Tuesday, April 22, 2025
Tuesday, April 22, 2025

Department Of Ex Serviceman ಚಿಕ್ಕಮಗಳೂರು ಜಿಲ್ಲಾ ಮಾಜಿ ಸೈನಿಕರ ಸಂಘಕ್ಕೆ ನಿವೇಶನ ನೀಡಲು ಮನವಿ

Date:

Department Of Ex Serviceman ಮಾಜಿ ಸೈನಿಕರ ಸಂಘಕ್ಕೆ ನೂತನ ಕಟ್ಟಡ ನಿರ್ಮಿಸಲು ನಿವೇಶನ ಹಾಗೂ ಸೈನಿಕರ ಕುಟುಂಬಕ್ಕೆ ಮೂಲಸೌಕರ್ಯ ಒದಗಿಸಿಕೊಡಬೇಕು ಎಂದು ಜಿಲ್ಲಾ ಮಾಜಿ ಸೈನಿಕರ ಸಂಘವು ಶಾಸಕ ಹೆಚ್.ಡಿ. ತಮ್ಮಯ್ಯ ಅವರನ್ನು ಒತ್ತಾಯಿಸಿದರು.

ಈ ಸಂಬಂಧ ಮನವಿ ಸಲ್ಲಿಸಿದ ಸಂಘದ ಪದಾಧಿಕಾರಿಗಳು ಮಾಜಿ ಸೈನಿಕರಿಗೆ ನಿವೇಶನ ಒದಗಿಸಿಕೊಡುವ ಮೂಲಕ ಸುಗಮ ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ಮಂಜುನಾಥ್ ಮಾಜಿ ಸೈನಿಕರ ಸಂಘಕ್ಕೆ ತಾತ್ಕಾಲಿಕವಾಗಿ ತಾಲ್ಲೂಕು ಪಂಚಾಯಿತಿಯಲ್ಲಿ ಸಂಘದ ಕಚೇರಿ ಸ್ಥಾಪಿಸಲಾಗಿದೆ. ಆದರೆ ಇನ್ನಿತರೆ ಕಾರ್ಯಕ್ರಮ ನಡೆಸಲು ಸ್ಥಳಾವಕಾಶವಿಲ್ಲದ ಕಾರಣ ನೂತನ ಕಟ್ಟಡ ನಿರ್ಮಿಸಲು ನಿವೇಶನ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

Department Of Ex Serviceman ಈಗಾಗಲೇ ಮಾಜಿ ಸೈನಿಕರಿಗೆ ನಿವೃತ್ತಿ ನಂತರ ಕೃಷಿಗಾಗಿ ಸರ್ಕಾರಿ ಭೂಮಿಯನ್ನು ಗುರುತಿಸಿ ಭೂ ಕಂದಾ ಯ ಕಾಯ್ದೆಯಡಿ ಪ್ರತ್ಯೇಕವಾಗಿ ಕಾಯ್ದಿರಿಸಿ ನಂತರ ಅನುಗುಣವಾಗಿ ಆದ್ಯತೆ ಹಾಗೂ ಅರ್ಹತೆ ಮೇಲೆ ಭೂಮಿಯನ್ನು ಹಂಚಿಕೆ ಮಾಡಿ ಮಂಜೂರು ಮಾಡಲು ಸರ್ಕಾರವು ಆದೇಶ ನೀಡಲಾಗಿದೆ ಎಂದರು.

ಒಂದು ವೇಳೆ ಸರ್ಕಾರಿ ಭೂಮಿ ಲಭ್ಯವಾಗದಿದ್ದಲ್ಲಿ ಗ್ರಾಮಾಂತರ 2400 ಚದರಡಿ ಅಥವಾ ನಗರ ಪ್ರದೇಶದಲ್ಲಿ 1200 ಚದರಡಿ ನಿವೇಶನವನ್ನು ಪ್ರಸ್ತುತ ಜಾರಿಯಲ್ಲಿರುವ ವಸತಿ ಯೋಜನೆಗಳಲ್ಲಿ ಮಾಜಿ ಸೈನಿಕ ರಿಗೆ ಹಂಚಿಕೆ ಮಾಡಲು ಉಲ್ಲೇಖ ಅಧಿಸೂಚನೆಯಲಿ ತಿಳಿಸಲಾಗಿರುವ ಹಿನ್ನೆಲೆಯಲ್ಲಿ ಅದನ್ನು ಜಾರಿಗೊಳಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.

ನಿವೇಶನಕ್ಕೆ ಸಂಬಂಧಿಸಿದಂತೆ ಮಾಜಿ ಸೈನಿಕರ ಕಚೇರಿಯಿಂದ ಹಾಸನದ ಸೈನಿಕರ ಕಲ್ಯಾಣ ಮತ್ತು ಪುನರ್ ವಸತಿ ಮಾಹಿತಿ ಇಲಾಖೆಗೆ ಕಳುಹಿಸಲಾಗಿದೆ. ಈ ಕಚೇರಿಯಿಂದ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತಕ್ಕೆ ಮಾಹಿತಿ ರವಾನಿಸಲಾಗಿದ್ದು ಇದುವರೆಗೂ ನಮ್ಮ ಯಾವ ರೀತಿಯ ಸೂಚನೆಗಳನ್ನು ಬಂದಿರುವುದಿಲ್ಲ ಎಂದರು.

ಕೂಡಲೇ ಮಾಜಿ ಸೈನಿಕರ ಕುಟುಂಬಕ್ಕೆ ಸರ್ಕಾರಿ ಭೂಮಿ ಲಭ್ಯವಾಗದಿದ್ದಲ್ಲಿ ನಿವೇಶನ ಹಾಗೂ ಕಟ್ಟಡ ನಿರ್ಮಿಸಲು ಸೂಕ್ತ ಜಾಗ ಗುರುತಿಸಿಕೊಡಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ನೂತನ ಶಾಸಕರಾಗಿ ಆಯ್ಕೆಗೊಂಡ ಹೆಚ್.ಡಿ.ತಮ್ಮಯ ಅವರಿಗೆ ಮಾಜಿ ಸೈನಿಕರ ಸಂಘದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಹರಿಶ್, ಖಜಾಂಚಿ ಪಾಯಿಸ್, ಕಾರ್ಯದರ್ಶಿ ಗೋಪಾಲಕೃಷ್ಣ, ಸದಸ್ಯರು ಗಳಾದ ಹೆಚ್.ಎಂ.ಮಂಜುನಾಥಸ್ವಾಮಿ, ಪಿ.ನಾಗರಾಜ್, ಪ್ರಾನ್ಸಿಸ್ ಡಿಸೋಜಾ, ಫರ್ನಾಂಡೀಸ್, ವೇಣುಗೋ ಪಾಲ್, ರೇವಣ್ಣ, ರಾಮಚಂದ್ರಶೆಟ್ಟಿ, ರವಿಕುಮಾರ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....

Dr. Raj Kumar ಡಾ.ರಾಜ್ ಅಭಿನಯದ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ

Dr. Raj Kumar ವರನಟ ಡಾ ರಾಜ್ ಕುಮಾರ್ ರವರ ಜನ್ಮದಿನಾಚರಣೆ...

S.N.Chennabasappa ಜನಿವಾರ ತೆಗೆಸಿದ ಪ್ರಕರಣ, ಘಟನೆ‌ಮುಂದೆ ತಪ್ಪಿಸಲು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ವಿಪ್ರ ಸಂಘಟನೆಯ ಮನವಿ

S.N.Chennabasappa ಶಿವಮೊಗ್ಗದ ದುರ್ಗಿಗುಡಿಯ ಶ್ರೀ ರಾಘವೇಂದ್ರ ಸ್ವಾಮಿ ಮಠದಿಂದ ಜಿಲ್ಲಾಧಿಕಾರಿ...