Sunday, December 14, 2025
Sunday, December 14, 2025

Department of Women and Child Development ಶಾಲೆ ಬಿಟ್ಟ ಮಕ್ಕಳ ಕಡೆಗೆ ಎಲ್ಲರ ಗಮನವಿರಲಿ-ನ್ಯಾ.ಮಂಜುನಾಥ ನಾಯಕ್

Date:

Department of Women and Child Development ಮಕ್ಕಳ ವಿಚಾರದಲ್ಲಿ ಎಲ್ಲರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಶಾಲೆ ಬಿಟ್ಟ ಮಕ್ಕಳ ಕಡೆ ಗಮನ ಹರಿಸಿ ಮುಖ್ಯವಾಹಿನಿಗೆ ತರುವ ಕೆಲಸ ಆಗಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

Department of Women and Child Development ಬಾಲ ಕಾರ್ಮಿಕ ಪದ್ದತಿ ಒಂದು ಅಂತರಾಷ್ಟ್ರೀಯ ಪಿಡುಗು. ಬಡತನ, ಶಿಕ್ಷಣ ಸೌಲಭ್ಯದ ಕೊರತೆ, ಪೋಷಕರ ಅನಾರೋಗ್ಯ ಇನ್ನೂ ಹಲವಾರು ಕಾರಣಗಳಿಂದ ಬಾಲ ಕಾರ್ಮಿಕತೆ ಹೆಚ್ಚುತ್ತಿದೆ. ಕೆಲವೆಡೆ ಪ್ರೌಢಶಾಲೆಗಳು ಇಲ್ಲ, ಇನ್ನು ಕೆಲವೆಡೆ ಪೋಷಕರು ತಮ್ಮ ಅನಾರೋಗ್ಯ, ಬಡತನದಿಂದ ಮಕ್ಕಳನ್ನು ಕೆಲಸಕ್ಕೆ ಸೇರಿಸುವುದು, ಕೆಲ ಕೈಗಾರಿಕೆಗಳು ಆಮಿಷ ತೋರಿ ಮಕ್ಕಳನ್ನು ಕೆಲಸಕ್ಕೆ ಸೇರಿಸಿಕೊಳ್ಳುತ್ತಿರುವುದನ್ನು ಕಾಣುತ್ತಿದ್ದೇವೆ.

ದೇಶ ಸೇವೆ, ತಂತ್ರಜ್ಞಾನ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಅಭಿವೃದ್ದಿಯನ್ನು ಕಾಣುತ್ತಿದೆ ಎನ್ನಲಾಗುತ್ತಿದೆ. ಆದರೆ ಬಾಲ ಕಾರ್ಮಿಕತೆ ಜಾರಿ ಇರುವೆಡೆ ಅಭಿವೃದ್ದಿ ಎನ್ನಲು ಸಾಧ್ಯವಿಲ್ಲ. ಇದನ್ನು ತೊಡೆದುಹಾಕಲು ಅನೇಕ ಕಾರ್ಯಕ್ರಮಗಳು, ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ಆದರೆ ಕೇವಲ ಕಾಯ್ದೆಯಿಂದ ಮಾತ್ರ ಈ ಪಿಡುಗಿನ ನಿವಾರಣೆ ಸಾಧ್ಯವಿಲ್ಲ. ನಮ್ಮ ಮನಸ್ಥಿತಿ ಬದಲಾಯಿಸಿಕೊಳ್ಳಬೇಕು ಎಂದರು.

ಶಾಲೆಯನ್ನು ಅರ್ಧಕ್ಕೆ ಬಿಟ್ಟವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಿದೆ. ಕೇವಲ ನಗರದಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಗಮನಿಸಿದರೆ ಸಾಲದು, ಹಳ್ಳಿಗಳಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಕೃಷಿ ಕ್ಷೇತ್ರದಲ್ಲಿ ತೊಡಗಿಸಿರುವುದು ಆತಂಕಕಾರಿಯಾಗಿದ್ದು, ಇಂತಹ ಮಕ್ಕಳ ಕಡೆ ಗಮನ ಹರಿಸಿ ಅವರನ್ನು ಶಿಕ್ಷಣದಲ್ಲಿ ಮುಂದುವರೆಸಬೇಕು. ಉದ್ಯಮಿಗಳು, ಹೋಟೆಲ್ ಮಾಲೀಕರು, ಇತರೆ ಉದ್ದೆಮೆ ಮತ್ತು ಕೃಷಿ ಮಾಲೀಕರು ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಬಾರದು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿ.ಎನ್.ಚಂದನ್ ಮಾತನಾಡಿ, ಮಕ್ಕಳು ದೇವರು ನೀಡಿದ ಒಂದು ವರ ಮತ್ತು ಮಕ್ಕಳೇ ದೇಶದ ಆಧಾರಸ್ತಂಭ. ಇಂತಹ ಮಕ್ಕಳೆಡೆ ನಮ್ಮೆಲ್ಲರಿಗೆ ಸಾಮಾಜಿಕ ಹೊಣೆಗಾರಿಕೆ ಇದೆ. ಕೇವಲ ನಮ್ಮ ಮಕ್ಕಳನ್ನು ನಾವು ಶಿಕ್ಷಿತರನ್ನಾಗಿ ಉತ್ತಮ ಸೌಲಭ್ಯ ನೀಡಿದರೆ ಸಾಲದು, ಸೌಲಭ್ಯ ವಂಚಿತ ಮಕ್ಕಳು ಕಂಡುಬಂದಲ್ಲಿ ಅವರನ್ನು ಮುಖ್ಯವಾಹಿನಿಗೆ ತರಬೇಕು. ಸರ್ಕಾರ ಉಚಿತ ಮತ್ತು ಕಡ್ಡಾಯ ಶಿಕ್ಷಣ ಜಾರಿಗೆ ತಂದಿದ್ದು ಅದರ ಉಪಯೋಗವನ್ನು ಎಲ್ಲರೂ ಪಡೆಯಬೇಕು. ಸರ್ಕಾರದ ವಿವಿಧ ಸೌಲಭ್ಯಗಳನ್ನು ಬಳಕೆ ಮಾಡಿಕೊಳ್ಳಬೇಕು. ಕಾಯ್ದೆ ಪಾಲನೆ ಮನಸ್ಥಿತಿ ಎಲ್ಲರಲ್ಲಿ ಬರಬೇಕು ಎಂದರು.

Department of Women and Child Development ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರೇಖಾ ಜಿ.ಎಂ ಮಾತನಾಡಿ, ಯಾವುದೇ ಶಾಲೆ ಬಿಟ್ಟ ಮಕ್ಕಳು ಕಂಡುಬಂದಲ್ಲಿ ಮಕ್ಕಳು ಸೇರಿದಂತೆ ಯಾರೇ ಆಗಲಿ ಮಕ್ಕಳ ಸಹಾಯವಾಣಿ 1098 ಗೆ ಕರೆ ಮಾಡಿ ತಿಳಿಸಬೇಕು. ಆಗ ಮಕ್ಕಳನ್ನು ರಕ್ಷಿಸಿ ಮುಖ್ಯವಾಹಿನಿಗೆ ತರಲು ಸಹಕಾರಿಯಾಗುತ್ತದೆ. ಮಕ್ಕಳು ಮೊಬೈಲ್ ಬಳಕೆ ಕಡಿಮೆ ಮಾಡಬೇಕು. ಹಾಗೂ ಎಚ್ಚರಿಕೆಯಿಂದ ಮೊಬೈಲ್ ಬಳಸಬೇಕು. ಹೆಣ್ಣುಮಕ್ಕಳು ಗುಡ್ ಮತ್ತು ಬ್ಯಾಡ್ ಟಚ್ ಬಗ್ಗೆ ತಿಳಿದಿರಬೇಕು. ಯಾವುದೇ ಆಮಿಷಗಳಿಗೆ ಬಲಿಯಾಗದೇ ಶಿಕ್ಷಣಕ್ಕೆ ಹೆಚಿನ್ಚ ಮಹತ್ವ ನೀಡಬೇಕೆಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಿ.ಜಿ.ಶಿವಮೂರ್ತಿ ಮಾತನಾಡಿ, ಪೋಷಕರು ಮಕ್ಕಳ ಶಿಕ್ಷಣದ ಕಡೆ ಹೆಚ್ಚಿನ ಒತ್ತು ನೀಡಬೇಕು. ಹಾಗೂ ಮಕ್ಕಳ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿಯಿಂದ ನಡೆದುಕೊಂಡು ಅವರಿಗೆ ಉತ್ತಮ ವಾತಾವರಣ ನೀಡಬೇಕೆಂದರು.

ಕಾರ್ಯಕ್ರಮದಲ್ಲಿ ಸ್ತಬ್ದಚಿತ್ರ ವಾಹನ ಮತ್ತು ಕರಪತ್ರದ ಮೂಲಕ ಕಾನೂನು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಬಾಲಕಾರ್ಮಿಕನಾಗಿ ದುಡಿಯುತ್ತಿದ್ದ ಬಾಲಕಕನ್ನು ರಕ್ಷಿಸಿ ಮುಖ್ಯ ವಾಹಿನಿಗೆ ತಂದು ಪ್ರಸ್ತುತ 9 ನೇ ತರಗತಿಯಲ್ಲಿ ಓದುತ್ತಿರುವ ಹೊಸಳ್ಳಿಯ ವಿನಯ್ ನನ್ನು ಅಭಿನಂದಿಸಲಾಯಿತು. ಎಲ್ಲರಿಗೂ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಜಿಲ್ಲಾ ಕಾರ್ಮಿಕ ಅಧಿಕಾರಿ ಸುಮಾ ಹೆಚ್ ಎಸ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಕಾರ್ಮಿಕ ನಿರೀಕ್ಷಕ ಭೀಮೇಶ್ ಪಿ, ಬಿಇಓ ನಾಗರಾಜ್, ಇತರೆ ಇಲಾಖೆ ಅಧಿಕಾರಿಗಳು, ಬಾಲ ಕಾರ್ಮಿಕ ಯೋಜನಾ ಸೊಸೈಟಿ ಪಿಡಿ ರಘುರಾಂ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...