Sunday, May 3, 2026
Sunday, May 3, 2026

CM Siddaramaiah ವರುಣಾದಲ್ಲಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ ಸಿದ್ಧರಾಮಯ್ಯ

Date:

CM Siddaramaiah ಬಸವಾದಿ ಶರಣರು ನುಡಿದಂತೆ ನಡೆದಿದ್ದರು. ಅದನ್ನೇ ಮಾದರಿಯನ್ನಾಗಿ ಇಟ್ಟುಕೊಂಡು, ನಾನು ಮೊದಲ ಬಾರಿ ಬಸವ ಜಯಂತಿ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ನುಡಿದಂತೆ ನಡೆದಿದ್ದೆ.
ಮುಖ್ಯಮಂತ್ರಿ ಕುರ್ಚಿ ಎಂದರೆ ಸುಖದ ಸುಪ್ಪತ್ತಿಗೆ ಅಲ್ಲ, ಜನರ ಬದುಕನ್ನು ಸುಧಾರಿಸಲು ಸಿಗುವ ಅವಕಾಶ ಎಂಬುದು ನನ್ನ ಭಾವನೆ ಎಂದು
ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ತಮ್ಮನ್ನು ಗೆಲ್ಲಿಸಿದ ವರುಣ ಕ್ಷೇತ್ರದ ಜನತೆಗೆ ಧನ್ಯವಾದ ಅರ್ಪಿಸಿ ಅವರು ಮಾತಾಡಿದರು.
ಇದೇ ನನ್ನ ಕೊನೆಯ ಚುನಾವಣೆ ಎಂದೂ ಸಿದ್ದರಾಮಯ್ಯ ನುಡಿದಿದ್ದಾರೆ.

CM Siddaramaiah ನಾನು ಉಸಿರು ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿದ್ದು ಜನರ ಸೇವೆಯನ್ನು ಮುಂದುವರೆಸುತ್ತೇನೆ. 2013 ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ನುಡಿದಂತೆ ನಡೆದು ಸಮಾಜದ ಎಲ್ಲಾ ಜಾತಿ, ಧರ್ಮ ಮತ್ತು ಎಲ್ಲಾ ವರ್ಗಗಳ ಪರವಾಗಿ ಕಲ್ಯಾಣ ಕಾರ್ಯಕ್ರಮ ರೂಪಿಸಿದ್ದೆ. ಈ ಬಾರಿ ಇನ್ನಷ್ಟು ಪರಿಣಾಮಕಾರಿಯಾದ ಕಲ್ಯಾಣ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ನಾಡಿಗೆ ನೀಡಲಿದೆ
ಎಂದು ಹೇಳಿದರು.
ಸಮಾರಂಭಕ್ಕೆ ಮುನ್ನ ಜನಭರಿತ ರೋಡ್ ಶೋ ನಡೆಸಿ ವರುಣಾದ ಮತದಾರರಿಗೆ ಕೈಮುಗಿದು ಕೃತಜ್ಞತೆ ಅರ್ಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...