Sunday, August 2, 2026
Sunday, August 2, 2026

SIIMS Shivamogga ಜೂನ್ 19 ರಿಂದ ಜಿಲ್ಲೆಯಲ್ಲಿ ಕುಷ್ಠರೋಗ ಪತ್ತೆ ಆಂದೋಲನ

Date:

SIIMS Shivamogga ಶಿವಮೊಗ್ಗ ಜಿಲ್ಲಾ ಕುಷ್ಠರೋಗ ನಿವಾರಣ ಕಾರ್ಯಕ್ರಮದಡಿ ಜೂನ್-19ರಿಂದ ಜುಲೈ-06ರವರೆಗೆ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ ಕಾರ್ಯಕ್ರಮದ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಿಮ್ಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ನಿವಾರಣ ಕಾರ್ಯಕ್ರಮ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜೂನ್ 19 ರಂದು ಬೆಳಗ್ಗೆ 08:00ಕ್ಕೆ ನಗರದ ಶರಾವತಿ ನಗರ-2 ಚಾನಲ್ ಏರಿಯಾ, ಅಶೋಕ ಗ್ರ್ಯಾಂಡ್ ಹೋಟೆಲ್ ಹಿಂಭಾಗದ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕ್ರಮದ ಉದ್ಘಾಟನೆ ಸಮಾರಂಭವನ್ನು ಏರ್ಪಡಿಸಲಾಗಿದೆ.

ಈ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ರಾಜೇಶ್ ಸುರಗೀಹಳ್ಳೀಯವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಡಾ|| ಸೆಲ್ವಮಣ ಆರ್. ಉದ್ಘಾಟಿಸಲಿದ್ದಾರೆ.

SIIMS Shivamogga ಅತಿಥಿಗಳಾಗಿ ಜಿ.ಪಂ. ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಭಾಗವಹಿಸಲಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ. ಮಿಥುನ್ ಕುಮಾರ್, ವಾರ್ತಾಧಿಕಾರಿ ಆರ್. ಮಾರುತಿ, ಸಿಮ್ಸ್ ಜಿಲ್ಲಾ ಶಸ್ತçಚಿಕಿತ್ಸಕ ಡಾ|| ಸಿದ್ದನಗೌಡ ಪಾಟೀಲ್, ಮೆಗ್ಗಾನ್ ವೈದ್ಯಕೀಯ ಅಧೀಕ್ಷಕ ಡಾ|| ಶ್ರೀಧರ್ ಮುಂತಾದ ಅಧಿಕಾರಿ ವರ್ಗದವರು ಉಪಸ್ಥಿತರಿರಲಿದ್ದಾರೆ.

ಜೂನ್-19 ರಿಂದ ಜುಲೈ 06ರವರೆಗೆ ನಡೆಯುವ ಈ ಆಂದೋಲನದಲ್ಲಿ ಸಾರ್ವಜನಿಕರು ತಮ್ಮ ಮನೆಗಳಿಗೆ ಭೇಟಿ ನೀಡುವ ಆರೋಗ್ಯ ಸಹಾಯಕರು, ಆಶಾ ಮತ್ತು ಸ್ವಯಂ ಸೇವಕರಿಂದ ಪರೀಕ್ಷಿಸಿಕೊಂಡು ಸಹಕರಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಉಚಿತ ಸಹಾಯವಾಣ 104ಕ್ಕೆ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...