Monday, May 4, 2026
Monday, May 4, 2026

SIIMS Shivamogga ಜೂನ್ 19 ರಿಂದ ಜಿಲ್ಲೆಯಲ್ಲಿ ಕುಷ್ಠರೋಗ ಪತ್ತೆ ಆಂದೋಲನ

Date:

SIIMS Shivamogga ಶಿವಮೊಗ್ಗ ಜಿಲ್ಲಾ ಕುಷ್ಠರೋಗ ನಿವಾರಣ ಕಾರ್ಯಕ್ರಮದಡಿ ಜೂನ್-19ರಿಂದ ಜುಲೈ-06ರವರೆಗೆ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ ಕಾರ್ಯಕ್ರಮದ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಿಮ್ಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ನಿವಾರಣ ಕಾರ್ಯಕ್ರಮ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜೂನ್ 19 ರಂದು ಬೆಳಗ್ಗೆ 08:00ಕ್ಕೆ ನಗರದ ಶರಾವತಿ ನಗರ-2 ಚಾನಲ್ ಏರಿಯಾ, ಅಶೋಕ ಗ್ರ್ಯಾಂಡ್ ಹೋಟೆಲ್ ಹಿಂಭಾಗದ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕ್ರಮದ ಉದ್ಘಾಟನೆ ಸಮಾರಂಭವನ್ನು ಏರ್ಪಡಿಸಲಾಗಿದೆ.

ಈ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ರಾಜೇಶ್ ಸುರಗೀಹಳ್ಳೀಯವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಡಾ|| ಸೆಲ್ವಮಣ ಆರ್. ಉದ್ಘಾಟಿಸಲಿದ್ದಾರೆ.

SIIMS Shivamogga ಅತಿಥಿಗಳಾಗಿ ಜಿ.ಪಂ. ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಭಾಗವಹಿಸಲಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ. ಮಿಥುನ್ ಕುಮಾರ್, ವಾರ್ತಾಧಿಕಾರಿ ಆರ್. ಮಾರುತಿ, ಸಿಮ್ಸ್ ಜಿಲ್ಲಾ ಶಸ್ತçಚಿಕಿತ್ಸಕ ಡಾ|| ಸಿದ್ದನಗೌಡ ಪಾಟೀಲ್, ಮೆಗ್ಗಾನ್ ವೈದ್ಯಕೀಯ ಅಧೀಕ್ಷಕ ಡಾ|| ಶ್ರೀಧರ್ ಮುಂತಾದ ಅಧಿಕಾರಿ ವರ್ಗದವರು ಉಪಸ್ಥಿತರಿರಲಿದ್ದಾರೆ.

ಜೂನ್-19 ರಿಂದ ಜುಲೈ 06ರವರೆಗೆ ನಡೆಯುವ ಈ ಆಂದೋಲನದಲ್ಲಿ ಸಾರ್ವಜನಿಕರು ತಮ್ಮ ಮನೆಗಳಿಗೆ ಭೇಟಿ ನೀಡುವ ಆರೋಗ್ಯ ಸಹಾಯಕರು, ಆಶಾ ಮತ್ತು ಸ್ವಯಂ ಸೇವಕರಿಂದ ಪರೀಕ್ಷಿಸಿಕೊಂಡು ಸಹಕರಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಉಚಿತ ಸಹಾಯವಾಣ 104ಕ್ಕೆ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...