Sunday, December 14, 2025
Sunday, December 14, 2025

Makonahalli Cooperative Bank ಮಾಕೋನಹಳ್ಳಿ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ ಸಂದೀಪ್ ನಂದಿಪುರ ಆಯ್ಕೆ

Date:

Makonahalli Cooperative Bank ಮೂಡಿಗೆರೆ, ತಾಲ್ಲೂಕಿನ ಮಾಕೋನಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್.ವಿ.ಸಂದೀಪ್ ನಂದೀಪುರ ಹಾಗೂ ಉಪಾಧ್ಯಕ್ಷರಾಗಿ ವಾಜೀದ್ ಅಹ್ಮದ್ ಅವರು ಆಯ್ಕೆಯಾಗಿದ್ದಾರೆ.
ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಒಟ್ಟು 12 ಸ್ಥಾನಗಳ ಪೈಕಿ 7 ಮತಗಳನ್ನು ಎನ್.ವಿ. ಸಂದೀಪ್‌ನAದೀಪುರ ಹಾಗೂ ವಾಜೀದ್ ಅಹ್ಮದ್ ಪಡೆದುಕೊಂಡ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಗುರುಮೂರ್ತಿರವರು ಅಧಿಕೃತವಾಗಿ ಆಯ್ಕೆಯನ್ನು ಶುಕ್ರವಾರ ಘೋಷಿಸಿದರು.

ಈ ವೇಳೆ ಮಾತನಾಡಿದ ನೂತನ ಅಧ್ಯಕ್ಷ ಎನ್.ವಿ.ಸಂದೀಪ್ ನಂದೀಪುರ ತಮ್ಮ ಅಧಿಕಾರಾವಧಿಯಲ್ಲಿ ಎಲ್ಲಾ ಸದಸ್ಯರ ಸಹಕಾರ ಪಡೆದುಕೊಳ್ಳುವ ಮೂಲಕ ರೈತರಿಗೆ ಅನುಕೂಲವಾಗುವಂತಹ ವ್ಯಾಪಾರ, ವಾಹನ ಹಾಗೂ ಸ್ವಂತ ಬಂಡವಾಳ ಸಾಲವನ್ನು ವಿತರಿಸಿ ಸಂಘದ ಬೆಳವಣಿಗೆಗೆ ಸಹಕರಿಸಲಾಗುವುದು ಎಂದರು.

ಸಂಘದ ನೂತನ ಕಟ್ಟಡ ನಿರ್ಮಾಣ ಸಂಬಂಧ ಈ ಹಿಂದೆ ಒಂದು ಹಂತದ ಕಾಮಗಾರಿಯನ್ನು ಪೂರೈಸಲಾಗಿದೆ. ಉಳಿದ ಕಟ್ಟಡದ ಕಾಮಗಾರಿಗೆ ತಮ್ಮ ಅವಧಿಯಲ್ಲಿ ಶ್ರಮವಹಿಸುವ ಮೂಲಕ ಪೂರ್ಣ ಗೊಳಿಸುವ ಕಾರ್ಯಕ್ಕೆ ಮುಂದಾಗಲಾಗುವುದು ಎಂದ ಅವರು ಮುಂದಿನ ದಿನಗಳಲ್ಲಿ ಸದಸ್ಯರ ಸರ್ವಮತ ದೊಂದಿಗೆ ಸಂಘದ ಅಭೀವೃದ್ದಿಗೆ ಶ್ರಮಿವಹಿಸಲಾಗುವುದು ಎಂದು ಭರವಸೆ ನೀಡಿದರು.

ನೂತನ ಉಪಾಧ್ಯಕ್ಷ ವಾಜೀದ್ ಅಹ್ಮದ್ ಮಾತನಾಡಿ ತನ್ನ ಆಯ್ಕೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕ ರಿಸಿದ ಸಂಘದ ನಿರ್ದೇಶಕರು ಹಾಗೂ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿದರು.

ಇದೇ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್‌ಅಜಿತ್‌ಕುಮಾರ್ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಸಂದೀಪ್ ಅವರ ಸ್ವಗೃಹಕ್ಕೆ ತೆರಳಿ ಅಭಿನಂದನೆ ಸಲ್ಲಿಸಿದರು.

Makonahalli Cooperative Bank ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರುಗಳಾದ ಜಿ.ಯು.ಚಂದ್ರೇಗೌಡ, ಇಕ್ಬಾಲ್ ಅಹ್ಮದ್, ಐ.ಯು.ನಂಜೇ ಗೌಡ, ಪಿ.ಎಸ್.ಜಯರಾಮ್, ಬಿ.ಟಿ.ಮಂಜುಳಾ, ಕಾರ್ಯದರ್ಶಿ ಕೆ.ಜೆ.ಅಜಿತ್, ಸೂಪರ್‌ವೈಸರ್ ನಿತಿನ್ ಪಟೇಲ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...