Sunday, December 14, 2025
Sunday, December 14, 2025

World Environmental Day ಉತ್ತಮ ಪರಿಸರ ನಿರ್ವಹಣೆ ನಮ್ಮ ಆದ್ಯತೆಯಾಗಬೇಕು- ಶಾಸಕ ಚೆನ್ನಿ

Date:

World Environmental Day ಪರಿಸರ ಸಂರಕ್ಷಣೆ ಕಾರ್ಯ ನಮ್ಮೆಲ್ಲರ ಕರ್ತವ್ಯ ಆಗಿದ್ದು, ಮನೆ ಮನೆಗಳಲ್ಲಿ ಪರಿಸರ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು. ಉತ್ತಮ ಪರಿಸರ ನಿರ್ವಹಣೆ ನಮ್ಮ ಆದ್ಯತೆಯಾಗಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.

ಶಿವಮೊಗ್ಗದ ಎಲ್ಲ ರೋಟರಿ ಕ್ಲಬ್ ಗಳ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ರೋಟರಿ ಬಯೋ ಡೈವರ್ ಸಿಟಿ ಪಾರ್ಕನಲ್ಲಿ ಸಸಿ ನೆಡುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದರು.

ಪ್ರತಿಯೊಬ್ಬರು ಪರಿಸರ ಸಂರಕ್ಷಣೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಪರಿಸರ ನಿರ್ವಹಣೆ, ಜೀವ ಸಂಕುಲದ ಸಂರಕ್ಷಣೆ, ಇಂಧನ ಉಳಿಸುವ, ಪ್ಲಾಸ್ಟಿಕ್ ಮರುಬಳಕೆ ಕುರಿತು ಕಾರ್ಯಾಗಾರ, ಪರಿಸರ ಜಾಥಾ ಮೂಲಕ ಜನ ಜಾಗೃತಿ ಮೂಡಿಸಬೇಕು. ಗಿಡ ನೆಡುವುದು ಪೋಟೋ ಗೋಸ್ಕರ ಆಗದೇ ನಿತ್ಯ ಜೀವನದ ಭಾಗವಾಗಬೇಕು ಎಂದು ತಿಳಿಸಿದರು.

World Environmental Day ಪರಿಸರ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೆ ಗಿಡ, ಮರ, ಪ್ರಾಣಿ, ಪಕ್ಷಿಗಳಂತಹ ಜೀವ ವೈವಿಧ್ಯಗಳ ರಕ್ಷಣೆಗೆ ಬಧ್ದರಾಗಲು ಪ್ರೇರಣೆ ನೀಡುವಂತಾಗಬೇಕು. ಪ್ರತಿಯೊಬ್ಬರು ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದರು.

ಮಲೆನಾಡು ರೋಟರಿ ಕ್ಲಬ್ ಅಧ್ಯಕ್ಷೆ ಮಂಜುಳಾ, ರೋಟರಿ ಮಾಜಿ ಗವರ್ನರ್ ಚಂದ್ರಶೇಖರ, ಎಮ್.ಜಿ. ರಾಮಚಂದ್ರ ಮೂರ್ತಿ, ಪರಿಸರ ಪ್ರೇಮಿಗಳಾದ ಲಕ್ಷೀನಾರಾಯಣ ಕಾಶಿ, ಪ್ರಕಾಶ ಪ್ರಭು, ರೋಟರಿ ಬಯೋ ಡೈವರ್ಸಿಟಿ ಫಾರೆಸ್ಟ್ ರೂವಾರಿ ಉಮೇಶ್, ಅನಂತಮೂರ್ತಿ, ಮಂಜುನಾಥ, ರೋಟರಿ ಉತ್ತರದ ಸರ್ಜಾ ಜಗದೀಶ್, ರವೀಂದ್ರನಾಥ ಐತಾಳ, ಡಾ. ಗುಡದಪ್ಪ, ಸುನೀತಾ ಶ್ರೀಧರ್, ರವಿ ಕೋಟೋಜಿ ಮತ್ತು ಜಿ.ವಿಜಯಕುಮಾರ್, ಮಹೇಶ ಅಂಕದ್, ಕೆ.ಪಿ.ಶೆೆಟ್ಟಿ ಗುರುರಾಜ ಹಾಗೂ ಎಲ್ಲಾ ರೋಟರಿ ಅದ್ಯಕ್ಷರು, ಕಾರ್ಯದರ್ಶಿಗಳು ಭಾಗಿಯಾಗಿದ್ದರು.

ಇಂಡೋ ಕಿಡ್ಸ್ ಶಾಲೆ, ಜ್ಞಾನದೀಪ ಶಾಲೆ ಜಾವಳ್ಳಿಯ ಮಕ್ಕಳು ಗಿಡ ನೆಡುವ ಕೆಲಸದಲ್ಲಿ ಭಾಗಿಯಾಗಿದ್ದರು. ಕೊನೆಯಲ್ಲಿ ಬಂದಂತಹ ಎಲ್ಲರಿಗೂ ಸರ್ಜಾ ಜಗದೀಶ್ ವಂದನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...