Sunday, August 23, 2026
Sunday, August 23, 2026

Kendriya Vidyalaya Shivamogga ಶಿವಮೊಗ್ಗ ಕೇಂದ್ರೀಯ ವಿದ್ಯಾಲಯದಲ್ಲಿ ಎಫ್ ಎಲ್ ಎನ್ ಕುರಿತು ಕಾರ್ಯಾಗಾರ

Date:

Kendriya Vidyalaya Shivamogga ಶಿವಮೊಗ್ಗದ ಕೇಂದ್ರೀಯ ವಿದ್ಯಾಲಯದಲ್ಲಿ ಜೂನ್ 15 ರಂದು 4 ನೇ ಜಿ20 ಶಿಕ್ಷಣ ಕಾರ್ಯಗುಂಪು ಸಭೆಯಡಿಯಲ್ಲಿ ಫೌಂಡೇಷನಲ್ ಲಿಟರಸಿ ಆಂಡ್ ನ್ಯೂಮರಸಿ(ಎಫ್‍ಎಲ್‍ಎನ್) ಕುರಿತು ಆನ್‍ಲೈನ್ ಕಾರ್ಯಾಗಾರವನ್ನು ನಡೆಸಲಾಯಿತು.

ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರು ಕಾರ್ಯಾಗಾರದ ಕುರಿತು ಮಾಹಿತಿ ನೀಡಿ ಎಲ್ಲರನ್ನು ಸ್ವಾಗತಿಸಿದರು. ಕೆವಿ ಯ ಹಿರಿಯ ಪಿಆರ್‍ಟಿ ಗುರುಮೂರ್ತಿ ಎನ್ ರವರು ಜಿ20 ಮತ್ತು ಭಾರತದ ಜಿ20 ಪ್ರೆಸಿಡೆನ್ಸಿಯ ಕುರಿತು ಸಂಕ್ಷಿಪ್ತ ವಿವರಣೆ ನೀಡಿದರು.

ಕೆವಿ ಯ ಹಿರಿಯ ಪಿಆರ್‍ಟಿ ಈರೇಶ ಬಿ, ರವರು ಎನ್‍ಇಪಿ 2020 ಮತ್ತು ಫೌಂಡೇಶನಲ್ ಸಾಕ್ಷರತೆಯಂತಹ ವಿಷಯಗಳ ಕುರಿತು ತಿಳುವಳಿಕೆ ನೀಡಿದರು.

Kendriya Vidyalaya Shivamogga ಬೆಂಗಳೂರಿನ ಮಲ್ಲೇಶ್ವರಂ ಕೇಂದ್ರೀಯ ವಿದ್ಯಾಲಯದ ಮುಖ್ಯೋಪಾಧ್ಯಾಯ ವೆಂಕಟಗಿರಿಯವರು ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಫೌಂಡೇಶನಲ್ ಸಂಖ್ಯಾಶಾಸ್ತ್ರದ ಕುರಿತು ವಿಷಯ ಮಂಡಿಸಿದರು.

ಕೇಂದ್ರೀಯ ವಿದ್ಯಾಲಯದ ಪಾಲಕರು, ಅಕ್ಕಪಕ್ಕದ ಶಾಲೆಗಳ ಶಿಕ್ಷಕರು ಮತ್ತು ಇತರ ಪಾಲುದಾರರು ಸೇರಿದಂತೆ ಒಟ್ಟು 82 ಜನರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
ಪ್ರಶ್ನೋತ್ತರ ಅವಧಿಯೊಂದಿಗೆ ಅಧಿವೇಶನವನ್ನು ಮುಕ್ತಾಯಗೊಳಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...