Sunday, June 21, 2026
Sunday, June 21, 2026

Chikmagalur Development Authority ಚಿಕ್ಕಮಗಳೂರು ಅಭಿವೃದ್ದಿ ಪ್ರಾಧಿಕಾರ ಅಧ್ಯಕ್ಷತೆ ದಲಿತರಿಗೆ ನೀಡಲು ಆಗ್ರಹ

Date:

Chikmagalur Development Authority ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ವರ್ಷಗಳಿಂದ ನಿಸ್ವಾರ್ಥ ಸೇವೆಯಿಂದ ದುಡಿದು ಕಾರ್ಯನಿರ್ವಹಿಸಿರುವ ದಲಿತ ಮುಖಂಡರಿಗೆ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕು ಎಂದು ದಸಂಸ (ಅಂಬೇಡ್ಕರ್ ವಾದ) ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಮರ್ಲೆ ಅಣ್ಣಯ್ಯ ಒತ್ತಾಯಿಸಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು ಚಿಕ್ಕಮಗಳೂರು ಜಿಲ್ಲೆಗೆ ನಗರ ಪೌರಾಡಳಿತ ಸಚಿವರಾದ ಬೈರತಿ ಸುರೇಶ್ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಸಿಡಿಎ ಅಧ್ಯಕ್ಷ ಸ್ಥಾನವನ್ನು ಪಕ್ಷದ ಉತ್ತಮವಾಗಿ ಕಾರ್ಯನಿರ್ವಹಿಸಿರುವ ದಲಿತ ಮುಖಂಡರಿಗೆ ಮಾತ್ರ ನೀಡಿ ಸಮಾಜದ ಏಳಿಗೆಗೆ ಸಹಕರಿಸಬೇಕು ಎಂದು ಆಗ್ರಹಿಸಿದ್ದಾರೆ.

Chikmagalur Development Authority ಹಿಂದಿನಿಂದಲೂ ದಲಿತರು, ಕಾರ್ಮಿಕರು, ಅಲ್ಪಸಂಖ್ಯಾತರು ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶೇ.90 ರಷ್ಟು ಮಂದಿ ಕಾಂಗ್ರೆಸ್ ಮತ ನೀಡುವ ಮೂಲಕ ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಬೆಂಬಲಿಸಿದ್ದಾರೆ. ಆ ನಿಟ್ಟಿನಲ್ಲಿ ಪಕ್ಷದಲ್ಲಿ ಸೇವೆ ಸಲ್ಲಿಸಿ ಜೀವನವನ್ನೇ ಮುಡಿಪಾಗಿಸಿರುವ ದಲಿತ ಮುಖಂಡರಿಗೆ ಸಿಡಿಎ ಅಧ್ಯಕ್ಷ ಸ್ಥಾನ ನೀಡಬೇಕು ಎಂದಿದ್ದಾರೆ.

ಈ ಹಿಂದೆಯು ಸಿಡಿಎ ಅಧ್ಯಕ್ಷ ಸ್ಥಾನವನ್ನು ಅಲ್ಪಸಂಖ್ಯಾತರಿಗೆ, ಹಿಂದುಳಿದ ವರ್ಗಕ್ಕೆ ಹಾಗೂ ಎಲ್ಲಾ ಸಮು ದಾಯದವರಿಗೆ ನೀಡಲಾಗಿದೆ. ಆದ್ದರಿಂದ ಈ ಬಾರಿಯ ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷರ ಚುಕ್ಕಾಣ ಯನ್ನು ಪಕ್ಷದಲ್ಲಿ ಗುಣಾತ್ಮಕ ಸೇವೆ ಸಲ್ಲಿಸಿರುವ ದಲಿತ ಮುಖಂಡರಿಗೆ ನೀಡುವ ಮೂಲಕ ಜನಾಂಗ ಅಭಿವೃಧ್ದಿಗೆ ಒತ್ತು ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಎನ್.ಜೆ.ಸಚಿನ್ ಗೆ ಕುವೆಂಪು ವಿವಿಯಿಂದ ಪಿ ಹೆಚ್ ಡಿ ಪದವಿ ಘೋಷಣೆ

Kuvempu University ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ...

B.Y. Raghavendra ಮೋದಿ @12 ಯುವ ಸಂವಾದ” ದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗಿ

B.Y. Raghavendra ಭಾರತೀಯ ಜನತಾ ಯುವ ಮೋರ್ಚಾ, ಶಿವಮೊಗ್ಗ ವತಿಯಿಂದ ಆಯೋಜಿಸಲಾದ...

Klive Special Article ಅಪರೂಪದ “ಜಲಾಧಿವಾಸ ಗಣಪತಿ” ಕ್ಷೇತ್ರ. ...

Klive Special Article ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಯಡಾಡಿ ಮತ್ಯಾಡಿ...