Sunday, December 7, 2025
Sunday, December 7, 2025

Ahoratri Dharani ಹಾಲಪ್ಪ ತಂಡದ ಹರತಾಳದ ನಂತರ ಎಚ್ಚೆತ್ತ ಸರ್ಕಾರ: ಆದೇಶಕ್ಕೆ ತಡೆಯಾಜ್ಞೆ

Date:

Ahoratri Dharani ರೈತನ ಸಾಗುವಳಿ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು‌ ನಾಶಪಡಿಸಿದ ಅಧಿಕಾರಿಗಳು ಹಾಗೂ ರೈತ ವಿರೋಧಿ ಸರ್ಕಾರದ ವಿರುದ್ದ ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ನೇತ್ರತ್ವದಲ್ಲಿ ಹೊಸನಗರ ತಾಲೂಕ್ ಕಛೇರಿ‌ ಮುಂಭಾಗದಲ್ಲಿ ಅಹೋರಾತ್ರಿ ಧರಣಿ‌ ನಡೆಸಿದರು.

ಕಚ್ಚಿಗೆಬೈಲು ಗ್ರಾಮದ ಸ.ನಂ, 31 ರಲ್ಲಿ ರೈತರು ಹಲವು ವರ್ಷಗಳಿಂದ ಸಾಗುವಳಿ ಮಾಡಿಕೊಂಡು, ಫಾರಂ ನಂ 57 ಅರ್ಜಿ ಸಲ್ಲಿಸಿದ್ದರು. ಸಹ, ಸದರಿ ಜಾಗದಲ್ಲಿ ಬೆಳೆದಿದ್ದ ಶುಂಠಿ ಬೆಳೆಯನ್ನು ಏಕಾಏಕಿ JCB ಮೂಲಕ ತೆರವುಗೊಳಿಸಿರುವ ತಹಶೀಲ್ದಾರರು, R.I ಗಳ ದೌರ್ಜನ್ಯ ಹಾಗೂ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ, ಹೊಸನಗರ ತಹಶೀಲ್ದಾರರ ಕಛೇರಿ ಮುಂಬಾಗ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ತಡರಾತ್ರಿ ಉಪವಿಭಾಗಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು.

ಸದರಿ ಜಮೀನಿನ ಮೇಲೆ ಹೊರಡಿಸಿರುವ ತೆರವು ಆದೇಶಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ “ತಡೆಯಾಜ್ಞೆ” ನೀಡಿ ಆದೇಶ ಹೊರಡಿಸಿದ ಬಳಿಕ ಪ್ರತಿಭಟನೆ ಮೊಟಕುಗೊಳಿಸಿದರು.

Ahoratri Dharani ಈ ಸಂದರ್ಭದಲ್ಲಿ
ಅನ್ಯಾಯಕ್ಕೊಳಗಾದ ರೈತ ಕುಟುಂಬಸ್ಥರು, DYSP, ಬಿಜೆಪಿ ಮಂಡಲ ಅಧ್ಯಕ್ಷರು, ಪಕ್ಷದ ವಿವಿಧ ಹಂತದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...