Saturday, December 6, 2025
Saturday, December 6, 2025

Shivamogga Rotary RMB Institute ಉದ್ಯಮಿಗಳಲ್ಲಿ ಬದ್ಧತೆ ಮತ್ತು ಪ್ರಾ ಮಾಣಿಕತೆ ಇದ್ದರೆ ಯಶಸ್ಸು ಖಂಡಿತ- ಶಾಸಕ ರುದ್ರೇಗೌಡ

Date:

Shivamogga Rotary RMB Institute ಉದ್ಯಮದಲ್ಲಿ ಯಶಸ್ಸು ಸಾಧಿಸಲು ಬದ್ಧತೆ ಹಾಗೂ ಪ್ರಾಮಾಣಿಕತೆ ಅತ್ಯಂತ ಮುಖ್ಯ ಆಗಿರುತ್ತದೆ. ವ್ಯಾಪಾರ ವಹಿವಾಟು ನಡೆಸುವವರು ಪ್ರಾಮಾಣಿಕರಾಗಿ ಕೆಲಸ ಮಾಡಬೇಕು. ಗೆಲುವು ದೊರೆಯುವುದು ನಿಶ್ಚಿತ ಎಂದು ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಹೇಳಿದರು.

ಶಿವಮೊಗ್ಗ ನಗರದಲ್ಲಿ ರೋಟರಿ ಆರ್‌ಎಂಬಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ನೂತನ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿ, ವ್ಯಾಪಾರ ಕ್ಷೇತ್ರದಲ್ಲಿ ಪ್ರಗತಿ ಹೊಂದಲು ಒಬ್ಬರಿಗೆ ಒಬ್ಬರು ಸಹಕಾರ ಮಾಡಿಕೊಂಡು ಮುನ್ನಡೆಯಲು ರೋಟರಿ ಉತ್ತಮ ಪ್ರೋತ್ಸಾಹ ನೀಡುತ್ತಿದೆ ಎಂದು ತಿಳಿಸಿದರು.
ರೋಟರಿ ಆರ್‌ಎಂಬಿ ಸಂಸ್ಥೆಯು ನ್ಯಾಯಯುತ ಮೌಲ್ಯ ಗುಣಗಳೊಂದಿಗೆ ವ್ಯಾಪಾರದಲ್ಲಿ ಉನ್ನತಿ ಸಾಧಿಸಲು ಅಗತ್ಯ ಸಹಕಾರ ನೀಡುತ್ತಿರುವುದು ಶ್ಲಾಘನೀಯ. ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮ ಕೆಲಸ ಮಾಡಬೇಕು ಎಂದು ಆಶಿಸಿದರು.

Shivamogga Rotary RMB Institute ಸಂಸ್ಥೆಯ ನಿರ್ಗಮಿತ ಅಧ್ಯಕ್ಷ ವಸಂತ ಹೋಬಳಿದಾರ್ ಮಾತನಾಡಿ, ಸಂಸ್ಥೆ ಬೆಳೆಯಲು ಸಹಕರಿಸಿದ ಅರುಣ್ ದೀಕ್ಷಿತ್, ಮೋಹನ್ ಮತ್ತು ಇಡೀ ತಂಡವನ್ನು ನೆನಪಿಸಿಕೊಂಡರು. ಈವರೆಗಿನ ಸಾಧನೆ ನನಗೆ ನೆಮ್ಮದಿ ತಂದಿದೆ ಎಂದು ತಿಳಿಸಿದರು.

ನೂತನ ಅಧ್ಯಕ್ಷ ಎಚ್.ಎಸ್.ಮೋಹನ್ ಮಾತನಾಡಿ, ಅಧಿಕಾರ ಸ್ವೀಕರಿಸಿ ತಮ್ಮ ತಂಡವನ್ನು ಪರಿಚಯಿಸಿ ಅರ್.ಎಮ್.ಬಿ ಸಂಸ್ಥೆಗೆ ಇನ್ನೂ ಹೆಚ್ಚಿನ ಸದಸ್ಯರು ಕೈ ಜೋಡಿಸಬೇಕು. ಅಧಿಕ ಸಂಖ್ಯೆಯ ಸದಸ್ಯರಿಂದ ವ್ಯಾಪಾರ ವಹಿವಾಟು ಹೆಚ್ಚುವುದರೊಂದಿಗೆ ಸಂಸ್ಥೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಇತಿಹಾಸ ನಿರ್ಮಿಸಬಹುದು ಎಂದರು.

ನೂತನ ಕಾರ್ಯದರ್ಶಿ ರವೀಂದ್ರನಾಥ ಐತಾಳ ಪ್ರಾಸ್ತಾವಿಕ ಮಾತನಾಡಿ, ಈವರೆಗೆ ಸಂಸ್ಥೆ ನಡೆದು ಬಂದ ದಾರಿ, ಸಂಸ್ಥೆಯ 30 ತಿಂಗಳ ಸಾಧನೆಯ 22 ಕೋಟಿ ವ್ಯವಹಾರದ ಸಂತಸದ ಸಂಗತಿಯನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ಮಂಜುನಾಥ ಕದಂ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...