Monday, December 15, 2025
Monday, December 15, 2025

Department Of Women and Child welfare ಬಿಸಿಯೂಟ ತಯಾರಕರ ವೇತನ ಹೆಚ್ಚಿಸಲು ಒತ್ತಾಯ

Date:

Department Of Women and Child welfare ಮುಂದಿನ ಜುಲೈ ತಿಂಗಳಿನಲ್ಲಿ ರಾಜ್ಯ ಸರ್ಕಾರ ಮಂಡಿಸಲಿರುವ ಬಜೆಟ್‌ನಲ್ಲಿ ಬಿಸಿಯೂಟ ತಯಾಕರಿಗೆ ವೇತನವನ್ನು ಆರು ಸಾವಿರ ರೂ. ಹೆಚ್ಚಿಸುವಂತೆ ಒತ್ತಾಯಿಸಿ ಅಕ್ಷರ ದಾಸೋಹ, ಬಿಸಿಯೂಟ ಕಾರ್ಯಕರ್ತೆಯರ ಫೆಡರೇಷನ್ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.

ಈ ಸಂಬಂಧ ಶಿರಸ್ತೇದಾರ್ ಮನು ಅವರ ಮೂಲಕ ಮುಖ್ಯಮಂತ್ರಿಗಳಿಗೆ ಗುರುವಾರ ಮನವಿ ಸಲ್ಲಿಸಿದ ಫೆಡರೇಷನ್ ಜಿಲ್ಲಾ ಸಮಿತಿ ಕಾರ್ಯಕರ್ತೆಯರು ಬಿಸಿಯೂಟ ತಯಾರಕರಿಗೆ ವೇತನವನ್ನು ಹೆಚ್ಚಿಸುವ ಮೂಲಕ ಜೀವನಕ್ಕೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಫೆಡರೇಷನ್ ಜಿಲ್ಲಾಧ್ಯಕ್ಷ ರಘು ಮಾತನಾಡಿ ರಾಜ್ಯ ಮಧ್ಯಾಹ್ನ ಬಿಸಿಯೂಟ ಉಪ ಹಾರ ಯೋಜನೆಯಡಿಯಲ್ಲಿ ರಾಜ್ಯಾದ್ಯಂತ ಇರುವ ಶಾಲೆಗಳಲ್ಲಿ ಅಡಿಗೆ ಕೆಲಸ ನಿರ್ವಹಿಸುತ್ತಿರುವ ಬಿಸಿಯೂಟ ತಯಾರಕರಿಗೆ 2023 ಜುಲೈ ತಿಂಗಳಿನಲ್ಲಿ ಮಂಡಿಸಲಿರುವ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಬಿಸಿಯೂಟ ತಯಾರಕರ ವೇತನವನ್ನು ಹೆಚ್ಚಸಬೇಕೆಂದು ಒತ್ತಾಯಿಸಿದರು.

Department Of Women and Child welfare ರಾಜ್ಯದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಎಐಟಿಯುಸಿ ನಾಯಕರೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪ್ರಿಯಾಂಕ ಗಾಂಧಿಯವರು ಬೆಳಗಾವಿಯಲ್ಲಿ ಚರ್ಚಿಸಿ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಅಧಿಕಾರಕ್ಕೆ ತಂದರೆ ಸರ್ಕಾರವು 6ನೇ ಗ್ಯಾರಂಟಿಯಾಗಿ ಬಿಸಿಯೂಟ ತಯಾರಕರಿಗೆ ಹೀಗಿರುವ ವೇತನವನ್ನು ಬದಲಾಗಿ 06 ಸಾವಿರ ಹೆಚ್ಚಿಸಲಾಗುವುದು ಪ್ರಚಾರದ ವೇದಿಕೆಯಲ್ಲಿ ಘೋಷಿಸಿದ್ದರು ಎಂದರು.

ಆ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬಹುಮತದೊಂದಿಗೆ ಅಧಿಕಾರ ವಹಿಸಿಕೊಂಡು ಪ್ರಣಾಳಿಕೆಯ ಲ್ಲಿ ಆರನೇ ಗ್ಯಾರಂಟಿಯಾಗಿ ಘೋಷಿಸಿದಂತೆ 2023ರ ಜುಲೈ ತಿಂಗಳಲ್ಲಿ ಸರ್ಕಾರವು ಮಂಡಿಸುವ ಬಜೆಟ್‌ನಲ್ಲಿ ಬಿಸಿಯೂಟ ತಯಾರಕರಿಗೆ ವೇತನವನ್ನು ಹೆಚ್ಚಳಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಫೆಡರೇಷನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ್‌ಕುಮಾರ್, ತಾಲ್ಲೂಕು ಅಧ್ಯಕ್ಷೆ ಇಂದುಮತಿ, ಬೀರೂರು ಅಧ್ಯಕ್ಷೆ ಪುಷ್ಪಾವತಿ, ಕಡೂರು ಅಧ್ಯಕ್ಷೆ ಸ್ವಪ್ನ, ಅಜ್ಜಂಪುರ ಅಧ್ಯಕ್ಷೆ ಸುನಂದ, ಮೂಡಿಗೆರೆ ಅಧ್ಯಕ್ಷೆ ಮಮತ, ಸದಸ್ಯರುಗಳಾದ ಕುಸುಮ, ಶಬೀನಾ, ರುಕ್ಮಿಣ , ಭಾಗ್ಯ, ಜ್ಯೋತಿ, ವಿಜಯಮ್ಮ, ಕವಿತಾ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...