Thursday, March 19, 2026
Thursday, March 19, 2026

Ahoratri Dharani ಹಾಲಪ್ಪ ತಂಡದ ಹರತಾಳದ ನಂತರ ಎಚ್ಚೆತ್ತ ಸರ್ಕಾರ: ಆದೇಶಕ್ಕೆ ತಡೆಯಾಜ್ಞೆ

Date:

Ahoratri Dharani ರೈತನ ಸಾಗುವಳಿ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು‌ ನಾಶಪಡಿಸಿದ ಅಧಿಕಾರಿಗಳು ಹಾಗೂ ರೈತ ವಿರೋಧಿ ಸರ್ಕಾರದ ವಿರುದ್ದ ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ನೇತ್ರತ್ವದಲ್ಲಿ ಹೊಸನಗರ ತಾಲೂಕ್ ಕಛೇರಿ‌ ಮುಂಭಾಗದಲ್ಲಿ ಅಹೋರಾತ್ರಿ ಧರಣಿ‌ ನಡೆಸಿದರು.

ಕಚ್ಚಿಗೆಬೈಲು ಗ್ರಾಮದ ಸ.ನಂ, 31 ರಲ್ಲಿ ರೈತರು ಹಲವು ವರ್ಷಗಳಿಂದ ಸಾಗುವಳಿ ಮಾಡಿಕೊಂಡು, ಫಾರಂ ನಂ 57 ಅರ್ಜಿ ಸಲ್ಲಿಸಿದ್ದರು. ಸಹ, ಸದರಿ ಜಾಗದಲ್ಲಿ ಬೆಳೆದಿದ್ದ ಶುಂಠಿ ಬೆಳೆಯನ್ನು ಏಕಾಏಕಿ JCB ಮೂಲಕ ತೆರವುಗೊಳಿಸಿರುವ ತಹಶೀಲ್ದಾರರು, R.I ಗಳ ದೌರ್ಜನ್ಯ ಹಾಗೂ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ, ಹೊಸನಗರ ತಹಶೀಲ್ದಾರರ ಕಛೇರಿ ಮುಂಬಾಗ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ತಡರಾತ್ರಿ ಉಪವಿಭಾಗಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು.

ಸದರಿ ಜಮೀನಿನ ಮೇಲೆ ಹೊರಡಿಸಿರುವ ತೆರವು ಆದೇಶಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ “ತಡೆಯಾಜ್ಞೆ” ನೀಡಿ ಆದೇಶ ಹೊರಡಿಸಿದ ಬಳಿಕ ಪ್ರತಿಭಟನೆ ಮೊಟಕುಗೊಳಿಸಿದರು.

Ahoratri Dharani ಈ ಸಂದರ್ಭದಲ್ಲಿ
ಅನ್ಯಾಯಕ್ಕೊಳಗಾದ ರೈತ ಕುಟುಂಬಸ್ಥರು, DYSP, ಬಿಜೆಪಿ ಮಂಡಲ ಅಧ್ಯಕ್ಷರು, ಪಕ್ಷದ ವಿವಿಧ ಹಂತದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...