Sunday, December 14, 2025
Sunday, December 14, 2025

DC Chikkamagaluru ನಿವೇಶನ ರಹಿತರ ಗುಡಿಸಲ ಜಾಗ ಕಬಳಿಸುವ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Date:

DC Chikkamagaluru ನಿವೇಶನ ರಹಿತರು ವಾಸಿಸುವ ಗುಡಿಸಲಿನ ಜಾಗವನ್ನು ಭೂಕಬಳಿಕೆ ಮಾಡುವ ಹುನ್ನಾರದಿಂದ ಕೆಲವು ಕಿಡಿಕೇಡಿಗಳು ಗುಡಿಸಲುಗಳಿಗೆ ಬೆಂಕಿ ಹಚ್ಚಿ ಹಾನಿಗೊಳಿಸುತ್ತಿರುವ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾಡಳಿತವನ್ನು ಒತ್ತಾಯಿಸಿದೆ.

ಈ ಸಂಬಂಧ ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪ ಅವರಿಗೆ ದಸಂಸ ಮುಖಂಡರುಗಳು ಮನವಿ ಸಲ್ಲಿಸಿ ಗುಡಿಸಲುಗಳನ್ನು ಸುಟ್ಟು ನಿವಾಸಿಗಳಿಗೆ ತೊಂದರೆ ನೀಡುತ್ತಿವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಗ್ರಾಮಸ್ಥರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ದಸಂಸ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಮರ್ಲೆ ಅಣ್ಣಯ್ಯ ತರೀಕೆರೆ ತಾಲ್ಲೂಕಿನ ಕಸಬಾ ಹೋಬಳಿಯ ಎಂಸಿಹಳ್ಳಿ ಪಂಚಾಯತಿ ವ್ಯಾಪ್ತಿಯ ಎಸ್.ರಂಗಾಪುರ ಗ್ರಾಮದಲ್ಲಿ ನಿವೇಶನಕ್ಕೆ ಬೇಡಿಕೆ ಇಟ್ಟುಕೊಂಡು ಸುತ್ತಮುತ್ತಲಿನ ಗ್ರಾಮಸ್ಥರು ದಸಂಸ ಸಂಘಟನೆಯ ನೇತೃತ್ವದಲ್ಲಿ ಹೋರಾಟ ಮಾಡಿ ಗುಡಿಸಲುಗಳನ್ನು ನಿರ್ಮಿಸಿಕೊಂಡು ಜೀವನ ನಡೆಸುತ್ತಿದ್ದರು.

ನಿವೇಶನದ ಮೂಲಭೂತ ಸೌಕರ್ಯ ಹಾಗೂ ಕುಡಿಯುವ ನೀರಿಗಾಗಿ ಗ್ರಾಮಸ್ಥರು ತಮ್ಮ ಸ್ವತಃ ಖರ್ಚಿನಲ್ಲಿ ಬೋರ್‌ವೇಲ್ ಕೊರೆಸಿ ಸೂಕ್ತ ವ್ಯವಸ್ಥೆ ಮಾಡಿಕೊಂಡು ನಂತರ ಹಕ್ಕುಪತ್ರ ನೀಡಬೇಕೆಂದು ತರೀಕೆರೆ ಉಪವಿಭಾಗಾ ಧಿಕಾರಿ, ತಹಶೀಲ್ದಾರ್ ಅವರಿಗೆ ಪ್ರತಿಭಟನೆ ಮೂಲಕ ಮನವಿ ನೀಡಲಾಗಿದೆ.

DC Chikkamagaluru ಅಧಿಕಾರಿಗಳು ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದರೂ ಸಂಬಂಧಪಟ್ಟವರು ಅಥವಾ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳದೇ ಅಸಡ್ಡೆ ತೋರ ಲಾಗುತ್ತಿದೆ ಎಂದರು.
ನಿವೇಶನ ನೀಡುವ ವಿಚಾರದಲ್ಲಿ ಅಧಿಕಾರಿಗಳು ಬೇಜವಾಬ್ದಾರಿತನ ಒಂದೆಡೆಯಾದರೆ ನಿವೇಶನ ರಹಿತರ ಜಾಗವನ್ನು ಖಾಲಿ ಮಾಡಿಸುವ ಉದ್ದೇಶದಿಂದ ಭೂಗಳ್ಳರು ಇತರೆಡೆಯಿಂದ ಕಿಡಿಕೇಡಿಗಳನ್ನು ಕರೆತಂದು ನಿವೇಶನ ರಹಿತರಿರುವ ಜಾಗಕ್ಕೆ ತೆರಳಿ ಬೆದರಿಕೆ ಹಾಕುವ ಜೊತೆಗೆ ಗುಡಿಸಲುಗಳಿಗೆ ಬೆಂಕಿ ಹಾಕಲಾಗುತ್ತಿದೆ. ಚುನಾವಣೆ ಮುಗಿದ ನಂತರ ಪುಂಡರ ಹಾವಳಿ ಇನ್ನಷ್ಟು ಹೆಚ್ಚಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕೂಡಲೇ ಎಂಸಿ ಹಳ್ಳಿ ಹಾಗೂ ಸುತ್ತಮುತ್ತಲಿನ ಗುಡಿಸಲಿನಲ್ಲಿ ವಾಸವಿರುವ ನಿವೇಶನ ರಹಿತರ ಸಮಸ್ಯೆ ಗಳನ್ನು ಬಗೆಹರಿಸಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮವಹಿಸಿ ಬೇಡಿಕೆ ಈಡೇರಿಸಬೇಕು ಹಾಗೂ ಭೂಗ್ಗಳರಿಂದ ನಿವೇಶನ ರಹಿತರಿಗೆ ರಕ್ಷಣೆ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಖಜಾಂಚಿ ಸಂತೋಷ್, ತರೀಕೆರೆ ತಾಲ್ಲೂಕು ಸಂಚಾಲಕ ರಾಮಚಂದ್ರ, ಸಹ ಸಂಘಟನಾ ಸಂಚಾಲಕ ಮೌಂಟ್ ಬ್ಯಾಟನ್, ಮುಖಂಡರುಗಳಾದ ಮಂಜುನಾಥ್, ಕೊಪ್ಪ ಶೇಖರ್, ಸುಜೇಂದ್ರ ಲಕ್ಯಾ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...