Saturday, October 5, 2024
Saturday, October 5, 2024

World Environmental Day ಉತ್ತಮ ಪರಿಸರ ನಿರ್ವಹಣೆ ನಮ್ಮ ಆದ್ಯತೆಯಾಗಬೇಕು- ಶಾಸಕ ಚೆನ್ನಿ

Date:

World Environmental Day ಪರಿಸರ ಸಂರಕ್ಷಣೆ ಕಾರ್ಯ ನಮ್ಮೆಲ್ಲರ ಕರ್ತವ್ಯ ಆಗಿದ್ದು, ಮನೆ ಮನೆಗಳಲ್ಲಿ ಪರಿಸರ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು. ಉತ್ತಮ ಪರಿಸರ ನಿರ್ವಹಣೆ ನಮ್ಮ ಆದ್ಯತೆಯಾಗಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.

ಶಿವಮೊಗ್ಗದ ಎಲ್ಲ ರೋಟರಿ ಕ್ಲಬ್ ಗಳ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ರೋಟರಿ ಬಯೋ ಡೈವರ್ ಸಿಟಿ ಪಾರ್ಕನಲ್ಲಿ ಸಸಿ ನೆಡುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದರು.

ಪ್ರತಿಯೊಬ್ಬರು ಪರಿಸರ ಸಂರಕ್ಷಣೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಪರಿಸರ ನಿರ್ವಹಣೆ, ಜೀವ ಸಂಕುಲದ ಸಂರಕ್ಷಣೆ, ಇಂಧನ ಉಳಿಸುವ, ಪ್ಲಾಸ್ಟಿಕ್ ಮರುಬಳಕೆ ಕುರಿತು ಕಾರ್ಯಾಗಾರ, ಪರಿಸರ ಜಾಥಾ ಮೂಲಕ ಜನ ಜಾಗೃತಿ ಮೂಡಿಸಬೇಕು. ಗಿಡ ನೆಡುವುದು ಪೋಟೋ ಗೋಸ್ಕರ ಆಗದೇ ನಿತ್ಯ ಜೀವನದ ಭಾಗವಾಗಬೇಕು ಎಂದು ತಿಳಿಸಿದರು.

World Environmental Day ಪರಿಸರ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೆ ಗಿಡ, ಮರ, ಪ್ರಾಣಿ, ಪಕ್ಷಿಗಳಂತಹ ಜೀವ ವೈವಿಧ್ಯಗಳ ರಕ್ಷಣೆಗೆ ಬಧ್ದರಾಗಲು ಪ್ರೇರಣೆ ನೀಡುವಂತಾಗಬೇಕು. ಪ್ರತಿಯೊಬ್ಬರು ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದರು.

ಮಲೆನಾಡು ರೋಟರಿ ಕ್ಲಬ್ ಅಧ್ಯಕ್ಷೆ ಮಂಜುಳಾ, ರೋಟರಿ ಮಾಜಿ ಗವರ್ನರ್ ಚಂದ್ರಶೇಖರ, ಎಮ್.ಜಿ. ರಾಮಚಂದ್ರ ಮೂರ್ತಿ, ಪರಿಸರ ಪ್ರೇಮಿಗಳಾದ ಲಕ್ಷೀನಾರಾಯಣ ಕಾಶಿ, ಪ್ರಕಾಶ ಪ್ರಭು, ರೋಟರಿ ಬಯೋ ಡೈವರ್ಸಿಟಿ ಫಾರೆಸ್ಟ್ ರೂವಾರಿ ಉಮೇಶ್, ಅನಂತಮೂರ್ತಿ, ಮಂಜುನಾಥ, ರೋಟರಿ ಉತ್ತರದ ಸರ್ಜಾ ಜಗದೀಶ್, ರವೀಂದ್ರನಾಥ ಐತಾಳ, ಡಾ. ಗುಡದಪ್ಪ, ಸುನೀತಾ ಶ್ರೀಧರ್, ರವಿ ಕೋಟೋಜಿ ಮತ್ತು ಜಿ.ವಿಜಯಕುಮಾರ್, ಮಹೇಶ ಅಂಕದ್, ಕೆ.ಪಿ.ಶೆೆಟ್ಟಿ ಗುರುರಾಜ ಹಾಗೂ ಎಲ್ಲಾ ರೋಟರಿ ಅದ್ಯಕ್ಷರು, ಕಾರ್ಯದರ್ಶಿಗಳು ಭಾಗಿಯಾಗಿದ್ದರು.

ಇಂಡೋ ಕಿಡ್ಸ್ ಶಾಲೆ, ಜ್ಞಾನದೀಪ ಶಾಲೆ ಜಾವಳ್ಳಿಯ ಮಕ್ಕಳು ಗಿಡ ನೆಡುವ ಕೆಲಸದಲ್ಲಿ ಭಾಗಿಯಾಗಿದ್ದರು. ಕೊನೆಯಲ್ಲಿ ಬಂದಂತಹ ಎಲ್ಲರಿಗೂ ಸರ್ಜಾ ಜಗದೀಶ್ ವಂದನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...