Sunday, August 2, 2026
Sunday, August 2, 2026

Press Agents Distributor Community ಪತ್ರಿಕಾ ಏಜೆಂಟರು, ವಿತರಕ ಸಮುದಾಯಕ್ಕೆ ಜೀವನ ಭದ್ರತೆ ನೀಡಲು ಮನವಿ

Date:

Press Agents Distributor Community ಸಾರ್ವಜನಿಕ ಕ್ಷೇತ್ರಗಳಲ್ಲಿ ಮಾಧ್ಯಮ ರಂಗ, ಪತ್ರಿಕಾ ರಂಗ ತನ್ನದೇ ಆದ ಜವಾಬ್ದಾರಿಯುತ ಕಾರ್ಯನಿರ್ವಹಿಸುತ್ತಿದೆ. ಪತ್ರಿಕಾ ರಂಗಕ್ಕೆ ಹಾಗೂ ಪತ್ರಿಕಾ ವಿತರಕರಿಗೆ ಹೊಸ ಸರ್ಕಾರ ಸೌಲಭ್ಯಗಳನ್ನು ಬಿಡುಗಡೆ ಮಾಡುವ ಮೂಲಕ ಪತ್ರಿಕೆಯ ಉಳಿವಿಗಾಗಿ ಮುಂದಾಗಬೇಕೆಂದು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಮಾಲತೇಶ್ ಅವರು ನೂತನ ಸರ್ಕಾರಕ್ಕೆ ಮನವಿ ಮಾಡುವುದಾಗಿ ಪತ್ರಿಕೆಯೊಂದಿಗೆ ಮಾತನಾಡಿದರು. ಸರ್ಕಾರದ ಸಾಧನೆಗಳನ್ನು, ಸರ್ಕಾರದ ಲೋಪ ದೋಷಗಳನ್ನೂ ಸುದ್ದಿ ರೂಪದಲ್ಲಿ ಸಾರ್ವಜನಿಕ ಓದುಗರಿಗೆ ತಲುಪಿಸುವ ಕೆಲಸ ನಿರ್ವಹಿಸುತ್ತಿದೆ. ಸಮಾಜ ತಿದ್ದುವ ಕೆಲಸದ ಜೊತೆಗೆ ಸರ್ಕಾರ , ಅಧಿಕಾರಿಗಳು ಜನಪ್ರತಿನಿಧಿಗಳ ಕಾರ್ಯವೈಕರಿ , ಸರ್ಕಾರದ ಸಮಾರಂಭ ಹಾಗೂ ಮಹತ್ವದ ಯೋಜನೆಗಳ ಸುದ್ದಿ ಬಿತ್ತರಿಸುವುದರೊಂದಿಗೆ ಜೊತೆ ಜೊತೆಯಲ್ಲಿ ಸಾರ್ವಜನಿಕರ, ವಿರೋಧ ಪಕ್ಷಗಳ, ಸಂಘ ಸಂಸ್ಥೆಗಳ ಪ್ರತಿಭಟನೆ, ಮನವಿಗಳ ಬಗ್ಗೆ ಸವಿಸ್ತಾರವಾಗಿ ಯಾವುದೇ ಆಮಿಷಗಳಿಗೆ ಪತ್ರಿಕಾರಂಗ ಒಳಗಾಗದೆ ನೈಜ ಸುದ್ದಿಗಳನ್ನು ಪ್ರಕಟಿಸುವ ಮೂಲಕ ಸರ್ಕಾರದ ಗಮನ ಹಾಗೂ ಸಾರ್ವಜನಿಕರ ಗಮನ ಸೆಳೆಯುತ್ತಿದೆ ಎಂದು ಹೇಳಿದರು.

ದೃಶ್ಯ ಮಾಧ್ಯಮ ರಂಗ ಬಂದ ನಂತರ ಪತ್ರಿಕಾ ರಂಗಕ್ಕೆ ಸ್ವಲ್ಪ ಹಿನ್ನಡೆಯಾಗಿದೆ. ಸುಮಾರು ಶತಮಾನಗಳ ಇತಿಹಾಸವಿರುವ ಪತ್ರಿಕಾ ರಂಗ ಇಂದು ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ಪತ್ರಿಕೆಗೂ ತಟ್ಟಿದೆ. ಸುದ್ದಿ ಬಿತ್ತರಿಸುವ ಪತ್ರಿಕೆಗೆ ಸರ್ಕಾರದಿಂದ ರಿಯಾಯಿತಿ ಸಿಗಬೇಕಿದೆ. ಪತ್ರಿಕಾ ಸಂಪಾದಕರ ಕಷ್ಟ ಸುಖಗಳನ್ನು ಸರ್ಕಾರ ಆಲಿಸಬೇಕಿದೆ ಎಂದರು.

Press Agents Distributor Community ಹಲವಾರು ವರ್ಷಗಳಿಂದ ಜಿಲ್ಲಾ ಮಟ್ಟದ ಹಾಗೂ ರಾಜ್ಯಮಟ್ಟದ ಪತ್ರಿಕೆಗಳಲ್ಲಿ ಕೆಲಸ ನಿರ್ವಹಿಸಿದ ಅನೇಕ ಸಂಪಾದಕರು ಪತ್ರಕರ್ತರು ವಿತರಕರು ಇಂದು ಸರ್ಕಾರದ ಸೂಕ್ತ ಸೌಲಭ್ಯಗಳಿಲ್ಲದೆ ವಂಚಿತರಾಗಿದ್ದಾರೆ. ಅಳಿವಿನಂಚಿನಲ್ಲಿರುವ ಕೆಲವು ಪತ್ರಿಕೆಗಳ ಬೆಳವಣಿಗೆಗೆ ಸರ್ಕಾರ ವಿಶೇಷ ಪ್ಯಾಕೇಜ್ ಸೌಲಭ್ಯಗಳನ್ನು ನೀಡುವ ಮೂಲಕ ಪ್ರೋತ್ಸಾಹಿಸಬೇಕಾಗಿದೆ.
ಹಲವಾರು ವರ್ಷಗಳಿಂದ ರಾಜ್ಯಮಟ್ಟದ ಹಾಗೂ ಜಿಲ್ಲಾ ಮಟ್ಟದ ಪತ್ರಿಕೆಗಳನ್ನು ಸ್ಥಳೀಯ ಪತ್ರಿಕಾ ವಿತರಕರು ಚಳಿ ಗಾಳಿ ಮಳೆ ಬಿಸಿಲು ಲೆಕ್ಕಿಸದೆ ಓದುಗರ ಮನೆಗಳಿಗೆ, ಇಲಾಖೆಗಳಿಗೆ ತಲುಪಿಸುವ ಕೆಲಸವನ್ನು ಪತ್ರಿಕೆ ಹಂಚುವ ವಿತರಕರು ಮಾಡುತ್ತಿದೆ. ಪತ್ರಿಕಾ ವಿತರಕರಿಗೆ ಸರ್ಕಾರ ಕಟ್ಟಡ ಕಾರ್ಮಿಕರಿಗೆ ನೀಡುವ ಸೌಲಭ್ಯಗಳನ್ನು ನೀಡುವ ಮೂಲಕ ಪತ್ರಕರ್ತರಿಗೆ ಹಾಗೂ ಪತ್ರಿಕಾ ವಿತರಕರ ಮಕ್ಕಳಿಗೆ ಉಚಿತ ಬಸ್ ಪಾಸ್, ಉಚಿತ ಆರೋಗ್ಯ, ಮಕ್ಕಳಿಗೆ ಉಚಿತ ಶಿಕ್ಷಣ ಸೌಲಭ್ಯಗಳನ್ನು ನೀಡುವಂತೆ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಸರ್ಕಾರದ ಗಮನ ಸೆಳೆಯಲಿದ್ದೇವೆ ಎಂದು ಅಭಿಪ್ರಾಯಪಟ್ಟರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...