Thursday, June 18, 2026
Thursday, June 18, 2026

DCM DK Shivkumar ಡಿಸಿಎಂ ಶಿವಕುಮಾರ್ ಮತ್ತು ಲಕ್ಷ್ಮಣ ಸವದಿ ಅವರ ಮಹತ್ವದ ಭೇಟಿ

Date:

DCM DK Shivkumar ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ ಅವರು ನಿನ್ನೆ ತಡರಾತ್ರಿ ಶಾಸಕ ಸವದಿ ಅವರನ್ನ ಭೇಟಿಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಂಪುಟ ಈಗ ಭರ್ತಿಯಾಗಿದೆ. ಆದರೆ ಬಿಜೆಪಿ ತೊರೆದು ಬಂದ ಲಕ್ಷ್ಮಣ್ ಸವದಿ ಅವರಿಗೆ ಸಚಿವ ಸ್ಥಾನ ನೀಡಲಾಗಿಲ್ಲ. ಇದೇ ವಿಷಯಕ್ಕೆ ಸವದಿ ಅವರು ಅಸಮಾಧಾನಗೊಂಡಿದ್ದಾರೆಂದು ಹೇಳಲಾಗುತ್ತಿದೆ. ಈ ಸುದ್ದಿಯನ್ನ ಕೇಳಿ‌ ಡಿ.ಕೆ.ಶಿವಕುಮಾರ್ ಅವರು ಸವದಿಯವರನ್ನ ಭೇಟಿ ಮಾಡಿದರು ಎನ್ನಲಾಗಿದೆ. ಸಂಪುಟದಲ್ಲಿ ಅನಿವಾರ್ಯವಾಗಿ ಸ್ಥಾನ ಕಲ್ಪಿಸಲಾಗಿಲ್ಲ. ಇದನ್ನೇ ದೊಡ್ಡ ಸಂಗತಿಯನ್ನಾಗಿ ಮಾಡುವುದು ಬೇಡ. ಸದ್ಯದ ರಾಜಕೀಯ ಪರಿಸ್ಥಿತಿಯನ್ನ ಈರ್ವರೂ ಅವಲೋಕನ ಮಾಡಿದರು ಎಂದು ಹೇಳಲಾಗಿದೆ.
ತಮಗೆ ಅಸಮಾಧಾನ ಇಲ್ಲ ಎಂದು ಮಾಧ್ಯಮಗಳಿಗೆ ಹಿರಿಯ ಶಾಸಕ ಸವದಿ ಹೇಳಿಕೆಯನ್ನೂ ನೀಡಿದ್ದಾರೆ.

DCM DK Shivkumar ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರೊಡನೆ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಬಾಬಾಸಾಹೇಬ್ ಪಾಟೀಲ್, ಆಸೀಫ್ ಸೇಠ್, ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...