ ನಿರ್ಮೂಲನೆಗೆ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ್ದೇನೆ ಎಂದು ಶಾಸಕ ಗೋಪಾಲಕೃಷ್ಣಬೇಳೂರು ಹೇಳಿದರು.

ಅವರು ಸಾಗರ ತಾಲ್ಲೂಕು ಪತ್ರಕರ್ತರ ಸಂಘ ಮತ್ತು ಪ್ರೆಸ್ ಟ್ರಸ್ಟ್ ಆಫ್ ಸಾಗರ್ ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ನೂತನ ಶಾಸಕರಿಗೆ ಅಭಿನಂದನೆ ಸ್ವೀಕರಿಸಿ ಮಾತನಾಡಿ ಓಸಿ ಮಟ್ಕ , ದಂಧೆ ಸೇರಿದಂತೆ ರೌಡಿ ಚಟುವಟಿಕೆಗಳ ನಿವಾರಣೆಯಾಗಬೇಕು ಎಂದು ರಕ್ಷಣಾ ಇಲಾಖೆಗೆ ತಿಳಿಸಿದ್ದೇನೆ ಎಂದರು.

ಮಾಧ್ಯಮಗಳು ಮುಕ್ತವಾಗಿ ಕಾರ್ಯನಿರ್ವಹಿಸುವ ಮೂಲಕ ನೈಜ್ಯ ವರದಿಗಳಿಗೆ ಸಹಕರಿಸುವ ಜೊತೆಗೆ ನಿಜವಾದ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲು ಯಾವುದೇ ಅಡಚಣೆಯಾಗದಂತೆ ಶಾಸಕನಾಗಿ ಸಂಪೂರ್ಣ ಪ್ರೋತ್ಸಾಹ ನೀಡುತ್ತೇನೆ ಎಂದರು.

ನಮ್ಮದೆ ಪಕ್ಷದ ಮುಖಂಡರು,ಸದಸ್ಯರುಗಳು ಪತ್ರಕರ್ತರುಗಳಿಗೆ ಯಾವುದೇ ಅಡಚಣೆ ಮಾಡುವುದಿಲ್ಲ.ನಮ್ಮ ವಿರುದ್ಧ ಬರುವ ವರದಿಗಳನ್ನು ಕ್ರೀಡಾಮನೋಭಾವನೆಯಿಂದ ಸ್ವೀಕರಿಸಿ ನಮ್ಮ ತಪ್ಪುಗಳಿದ್ದರೇ ತಿದ್ದಿಕೊಂಡು ನಡೆಯುವ ಮೂಲಕ ಉತ್ತಮ ಆಡಳಿತ ನೀಡಲು ಪ್ರಯತ್ನಿಸುತ್ತೇನೆ ಎಂದರು.

Congress Karnataka ಸಾಗರ ನಗರದ ಮೂಲಭೂತ ಸೌಕರ್ಯಗಳ ಕಲ್ಪಿಸುವಲ್ಲಿ ಮೊದಲ ಆದ್ಯತೆ ನೀಡುತ್ತೇನೆ,ರಸ್ತೆ,ಚರಂಡಿ ,ಕುಡಿಯುವ ನೀರು ,ವಿದ್ಯುತ್ ಹಾಗೂ ನೈರ್ಮಲ್ಯಗಳ ಕಡೆಗೆ ಹೆಚ್ಚು ಗಮನಹರಿಸುವ ಮೂಲಕ ಮಾದರಿ ಸಾಗರವನ್ನಾಗಿ ನಿರ್ಮಿಸಲು ಸಾರ್ವಜನಿಕರ ಹಾಗೂ ಪತ್ರಕರ್ತರುಗಳ ಸಲಹೆ ಸಹಕಾರ ಬೇಕು ಎಂದರು.
ಈ ಸಂದರ್ಭದಲ್ಲಿ ಪ್ರೆಸ್ ಟ್ರಸ್ಟ್ ಆಫ್ ಸಾಗರ್ ಅಧ್ಯಕ್ಷ ಹೆಚ್.ವಿ.ರಾಮಚಂದ್ರರಾವ್ ಅಧ್ಯಕ್ಷತೆ ವಹಿಸಿದ್ದರು.

ಸಾಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯದರ್ಶಿ ಎಸ್.ವಿ.ಹಿತಕರ ಜೈನ್,ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ರಾಜೇಶ್ ಭಡ್ತಿ,ತಾಲ್ಲೂಕು ಸಂಘದ ಪ್ರಧಾನಕಾರ್ಯದರ್ಶಿ ಗಣಪತಿಶಿರಳಗಿ,ಖಜಾಂಚಿ ರಮೇಶ್ ಎನ್,ಹಿರಿಯ ಪತ್ರಕರ್ತ ಎ.ಡಿ.ಸುಬ್ರಹ್ಮಣ್ಯಭಟ್,ಪತ್ರಕರ್ತ ಕೆ.ಎನ್.ವೆಂಕಟಗಿರಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಅಕ್ಟೋಬರ್ 7 ರಂದು ಆಲ್ಕೊಳ‌ ಸುತ್ತಮುತ್ತ ವಿದ್ಯುತ್ ಸರಬರಾಜು ಇರುವುದಿಲ್ಲ

MESCOM ಶಿವಮೊಗ್ಗ ಅಕ್ಟೋಬರ್ 05 (ಕರ್ನಾಟಕ ವಾರ್ತೆ): ಶಿವಮೊಗ್ಗ...

Nehru Stadium Shimoga ಪ್ರಾಥಮಿಕ ಶಾಲಾಮಕ್ಕಳ ಕ್ರೀಡಾಕೂಟ ಉದ್ಘಾಟನೆ

Nehru Stadium Shimoga ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ...

Shimoga Dasara 2024 ಶಿವಮೊಗ್ಗ ರಂಗದಸರಾದಲ್ಲಿ ಅ.5 ರಿಂದ ನಾಟಕ ಪ್ರದರ್ಶನಗಳ ಸುಗ್ಗಿ

Shimoga Dasara 2024 ಈ ಬಾರಿ ಶಿವಮೊಗ್ಗ ಮಹಾನಗರ ಪಾಲಿಕೆಯು ಆಯೋಜನೆ...

Shivamogga News ಕೆರೆ,ಕಟ್ಟೆ,ಹಳ್ಳ ಜಮೀನು ಇತರೆ ಸರ್ಕಾರದ ಸ್ವತ್ತು ಒತ್ತುವರಿ ಗಮನಕ್ಕೆ ಬಂದಾಕ್ಷಣ ಕ್ರಮ ಕೈಗೊಳ್ಳಿ-ನ್ಯಾ.ಬಿ.ಎ.ಪಾಟೀಲ್

Shivamogga News ಸರ್ಕಾರದ ಸ್ವತ್ತಿನ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು...