Monday, May 4, 2026
Monday, May 4, 2026

World Bicycle Day ಸೈಕಲ್ ಚಾಲನೆಯಿಂದ ದೇಹದ ಸ್ನಾಯುಗಳು ಸದೃಢ-ಶ್ರೀಕಾಂತ್

Date:

World Bicycle Day ಸೈಕಲ್ ಚಾಲನೆಯಿಂದ ದೇಹದ ಸ್ನಾಯುಗಳು ಬಲಗೊಂಡು ಶಕ್ತಿ ತುಂಬುತ್ತದೆ, ಇದರಿಂದ ಅನಾರೋಗ್ಯದಿಂದ ದೂರ ಇರಬಹುದು ಎಂದು “ವಿಶ್ವಸೈಕಲ್ ದಿನಾಚರಣೆ” ಪ್ರಯುಕ್ತ ಶಿವಮೊಗ್ಗ ಸೈಕಲ್ ಕ್ಲಬ್ ಆಯೋಜಿಸಿದ ಜಾತ ಉದ್ಘಟಿಸಿದ ಕ್ಲಬ್ ನ ಅಧ್ಯಕ್ಷ ಶ್ರೀಕಾಂತ್ ಮಾತನಾಡುತ್ತಿದ್ದರು.

ಕಳೆದ 8 ವರ್ಷಗಳಿಂದ ಈ ಕಾರ್ಯಕ್ರಮ ಹಮ್ಮಿ ಕೊಳ್ಳುತ್ತಿದ್ದ, ಸರ್ಕಾರದ ಹಲವಾರು ಯೋಜನೆಗಳನ್ನು ಸಾಮಾನ್ಯ ಜನರಿಗೆ ತಲುಪಿಸುವ ಕಾರ್ಯ ಸೈಕಲ್ ಕ್ಲಬ್ ಸದಸ್ಯರು ಮಾಡುತ್ತಿದ್ದಾರೆ ಎಂದರು.

ಪರಿಸರ ಸ್ನೇಹಿಯಾದ ಸೈಕಲ್, ಇಂಧನ ಉಳಿಸುತ್ತದೆ, ಹೊಗೆ ಸೂಸುವುದಿಲ್ಲ. ಶಬ್ದಮಾಲಿನ್ಯ ಇರುವುದಿಲ್ಲ ಹಾಗೂ ದೇಹಕ್ಕೆ ಶಕ್ತಿ ತುಂಬಿ ಸದೃಡ ಜೀವನ ನಡೆಸಲು ಸಹಕಾರಿ ಎಂದು ಯೂತ್ ಹಾಸ್ಟೆಲ್ಸ್ ಛೇರ್ಮನ್ ಎಸ್.ಎಸ್.ವಾಗೇಶ್ ನುಡಿದರು.

    ಮಾನಸಿಕ ದೃಡತೆ, ಲವಲವಿಕೆಯ ಜೀವನಕ್ಕೆ ಸೈಕಲ್ ಅತ್ಯುತ್ತಮ ಸಹಕಾರಿ ಎಂದು ರೋಟರಿ ವಿಜಯಕುಮಾರ್ ತಿಳಿಸಿದರು.

World Bicycle Day ತರುಣೋದಯ ಘಟಕದ ಕಾರ್ಯದರ್ಶಿ ಸ್ವಾಗತಿಸಿದರು, ಸೈಕಲ್ ಕ್ಲಬ್ ಕಾರ್ಯದರ್ಶಿ ಗಿರೀಶ್ ಕಾಮತ್ ವಂದಿಸಿದರು ಹರೀಶ್ ಪಾಟಿಲ್ ನಿರೂಪಿಸಿದರು, ಡಿಎಸ್ ಡಿಒ ಸುರೇಶ್, ಚಂದ್ರಕೇಸರಿ, ಮಿಥುನ್, ವಿಜಯೇಂದ್ರ, ರವಿ ನಲವತ್ತು ಜನ ಸದಸ್ಯರು ಜಾತದಲ್ಲಿ ಪಾಲ್ಗೊಂಡು ನಗರದ ಗಾಂಧಿ ಉದ್ಯಾನವನ ದಿಂದ ಪ್ರಾರಂಭಗೊಂಡು ವಿಶ್ವೇಶ್ವರಾಯ ರಸ್ತೆ ಬಾಲರಾಜ್ ಅರಸ್ ರಸ್ತೆ, ನೆಹರು ರಸ್ತೆ, ಬಿಹೆಚ್ ರಸ್ತೆ ಬಸ್ ನಿಲ್ದಾಣದ ಮೂಲಕ ಸಾಗರ್ ರಸ್ತೆ ರಿಂಗ್ ರಸ್ತೆ ಮೂಲಕ ಸ್ವಾತಂತ್ರ್ಯ ಉದ್ಯಾನವನ ಸೇರಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...